<p><strong>ಬಾಗಲಕೋಟೆ:</strong> ‘ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ಬೇರೆ ಜಾತಿ, ಧರ್ಮದವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಜಿಲ್ಲೆಯ ಬಂಡಿಗಣಿ ಗ್ರಾಮದಲ್ಲಿ ಬಸವಗೋಪಾಲ ನೀಲಮಾಣಿಕ ಮಠದಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಾಣಿಗಳನ್ನು ಪ್ರೀತಿಸುತ್ತೇವೆ. ಆದರೆ, ಮನುಷ್ಯರನ್ನು ದ್ವೇಷಿಸುತ್ತೇವೆ. ಪ್ರೀತಿಸುವುದು ಎಲ್ಲ ಧರ್ಮಗಳ ಮೂಲಮಂತ್ರವಾಗಿದ್ದು, ಅದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಇಸ್ಲಾಂ, ಹಿಂದೂಗಳ ರಕ್ತ ಬೇರೆ ಇರುತ್ತದೆಯೇ? ಕಾಯಿಲೆ ಬಿದ್ದಾಗ ಯಾರದ್ದೇ ರಕ್ತ ಕೊಟ್ಟರೂ ತೆಗೆದುಕೊಳ್ಳುತ್ತೇವೆ. ಆಮೇಲೆ ಯಾವ ಜಾತಿ ಎನ್ನುತ್ತೇವೆ. ಇದು ನ್ಯಾಯವೇ? ಧರ್ಮವೇ?’ ಎಂದು ಪ್ರಶ್ನಿಸಿದರು.</p>.<p>‘ಜಾತಿ ವ್ಯವಸ್ಥೆಯಿಂದಾಗಿ ಇನ್ನೂ ಗುಲಾಮಗಿರಿ ಉಳಿದಿದೆ. ಮೇಲು ವರ್ಗದವರಾದರೆ ಗೌರವ ನೀಡುತ್ತಾರೆ. ಕೆಳ ವರ್ಗದವರಾದರೆ ಏಕ ವಚನದಲ್ಲಿ ಮಾತನಾಡುತ್ತಾರೆ. ಇದು ಗುಲಾಮಗಿರಿ ಸಂಕೇತ. ಮೌಢ್ಯ, ಕಂದಾಚಾರ ಆಚರಣೆ ಮಾಡುವುದಾದರೆ ವಿದ್ಯಾವಂತರಾಗಿ ಪ್ರಯೋಜನವಿಲ್ಲ. ಈ ವ್ಯವಸ್ಥೆಯನ್ನು ಕಿತ್ತು ಹಾಕಬೇಕು’ ಎಂದು ಮನವಿ ಮಾಡಿದರು.</p>.<p>‘ಚಲನೆ ಇಲ್ಲದ ಸಮಾಜವಿದೆ. ಜಾತಿ ರಹಿತ ಸಮಾಜ ನಿರ್ಮಾಣವಾಗಿಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಸಮಾನತೆ ಹೋಗುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ. ಹೀಗೇ ಮುಂದುವರಿದರೆ ಒಂದು ದಿನ ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಎಚ್ಚರಿಸಿದ್ದರು’ ಎಂದು ಸ್ಮರಿಸಿಕೊಂಡರು.</p>.<p>‘ಸಂಪತ್ತನ್ನು ಎಲ್ಲರೂ ಹಂಚಿಕೊಂಡು ತಿನ್ನಬೇಕು. ಸಮಾಜ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದವನು ಸನಾತನ ಧರ್ಮಕ್ಕೆ ಸೇರಿದವನು. ಎಲ್ಲ ಧರ್ಮಗಳು ಎಲ್ಲರನ್ನೂ ಪ್ರೀತಿಸಿ ಎಂದು ಹೇಳಿವೆ. ಜನರನ್ನು ಪ್ರೀತಿಸೋಣ’ ಎಂದರು.</p>.<p>‘ನಾನು ಓದುತ್ತಿರುವಾಗ ಬಾವಿ ನೀರು ತರಲು ಹೋದರೆ ಗೇಟು ಹಾಕಿರುತ್ತಿದ್ದರು. ಬುದ್ಧ, ಬಸವಣ್ಣ, ಅಂಬೇಡ್ಕರ್ ಬಂದರೂ ಜಾತಿ ವ್ಯವಸ್ಥೆ ಹೋಗಿಲ್ಲ. ಸಮ ಸಮಾಜದ ಮಂತ್ರ ಹೇಳಿದ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಯಾರನ್ನೂ ಮೆಚ್ಚಿಸಲಿಕ್ಕೆ ಮಾಡಿಲ್ಲ’ ಎಂದರು.</p>.