<figcaption>""</figcaption>.<p><strong>ಬಾಗಲಕೋಟೆ: </strong>ಯಾರದ್ದೋ ತ್ಯಾಗದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಇಂದು ಒಂದು ಜಾತಿ, ವರ್ಗಕ್ಕೆ ಮೀಸಲಿರುವ ಸರ್ಕಾರವಾಗಿ ಮಾರ್ಪಟ್ಟಿದೆ. ಇದನ್ನು ಬಿಜೆಪಿಯವರು, ಆರ್ಎಸ್ಎಸ್ನವರು, ರಾಜ್ಯದ ಜನರು ಗಮನಿಸಬೇಕು ಎಂದು ಕನಕ ಗುರುಪೀಠ ತಿಂಥಿಣಿ ಬ್ರಿಜ್ ಶಾಖೆಯ ಸಿದ್ದರಾಮಪುರಿ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ನವನಗರದ ಕಾಳಿದಾಸ ಮೈದಾನದಲ್ಲಿ ಕುರುಬರ ಎಸ್ಟಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯವರು ಯಾಕೆ ಕುರುಬರಿಗೆ ಟಿಕೆಟ್ ಕೊಡಬಾರದು. ಬರೀ ಅದೇ ವರ್ಗಕ್ಕೆ ಕೊಡಬೇಕು ಎಂಬ ನಿಯಮವಿದೆಯೇ ಎಂದು ಪ್ರಶ್ನಿಸಿದರು.</p>.<p>ಕುರುಬರನ್ನು ಎಸ್ಟಿಗೆ ಸೇರಿಸಬೇಕು ಎಂಬುದು ಮನವಿ ಅಲ್ಲ. ಅದು ಆಗ್ರಹ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕುರುಬರ ಋಣದಲ್ಲಿವೆ. ಅದನ್ನು ಮರೆಯಬಾರದು ಎಂದರು.</p>.<p>ಈ ಸಮಾವೇಶ ಬಿಜೆಪಿಯ ಪರ ಅಲ್ಲ. ಸಮಾವೇಶಕ್ಕೆ ಬಾರದವರ ವಿರುದ್ಧವೂ ಅಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಗೈರು ಹಾಜರಿ ಪ್ರಸ್ತಾಪಿಸಿದರು.</p>.<p><strong>ಈಶ್ವರಪ್ಪ ಅಸಮಾಧಾನ:</strong> ಸ್ವಾಮೀಜಿ ಭಾಷಣ ಮುಗಿಸಿ ತಮ್ಮ ಸ್ಥಾನಕ್ಕೆ ಮರಳುತ್ತಿದ್ದಂತೆಯೇ ಹತ್ತಿರ ಬಂದು ಕುಳಿತ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.</p>.<p><strong>ರಕ್ತ ಸುರಿಸಲಿದ್ದೇವೆ:</strong> ಸಚಿವ ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ ಮಾತನಾಡಿ, ಇಲ್ಲಿಯವರೆಗಿನ ಹೋರಾಟ ಬರೀ ಸ್ಯಾಂಪಲ್ ಮಾತ್ರ. ಅಗತ್ಯ ಬಿದ್ದರೆ ರಕ್ತ ಸುರಿಸಿಯಾದರೂ ಎಸ್ಟಿ ಮೀಸಲಾತಿಗೆ ಸಮುದಾಯವನ್ನು ಸೇರಿಸಲು ಬದ್ಧ ಎಂದು ಘೋಷಿಸಿದರು.</p>.<div style="text-align:center"><figcaption><strong>ಸಿದ್ದರಾಮಪುರಿ ಸ್ವಾಮೀಜಿ ಅವರ ಭಾಷಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬಾಗಲಕೋಟೆ: </strong>ಯಾರದ್ದೋ ತ್ಯಾಗದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಇಂದು ಒಂದು ಜಾತಿ, ವರ್ಗಕ್ಕೆ ಮೀಸಲಿರುವ ಸರ್ಕಾರವಾಗಿ ಮಾರ್ಪಟ್ಟಿದೆ. ಇದನ್ನು ಬಿಜೆಪಿಯವರು, ಆರ್ಎಸ್ಎಸ್ನವರು, ರಾಜ್ಯದ ಜನರು ಗಮನಿಸಬೇಕು ಎಂದು ಕನಕ ಗುರುಪೀಠ ತಿಂಥಿಣಿ ಬ್ರಿಜ್ ಶಾಖೆಯ ಸಿದ್ದರಾಮಪುರಿ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ನವನಗರದ ಕಾಳಿದಾಸ ಮೈದಾನದಲ್ಲಿ ಕುರುಬರ ಎಸ್ಟಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯವರು ಯಾಕೆ ಕುರುಬರಿಗೆ ಟಿಕೆಟ್ ಕೊಡಬಾರದು. ಬರೀ ಅದೇ ವರ್ಗಕ್ಕೆ ಕೊಡಬೇಕು ಎಂಬ ನಿಯಮವಿದೆಯೇ ಎಂದು ಪ್ರಶ್ನಿಸಿದರು.</p>.<p>ಕುರುಬರನ್ನು ಎಸ್ಟಿಗೆ ಸೇರಿಸಬೇಕು ಎಂಬುದು ಮನವಿ ಅಲ್ಲ. ಅದು ಆಗ್ರಹ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕುರುಬರ ಋಣದಲ್ಲಿವೆ. ಅದನ್ನು ಮರೆಯಬಾರದು ಎಂದರು.</p>.<p>ಈ ಸಮಾವೇಶ ಬಿಜೆಪಿಯ ಪರ ಅಲ್ಲ. ಸಮಾವೇಶಕ್ಕೆ ಬಾರದವರ ವಿರುದ್ಧವೂ ಅಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಗೈರು ಹಾಜರಿ ಪ್ರಸ್ತಾಪಿಸಿದರು.</p>.<p><strong>ಈಶ್ವರಪ್ಪ ಅಸಮಾಧಾನ:</strong> ಸ್ವಾಮೀಜಿ ಭಾಷಣ ಮುಗಿಸಿ ತಮ್ಮ ಸ್ಥಾನಕ್ಕೆ ಮರಳುತ್ತಿದ್ದಂತೆಯೇ ಹತ್ತಿರ ಬಂದು ಕುಳಿತ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.</p>.<p><strong>ರಕ್ತ ಸುರಿಸಲಿದ್ದೇವೆ:</strong> ಸಚಿವ ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ ಮಾತನಾಡಿ, ಇಲ್ಲಿಯವರೆಗಿನ ಹೋರಾಟ ಬರೀ ಸ್ಯಾಂಪಲ್ ಮಾತ್ರ. ಅಗತ್ಯ ಬಿದ್ದರೆ ರಕ್ತ ಸುರಿಸಿಯಾದರೂ ಎಸ್ಟಿ ಮೀಸಲಾತಿಗೆ ಸಮುದಾಯವನ್ನು ಸೇರಿಸಲು ಬದ್ಧ ಎಂದು ಘೋಷಿಸಿದರು.</p>.<div style="text-align:center"><figcaption><strong>ಸಿದ್ದರಾಮಪುರಿ ಸ್ವಾಮೀಜಿ ಅವರ ಭಾಷಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>