<p><strong>ಬಾಗಲಕೋಟೆ:</strong> ಪೊಲೀಸರು ಹಾಗೂ ಪತ್ರಕರ್ತರು ಎಂದು ಸುಳ್ಳು ಹೇಳಿಕೊಂಡು ಬೀಳಗಿ ತಾಲ್ಲೂಕಿನ ಸುನಗ ಗ್ರಾಮಕ್ಕೆ ಇತ್ತೀಚೆಗೆ ರಾತ್ರಿ ವೇಳೆ ತೆರಳಿ ಗ್ರಾಮಸ್ಥರನ್ನು ಬೆದರಿಸಿ ಹಣ ವಸೂಲಿ ಮಾಡಲು ಮುಂದಾದ ವಂಚಕರ ತಂಡವನ್ನು ಜಿಲ್ಲೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಸುನಗ ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂದು ಆರೋಪಿಗಳು ಪೊಲೀಸರು, ಪತ್ರಕರ್ತರ ಸೋಗಿನಲ್ಲಿ ದಾಳಿ ಮಾಡಿದವರಂತೆ ವರ್ತಿಸಿದ್ದರು. ಈ ವೇಳೆ ಗ್ರಾಮದ ಕೆಲವರಿಂದ ಹಣಕ್ಕೆ ಬೇಡಿಕೆ ಸಲ್ಲಿಸಿದ್ದರು.</p>.<p>ಅರೋಪಿಗಳ ವರ್ತನೆಯಿಂದ ಶಂಕೆಗೊಂಡ ಗ್ರಾಮಸ್ಥರು, ಬೀಳಗಿ ಪೊಲೀಸರನ್ನು ಸಂಪರ್ಕಿಸಿದ್ದರು. ಆಗ ಇವರು ನಕಲಿ ಪೊಲೀಸರು ಎಂದು ತಿಳಿದು ಗ್ರಾಮಸ್ಥರು ಹಿಡಿದು ಹೊಡೆದಿದ್ದರು.ಆ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. </p>.<p>ನಂತರ ಬ್ಲಾಕ್ ಮೇಲ್ ಗೆ ಒಳಗಾದವರು ನೀಡಿದ ದೂರಿನ ಅನ್ವಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>'ಅದರನ್ವಯ ರಾಜೇಸಾಬ್ ಮುಲ್ಲಾ, ಸುರೇಶ ಗಲಗಲಿ, ಮಹಾದೇವ ಮದ್ದಿಮನಿ, ಮುತ್ತುರಾಜ್ ದೊಡ್ಡಮನಿ (ಭಜಂತ್ರಿ), ಯಶವಂತ ಸದಾಶಿವ ಕಲೂತಿ, ಬನಹಟ್ಟಿಯ ಅಕ್ಬರ್ ಪಣಿಬಂದ ಎಂಬುವವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಪೊಲೀಸರು ಹಾಗೂ ಪತ್ರಕರ್ತರು ಎಂದು ಸುಳ್ಳು ಹೇಳಿಕೊಂಡು ಬೀಳಗಿ ತಾಲ್ಲೂಕಿನ ಸುನಗ ಗ್ರಾಮಕ್ಕೆ ಇತ್ತೀಚೆಗೆ ರಾತ್ರಿ ವೇಳೆ ತೆರಳಿ ಗ್ರಾಮಸ್ಥರನ್ನು ಬೆದರಿಸಿ ಹಣ ವಸೂಲಿ ಮಾಡಲು ಮುಂದಾದ ವಂಚಕರ ತಂಡವನ್ನು ಜಿಲ್ಲೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಸುನಗ ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂದು ಆರೋಪಿಗಳು ಪೊಲೀಸರು, ಪತ್ರಕರ್ತರ ಸೋಗಿನಲ್ಲಿ ದಾಳಿ ಮಾಡಿದವರಂತೆ ವರ್ತಿಸಿದ್ದರು. ಈ ವೇಳೆ ಗ್ರಾಮದ ಕೆಲವರಿಂದ ಹಣಕ್ಕೆ ಬೇಡಿಕೆ ಸಲ್ಲಿಸಿದ್ದರು.</p>.<p>ಅರೋಪಿಗಳ ವರ್ತನೆಯಿಂದ ಶಂಕೆಗೊಂಡ ಗ್ರಾಮಸ್ಥರು, ಬೀಳಗಿ ಪೊಲೀಸರನ್ನು ಸಂಪರ್ಕಿಸಿದ್ದರು. ಆಗ ಇವರು ನಕಲಿ ಪೊಲೀಸರು ಎಂದು ತಿಳಿದು ಗ್ರಾಮಸ್ಥರು ಹಿಡಿದು ಹೊಡೆದಿದ್ದರು.ಆ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. </p>.<p>ನಂತರ ಬ್ಲಾಕ್ ಮೇಲ್ ಗೆ ಒಳಗಾದವರು ನೀಡಿದ ದೂರಿನ ಅನ್ವಯ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.</p>.<p>'ಅದರನ್ವಯ ರಾಜೇಸಾಬ್ ಮುಲ್ಲಾ, ಸುರೇಶ ಗಲಗಲಿ, ಮಹಾದೇವ ಮದ್ದಿಮನಿ, ಮುತ್ತುರಾಜ್ ದೊಡ್ಡಮನಿ (ಭಜಂತ್ರಿ), ಯಶವಂತ ಸದಾಶಿವ ಕಲೂತಿ, ಬನಹಟ್ಟಿಯ ಅಕ್ಬರ್ ಪಣಿಬಂದ ಎಂಬುವವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>