<p>ಕಮತಗಿ (ಅಮೀನಗಡ): ‘ಪಟ್ಟಣದ ಹೊಳೆ ಹುಚ್ಚೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಗ್ರಾಹಕರ ಸ್ನೇಹಿಯಾಗಿದ್ದು, ಮಾರ್ಚ್ 2024ಕ್ಕೆ ₹3.24 ಕೋಟಿ ನಿವ್ವಳ ಲಾಭ ಗಳಿಸಿದೆ‘ ಎಂದು ಸೊಸೈಟಿಯ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ ಹೇಳಿದರು.</p>.<p>ಪಟ್ಟಣದ ಹೊಳೆ ಹುಚ್ಚೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ 34ನೇ ವಾರ್ಷಿಕ ಮಹಾಸಭೆಯು ಸೆ.14 ರಂದು ಪಾರ್ವತಿ ಪರಮೇಶ್ವರ ಸಾಂಸ್ಕೃತಿಕ ಭವನದಲ್ಲಿ ಬೆಳಿಗ್ಗೆ10 ಗಂಟೆಗೆ ನಡೆಯಲಿದೆ. ಸಂಘದಲ್ಲಿ ಪ್ರಸ್ತುತ 8854 ಸದಸ್ಯರಿದ್ದು, 16 ಶಾಖೆಗಳನ್ನು ಹೊಂದಿದೆ’ ಎಂದರು.</p>.<p><span class="bold"><strong>ಪ್ರತಿಭಾ ಪುರಸ್ಕಾರ:</strong></span> ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಐಎಎಸ್, ಕೆಎಎಸ್, ಐಐಫ್ಎಸ್ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ಎಂದಿನಂತೆ ಪ್ರತಿಭಾ ಪುರಸ್ಕಾರ, ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದರು. </p>.<p>ಸಂಘದ ಉಪಾಧ್ಯಕ್ಷ ಮಲ್ಲಪ್ಪ ಮೇದಾರ, ನಿದೇರ್ಶಕ ಮಂಡಳಿಯ ಹುಚ್ಚಪ್ಪ ಸಿಂಹಾಸನ, ರಮೇಶ ಜಮಖಂಡಿ, ಕಮಲಪ್ಪ ಕಡ್ಲಿಮಟ್ಟಿ, ಹನಮಂತ ಕಡಿವಾಲ, ಪ್ರಧಾನ ವ್ಯವಸ್ಥಾಪಕ ಶಿವಶಂಕರ ಮಾಶೆಟ್ಟಿ, ಉಪ ಪ್ರಧಾನ ವ್ಯವಸ್ಥಾಪಕ ಸದಾಶಿವ ಕಡ್ಲಿಮಟ್ಟಿ, ಆಡಳಿತ ಸಲಹೆಗಾರರಾದ ಪಿ.ಎಸ್.ಪರಗಿ, ಸುರೇಶ ಕಟ್ಟಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮತಗಿ (ಅಮೀನಗಡ): ‘ಪಟ್ಟಣದ ಹೊಳೆ ಹುಚ್ಚೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿಯು ಗ್ರಾಹಕರ ಸ್ನೇಹಿಯಾಗಿದ್ದು, ಮಾರ್ಚ್ 2024ಕ್ಕೆ ₹3.24 ಕೋಟಿ ನಿವ್ವಳ ಲಾಭ ಗಳಿಸಿದೆ‘ ಎಂದು ಸೊಸೈಟಿಯ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ ಹೇಳಿದರು.</p>.<p>ಪಟ್ಟಣದ ಹೊಳೆ ಹುಚ್ಚೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘದ 34ನೇ ವಾರ್ಷಿಕ ಮಹಾಸಭೆಯು ಸೆ.14 ರಂದು ಪಾರ್ವತಿ ಪರಮೇಶ್ವರ ಸಾಂಸ್ಕೃತಿಕ ಭವನದಲ್ಲಿ ಬೆಳಿಗ್ಗೆ10 ಗಂಟೆಗೆ ನಡೆಯಲಿದೆ. ಸಂಘದಲ್ಲಿ ಪ್ರಸ್ತುತ 8854 ಸದಸ್ಯರಿದ್ದು, 16 ಶಾಖೆಗಳನ್ನು ಹೊಂದಿದೆ’ ಎಂದರು.</p>.<p><span class="bold"><strong>ಪ್ರತಿಭಾ ಪುರಸ್ಕಾರ:</strong></span> ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಐಎಎಸ್, ಕೆಎಎಸ್, ಐಐಫ್ಎಸ್ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ಎಂದಿನಂತೆ ಪ್ರತಿಭಾ ಪುರಸ್ಕಾರ, ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದರು. </p>.<p>ಸಂಘದ ಉಪಾಧ್ಯಕ್ಷ ಮಲ್ಲಪ್ಪ ಮೇದಾರ, ನಿದೇರ್ಶಕ ಮಂಡಳಿಯ ಹುಚ್ಚಪ್ಪ ಸಿಂಹಾಸನ, ರಮೇಶ ಜಮಖಂಡಿ, ಕಮಲಪ್ಪ ಕಡ್ಲಿಮಟ್ಟಿ, ಹನಮಂತ ಕಡಿವಾಲ, ಪ್ರಧಾನ ವ್ಯವಸ್ಥಾಪಕ ಶಿವಶಂಕರ ಮಾಶೆಟ್ಟಿ, ಉಪ ಪ್ರಧಾನ ವ್ಯವಸ್ಥಾಪಕ ಸದಾಶಿವ ಕಡ್ಲಿಮಟ್ಟಿ, ಆಡಳಿತ ಸಲಹೆಗಾರರಾದ ಪಿ.ಎಸ್.ಪರಗಿ, ಸುರೇಶ ಕಟ್ಟಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>