<p><strong>ಬಾಗಲಕೋಟೆ:</strong> ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ. ಕೇಂದ್ರ ಸರ್ಕಾರದಿಂದ ಬಿಡಿಗಾಸು ನೆರವು ದೊರೆತಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.<br /><br />ಬಾದಾಮಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಪ್ರಧಾನಿ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿರಲಿಲ್ಲ. ಈ ವರ್ಷ ಇನ್ನೂ ಮಳೆ ಬೀಳುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹದಿಂದ ಬಹಳಷ್ಟು ಹಾನಿಯಾಗಿದೆ. ಸಂಕಷ್ಟಕ್ಕೆ ತುತ್ತಾದ ಜನರು ಅನ್ನ-ಆಹಾರಕ್ಕೆ ಹಾಹಾಕಾರ ಪಡುತ್ತಿದ್ದಾರೆ. ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಪರಿಹಾರ ಕೊಡುವ ಮನಸ್ಸು ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಳೆದ ವರ್ಷದಷ್ಟು ಭೀಕರ ಪ್ರವಾಹ ಇಲ್ಲದಿದ್ದರೂ ಈ ವರ್ಷವೂ ಪ್ರವಾಹ ಬಂದಿದೆ. ಮನೆ ಹಾನಿಗಿಂತ ಬೆಳೆ ಹಾನಿ ಜಾಸ್ತಿಯಾಗಿದೆ. ಸರ್ಕಾರ ಜಿಲ್ಲಾಧಿಕಾರಿಗಳ ಖಾತೆಗೆ ಹಣ ಬಿಡುಗಡೆ ಮಾಡಿರುವುದಾಗಿ ಹೇಳುತ್ತಿದೆ. ಆದರೆ ಇನ್ನೂ ಕೂಡಾ ಸಂತ್ರಸ್ತರಿಗೆ ಪರಿಹಾರ ಸರಿಯಾಗಿ ತಲುಪಿಲ್ಲ ಎಂದರು.</p>.<p>ಕಳೆದ ವರ್ಷ ಪ್ರವಾಹದಿಂದ ನನ್ನ ಪ್ರಕಾರ ₹1 ಲಕ್ಷ ಕೋಟಿ ಮೊತ್ತದ ಹಾನಿ ಸಂಭವಿಸಿದೆ. ರಾಜ್ಯ ಸರ್ಕಾರ ₹35 ಸಾವಿರ ಕೋಟಿ ಮೊತ್ತದ ಹಾನಿಯಾಗಿದೆ ಎಂದು ಕೇಂದ್ರಕ್ಕೆ ವರದಿ ಕೊಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಬರೀ ₹1652 ಕೋಟಿ ಕೊಟ್ಟಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಉತ್ತರ ಕರ್ನಾಟಕದ ನೆರೆಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲ್ಲ. ಕೇಂದ್ರ ಸರ್ಕಾರದಿಂದ ಬಿಡಿಗಾಸು ನೆರವು ದೊರೆತಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.<br /><br />ಬಾದಾಮಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಪ್ರಧಾನಿ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿರಲಿಲ್ಲ. ಈ ವರ್ಷ ಇನ್ನೂ ಮಳೆ ಬೀಳುತ್ತಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹದಿಂದ ಬಹಳಷ್ಟು ಹಾನಿಯಾಗಿದೆ. ಸಂಕಷ್ಟಕ್ಕೆ ತುತ್ತಾದ ಜನರು ಅನ್ನ-ಆಹಾರಕ್ಕೆ ಹಾಹಾಕಾರ ಪಡುತ್ತಿದ್ದಾರೆ. ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಪರಿಹಾರ ಕೊಡುವ ಮನಸ್ಸು ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಳೆದ ವರ್ಷದಷ್ಟು ಭೀಕರ ಪ್ರವಾಹ ಇಲ್ಲದಿದ್ದರೂ ಈ ವರ್ಷವೂ ಪ್ರವಾಹ ಬಂದಿದೆ. ಮನೆ ಹಾನಿಗಿಂತ ಬೆಳೆ ಹಾನಿ ಜಾಸ್ತಿಯಾಗಿದೆ. ಸರ್ಕಾರ ಜಿಲ್ಲಾಧಿಕಾರಿಗಳ ಖಾತೆಗೆ ಹಣ ಬಿಡುಗಡೆ ಮಾಡಿರುವುದಾಗಿ ಹೇಳುತ್ತಿದೆ. ಆದರೆ ಇನ್ನೂ ಕೂಡಾ ಸಂತ್ರಸ್ತರಿಗೆ ಪರಿಹಾರ ಸರಿಯಾಗಿ ತಲುಪಿಲ್ಲ ಎಂದರು.</p>.<p>ಕಳೆದ ವರ್ಷ ಪ್ರವಾಹದಿಂದ ನನ್ನ ಪ್ರಕಾರ ₹1 ಲಕ್ಷ ಕೋಟಿ ಮೊತ್ತದ ಹಾನಿ ಸಂಭವಿಸಿದೆ. ರಾಜ್ಯ ಸರ್ಕಾರ ₹35 ಸಾವಿರ ಕೋಟಿ ಮೊತ್ತದ ಹಾನಿಯಾಗಿದೆ ಎಂದು ಕೇಂದ್ರಕ್ಕೆ ವರದಿ ಕೊಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಬರೀ ₹1652 ಕೋಟಿ ಕೊಟ್ಟಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>