<p><strong>ಬಾಗಲಕೋಟೆ:</strong> ಹಾವುಗಳನ್ನ ಹಿಡಿಯುವಲ್ಲಿ ಪರಿಣಿತಿ ಪಡೆದಿದ್ದ ಬಾದಾಮಿ ತಾಲ್ಲೂಕಿನ ಕಳಸಕೊಪ್ಪ ಗ್ರಾಮದ ಉರಗ ಮಿತ್ರ ಸದಾಶಿವ ಕರಣಿ (30) ಹಾವು ಕಚ್ಚಿ ಮೃತಪಟ್ಟಿದ್ದಾರೆ.</p>.<p>ಸದಾಶಿವ ಕರಣಿ ಸ್ವಯಂ ಆಸಕ್ತಿಯಿಂದ ಹಾವು ಹಿಡಿಯುವುದನ್ನು ಅಭ್ಯಾಸ ಮಾಡಿಕೊಂಡಿದ್ದರು. ಹೀಗಾಗಿ ಬಾದಾಮಿ ಪಟ್ಟಣ ಸೇರಿದಂತೆ ಕಳಸಕೊಪ್ಪದ ಸುತ್ತಲಿನ ಹಳ್ಳಿಗಳಲ್ಲಿ ಹಾವು ಕಂಡರೆ ಹಿಡಿಯಲು ಜನರು ಸದಾಶಿವ ಅವರಿಗೆ ಕರೆ ಮಾಡುತ್ತಿದ್ದರು. ಹಿಡಿದ ಹಾವನ್ನು ನಂತರ ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬರುತ್ತಿದ್ದರು.</p>.<p>ಕಳಸಕೊಪ್ಪದ ಹೊಲವೊಂದರಲ್ಲಿ ಬುಧವಾರ ಮಧ್ಯಾಹ್ನ ನಾಗರಹಾವು ಹಿಡಿದಿದ್ದ ಸದಾಶಿವ ನಂತರ ಅದೇ ಹಾವು ಕಚ್ಚಿ ಅಸ್ವಸ್ಥಗೊಂಡಿದ್ದರು. ಅದಕ್ಕೆ ಮನೆಯಲ್ಲಿ ತಾನೇ ಗಿಡಮೂಲಿಕೆಯಿಂದ ಔಷಧಿ ತಯಾರಿಸಿ ಸದಾಶಿವ ಸೇವಿಸಿದ್ದರು. ಆದರೆ ತಡರಾತ್ರಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.</p>.<p>ಈ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><a href="https://www.prajavani.net/district/bengaluru-city/former-bjp-corporator-rekha-kadiresh-stabbed-to-death-in-bengaluru-841877.html" itemprop="url">ಮಾಜಿ ಕಾರ್ಪೋರೇಟರ್ ಬಿಜೆಪಿಯ ರೇಖಾ ಕದಿರೇಶ್ ಹತ್ಯೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಹಾವುಗಳನ್ನ ಹಿಡಿಯುವಲ್ಲಿ ಪರಿಣಿತಿ ಪಡೆದಿದ್ದ ಬಾದಾಮಿ ತಾಲ್ಲೂಕಿನ ಕಳಸಕೊಪ್ಪ ಗ್ರಾಮದ ಉರಗ ಮಿತ್ರ ಸದಾಶಿವ ಕರಣಿ (30) ಹಾವು ಕಚ್ಚಿ ಮೃತಪಟ್ಟಿದ್ದಾರೆ.</p>.<p>ಸದಾಶಿವ ಕರಣಿ ಸ್ವಯಂ ಆಸಕ್ತಿಯಿಂದ ಹಾವು ಹಿಡಿಯುವುದನ್ನು ಅಭ್ಯಾಸ ಮಾಡಿಕೊಂಡಿದ್ದರು. ಹೀಗಾಗಿ ಬಾದಾಮಿ ಪಟ್ಟಣ ಸೇರಿದಂತೆ ಕಳಸಕೊಪ್ಪದ ಸುತ್ತಲಿನ ಹಳ್ಳಿಗಳಲ್ಲಿ ಹಾವು ಕಂಡರೆ ಹಿಡಿಯಲು ಜನರು ಸದಾಶಿವ ಅವರಿಗೆ ಕರೆ ಮಾಡುತ್ತಿದ್ದರು. ಹಿಡಿದ ಹಾವನ್ನು ನಂತರ ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬರುತ್ತಿದ್ದರು.</p>.<p>ಕಳಸಕೊಪ್ಪದ ಹೊಲವೊಂದರಲ್ಲಿ ಬುಧವಾರ ಮಧ್ಯಾಹ್ನ ನಾಗರಹಾವು ಹಿಡಿದಿದ್ದ ಸದಾಶಿವ ನಂತರ ಅದೇ ಹಾವು ಕಚ್ಚಿ ಅಸ್ವಸ್ಥಗೊಂಡಿದ್ದರು. ಅದಕ್ಕೆ ಮನೆಯಲ್ಲಿ ತಾನೇ ಗಿಡಮೂಲಿಕೆಯಿಂದ ಔಷಧಿ ತಯಾರಿಸಿ ಸದಾಶಿವ ಸೇವಿಸಿದ್ದರು. ಆದರೆ ತಡರಾತ್ರಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.</p>.<p>ಈ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><a href="https://www.prajavani.net/district/bengaluru-city/former-bjp-corporator-rekha-kadiresh-stabbed-to-death-in-bengaluru-841877.html" itemprop="url">ಮಾಜಿ ಕಾರ್ಪೋರೇಟರ್ ಬಿಜೆಪಿಯ ರೇಖಾ ಕದಿರೇಶ್ ಹತ್ಯೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>