<p><strong>ಬಾಗಲಕೋಟೆ: </strong>'ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ತಿದ್ದುಪಡಿಯಿಂದ ಹೊಸದಾಗಿ ಕೃಷಿ ಮಾಡುವವರಿಗೆ, ಕೈಗಾರಿಕೆ ಸ್ಥಾಪಿಸುವವರಿಗೆ ಅವಕಾಶ ಆಗಲಿದೆ' ಎಂದುಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆಯ ನಿಯಮ 79 ಉಲ್ಲಂಘಿಸಿದ ಆರೋಪದ ಮೇಲೆ ಇಲ್ಲಿಯವರೆಗೆ 1.80 ಲಕ್ಷ ಎಕರೆ ಭೂಮಿ ಖರೀದಿ ನಂತರ ವಿವಾದಕ್ಕೆ ಗ್ರಾಸವಾಗಿದೆ. ದಶಕಗಳ ಕಾಲ ಉಪವಿಭಾಗಾಧಿಕಾರಿ/ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ ಎಂದರು.</p>.<p>’ಇಲ್ಲಿಯವರೆಗೆ ಬರೀ 54 ಎಕರೆ ಮಾತ್ರ ಭೂಮಿ ವಾಪಸ್ ಪಡೆಯಲು ಆದೇಶಿಸಲಾಗಿದೆ. ಅದಕ್ಕೂ ಸಂಬಂಧಿಸಿದವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಸಿಕ್ಕಾಪಟ್ಟೆ ಭ್ರಷ್ಟಾಚಾರ ನಡೆಸಲು ಈ ನಿಯಮಾವಳಿ ಅವಕಾಶ ಮಾಡಿಕೊಟ್ಟಿತ್ತು. ಸಾರ್ವಜನಿಕರಿಗೂ ಇದು ಕಿರಿಕಿರಿಯಾಗಿತ್ತು. ಕಾಯ್ದೆಯ ತಿದ್ದುಪಡಿ ಅದನ್ನು ತಪ್ಪಿಸಿದೆ‘ ಎಂದು ಶೆಟ್ಟರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>'ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ತಿದ್ದುಪಡಿಯಿಂದ ಹೊಸದಾಗಿ ಕೃಷಿ ಮಾಡುವವರಿಗೆ, ಕೈಗಾರಿಕೆ ಸ್ಥಾಪಿಸುವವರಿಗೆ ಅವಕಾಶ ಆಗಲಿದೆ' ಎಂದುಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆಯ ನಿಯಮ 79 ಉಲ್ಲಂಘಿಸಿದ ಆರೋಪದ ಮೇಲೆ ಇಲ್ಲಿಯವರೆಗೆ 1.80 ಲಕ್ಷ ಎಕರೆ ಭೂಮಿ ಖರೀದಿ ನಂತರ ವಿವಾದಕ್ಕೆ ಗ್ರಾಸವಾಗಿದೆ. ದಶಕಗಳ ಕಾಲ ಉಪವಿಭಾಗಾಧಿಕಾರಿ/ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ ಎಂದರು.</p>.<p>’ಇಲ್ಲಿಯವರೆಗೆ ಬರೀ 54 ಎಕರೆ ಮಾತ್ರ ಭೂಮಿ ವಾಪಸ್ ಪಡೆಯಲು ಆದೇಶಿಸಲಾಗಿದೆ. ಅದಕ್ಕೂ ಸಂಬಂಧಿಸಿದವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ಸಿಕ್ಕಾಪಟ್ಟೆ ಭ್ರಷ್ಟಾಚಾರ ನಡೆಸಲು ಈ ನಿಯಮಾವಳಿ ಅವಕಾಶ ಮಾಡಿಕೊಟ್ಟಿತ್ತು. ಸಾರ್ವಜನಿಕರಿಗೂ ಇದು ಕಿರಿಕಿರಿಯಾಗಿತ್ತು. ಕಾಯ್ದೆಯ ತಿದ್ದುಪಡಿ ಅದನ್ನು ತಪ್ಪಿಸಿದೆ‘ ಎಂದು ಶೆಟ್ಟರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>