<div><blockquote>ಸಮಬಾಳು ಸಮಪಾಲು ಎನ್ನುವ ನೀತಿ ಅನುಸರಿಸುತ್ತಿರುವ ಸಿದ್ದರಾಮಯ್ಯ ಅವರ ಸಾಧನೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಬೇಕು </blockquote><span class="attribution">ಸಾಧು ಕೋಕಿಲ ಅಧ್ಯಕ್ಷ ಕರ್ನಾಟಕ ಚಲನಚಿತ್ರ ಮಂಡಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ‘ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ಬೇರೆ ಜಾತಿ, ಧರ್ಮದವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಜಿಲ್ಲೆಯ ಬಂಡಿಗಣಿ ಗ್ರಾಮದಲ್ಲಿ ಬಸವಗೋಪಾಲ ನೀಲಮಾಣಿಕ ಮಠದಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಾಣಿಗಳನ್ನು ಪ್ರೀತಿಸುತ್ತೇವೆ. ಆದರೆ, ಮನುಷ್ಯರನ್ನು ದ್ವೇಷಿಸುತ್ತೇವೆ. ಪ್ರೀತಿಸುವುದು ಎಲ್ಲ ಧರ್ಮಗಳ ಮೂಲಮಂತ್ರವಾಗಿದ್ದು, ಅದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>‘ಇಸ್ಲಾಂ, ಹಿಂದೂಗಳ ರಕ್ತ ಬೇರೆ ಇರುತ್ತದೆಯೇ? ಕಾಯಿಲೆ ಬಿದ್ದಾಗ ಯಾರದ್ದೇ ರಕ್ತ ಕೊಟ್ಟರೂ ತೆಗೆದುಕೊಳ್ಳುತ್ತೇವೆ. ಆಮೇಲೆ ಯಾವ ಜಾತಿ ಎನ್ನುತ್ತೇವೆ. ಇದು ನ್ಯಾಯವೇ? ಧರ್ಮವೇ?’ ಎಂದು ಪ್ರಶ್ನಿಸಿದರು.</p>.<p>‘ಜಾತಿ ವ್ಯವಸ್ಥೆಯಿಂದಾಗಿ ಇನ್ನೂ ಗುಲಾಮಗಿರಿ ಉಳಿದಿದೆ. ಮೇಲು ವರ್ಗದವರಾದರೆ ಗೌರವ ನೀಡುತ್ತಾರೆ. ಕೆಳ ವರ್ಗದವರಾದರೆ ಏಕ ವಚನದಲ್ಲಿ ಮಾತನಾಡುತ್ತಾರೆ. ಇದು ಗುಲಾಮಗಿರಿ ಸಂಕೇತ. ಮೌಢ್ಯ, ಕಂದಾಚಾರ ಆಚರಣೆ ಮಾಡುವುದಾದರೆ ವಿದ್ಯಾವಂತರಾಗಿ ಪ್ರಯೋಜನವಿಲ್ಲ. ಈ ವ್ಯವಸ್ಥೆಯನ್ನು ಕಿತ್ತು ಹಾಕಬೇಕು’ ಎಂದು ಮನವಿ ಮಾಡಿದರು.</p>.<p>‘ಚಲನೆ ಇಲ್ಲದ ಸಮಾಜವಿದೆ. ಜಾತಿ ರಹಿತ ಸಮಾಜ ನಿರ್ಮಾಣವಾಗಿಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಅಸಮಾನತೆ ಹೋಗುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ. ಹೀಗೇ ಮುಂದುವರಿದರೆ ಒಂದು ದಿನ ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಎಚ್ಚರಿಸಿದ್ದರು’ ಎಂದು ಸ್ಮರಿಸಿಕೊಂಡರು.</p>.<p>‘ಸಂಪತ್ತನ್ನು ಎಲ್ಲರೂ ಹಂಚಿಕೊಂಡು ತಿನ್ನಬೇಕು. ಸಮಾಜ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದವನು ಸನಾತನ ಧರ್ಮಕ್ಕೆ ಸೇರಿದವನು. ಎಲ್ಲ ಧರ್ಮಗಳು ಎಲ್ಲರನ್ನೂ ಪ್ರೀತಿಸಿ ಎಂದು ಹೇಳಿವೆ. ಜನರನ್ನು ಪ್ರೀತಿಸೋಣ’ ಎಂದರು.</p>.<p>‘ನಾನು ಓದುತ್ತಿರುವಾಗ ಬಾವಿ ನೀರು ತರಲು ಹೋದರೆ ಗೇಟು ಹಾಕಿರುತ್ತಿದ್ದರು. ಬುದ್ಧ, ಬಸವಣ್ಣ, ಅಂಬೇಡ್ಕರ್ ಬಂದರೂ ಜಾತಿ ವ್ಯವಸ್ಥೆ ಹೋಗಿಲ್ಲ. ಸಮ ಸಮಾಜದ ಮಂತ್ರ ಹೇಳಿದ ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಯಾರನ್ನೂ ಮೆಚ್ಚಿಸಲಿಕ್ಕೆ ಮಾಡಿಲ್ಲ’ ಎಂದರು.</p>.<div><blockquote>ಸಮಬಾಳು ಸಮಪಾಲು ಎನ್ನುವ ನೀತಿ ಅನುಸರಿಸುತ್ತಿರುವ ಸಿದ್ದರಾಮಯ್ಯ ಅವರ ಸಾಧನೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಬೇಕು </blockquote><span class="attribution">ಸಾಧು ಕೋಕಿಲ ಅಧ್ಯಕ್ಷ ಕರ್ನಾಟಕ ಚಲನಚಿತ್ರ ಮಂಡಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>