ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಯೋಧನ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಯೋಧನಿಗೆ ಅಂತಿಮ ನಮನ ಸಲ್ಲಿಸಲು ಗುಡೂರ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರು ಜಮಾಯಿಸಿದ್ದರು.
ಮುಗಿಲು ಮುಟ್ಟಿದ ರೋದನ: ಮೃತ ಯೋಧನ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರಿ ಪ್ರಿಯಾ ಹಾಗೂ
ಪುತ್ರ ಪವನ ಅವರ ರೋದನ ಮುಗಿಲು ಮುಟ್ಟಿತ್ತು.