ಶಕ್ತಿ ಪ್ರದರ್ಶನ: ಮುಂದಿನ ವಿಧಾನಸಭೆ ಚುನಾವಣೆಯ ಟಿಕೆಟ್ ಅಂತಿಮಗೊಳಿಸುವಲ್ಲಿ ಸಿದ್ದರಾಮಯ್ಯ ಅವರದ್ದು ನಿರ್ಣಾಯಕ ಪಾತ್ರ ಇರಲಿದೆ. ಜತೆಗೆ ಸರ್ಕಾರ ಬಂದರೆ ಮುಖ್ಯಮಂತ್ರಿಯೂ ಆಗುವ ಸಾಧ್ಯತೆಗಳಿವೆ. ಆದ್ದರಿಂದ ಅವರ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದೊಯ್ಯುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು ಮುಂದಾಗಿದ್ದಾರೆ.