ಜೂನ್ 4ರಂದು ಬೆಳಿಗ್ಗೆ 9.30ಕ್ಕೆ ಸಾರ್ವಜನಿರ ಭೇಟಿ ಮಾಡಿ, 10.30ಕ್ಕೆ ಮಿನಿವಿಧಾನಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವರು. ಇತ್ತೀಚೆಗೆ ಕೋವಿಡ್–19 ಸೋಂಕಿನಿಂದ ತತ್ತರಿಸಿದ್ದ ಢಾಣಕಶಿರೂರು ಗ್ರಾಮಕ್ಕೆ ಬೆಳಿಗ್ಗೆ 11.30ಕ್ಕೆ ಭೇಟಿ ನೀಡುವರು. ನಂತರ ಹೊಸೂರು ಹಾಗೂ ನಂದಿಕೇಶ್ವರ ಗ್ರಾಮಗಳಿಗೆ ಭೇಟಿ ನೀಡಿ ಇತ್ತೀಚಿಗೆ ಸಿಡಿಲು ಬಡಿದು ಮೃತಪಟ್ಟವರ ಮನೆಗಳಿಗೆ, ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವರು. ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಅವರ ಮನೆಗೂ ಭೇಟಿ ನೀಡುವರು.