<p><strong>ಕುಳಗೇರಿ ಕ್ರಾಸ್:</strong> ಸವದತ್ತಿ–ಪಟ್ಟದಕಲ್ಲು ರಾಜ್ಯ ಹೆದ್ದಾರಿ 14ಕ್ಕೆ ಹೊಂದಿಕೊಂಡಿರುವ ಸೋಮನಕೊಪ್ಪ ರಸ್ತೆ ಕಾಮಗಾರಿ ಅರ್ಧಕ್ಕೆ ಸ್ಥಗಿತವಾಗಿದ್ದರಿಂದ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಹದಗೆಟ್ಟ ರಸ್ತೆಯಲ್ಲೇ ಸೋಮನಕೊಪ್ಪ ಗ್ರಾಮ ತಲುಪುವ ಜನರು, ರಸ್ತೆ ಕಾಮಗಾರಿ ಪೂರ್ಣಗೊಳಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಾರೆ.</p><p>‘ಸ್ವಂತ ವಾಹನದಲ್ಲಿ ಪ್ರಯಾಣಿಸಿದರೆ ಮಾತ್ರ ಗ್ರಾಮವನ್ನು ಸಮಯಕ್ಕೆ ಸರಿಯಾಗಿ ತಲುಪಬಹುದು. ಇಲ್ಲವಾದರೆ ಸಾಧ್ಯವಾಗುವುದಿಲ್ಲ’ ಎನ್ನುತ್ತಾರೆ ಗ್ರಾಮದ ನಿವಾಸಿ ರಮೇಶ್ ಮಣ್ಣೂರ.</p><p>‘ಗ್ರಾಮದ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರತಿದಿನ 900 ಮೀಟರ್ನಷ್ಟು ನಡೆದು ರಾಜ್ಯ ಹೆದ್ದಾರಿ 14 ಅನ್ನು ತಲುಪಬೇಕು. ಕ್ರಾಸ್ನಲ್ಲಿ ಬಸ್ಗಳನ್ನು ನಿಲ್ಲಿಸುವುದಿಲ್ಲ. ಅಲ್ಲಿಂದ 2 ಕಿ.ಮೀ. ದೂರವಿರುವ ಕುಳಗೇರಿ ಕ್ರಾಸ್ವರೆಗೂ ನಡೆದುಕೊಂಡೇ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p><p>ಗ್ರಾಮಕ್ಕೆ ಒಂದು ಬಸ್ ಬೆಳಿಗ್ಗೆ ಹಾಗೂ ರಾತ್ರಿ ಮಾತ್ರ ಸಂಚರಿಸುತ್ತದೆ. ಶಾಲಾ– ಕಾಲೇಜುಗಳ ಆರಂಭ ಹಾಗೂ ಮುಕ್ತಾಯದ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ನಡೆದುಕೊಂಡು ಬರುವುದು ಅನಿವಾರ್ಯವಾಗಿದೆ. ಗ್ರಾಮಸ್ಥರು ವಿವಿಧ ಕೆಲಸಕ್ಕೆ ಹಲವಾರು ಬಾರಿ ನಡೆದುಕೊಂಡೇ ಹೋಗಬೇಕಿದೆ.</p><p>‘ಅನಾರೋಗ್ಯದಿಂದ ಬಳಲುತ್ತಿರು ವವರು ಖಾಸಗಿ ವಾಹನಗಳನ್ನೇ ಆಶ್ರಯಿಸಬೇಕಿದೆ. ರಸ್ತೆ ದುರಸ್ತಿ ಮಾಡಬೇಕು. ಬಸ್ ಸಂಚಾರ ಹೆಚ್ಚಿಸಬೇಕು’ ಎಂಬುದು ಗ್ರಾಮಸ್ಥರ ಆಗ್ರಹ.</p>.<p><strong>ಇನ್ನೂ ಮುಗಿಯದ ಸೋಮನಕೊಪ್ಪ ರಸ್ತೆ ಕಾಮಗಾರಿ</strong></p><p><strong>ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೊಂದರೆ</strong></p>.<p><strong>‘ಟೆಂಡರ್ಗೆ ಕ್ರಮ’</strong></p><p>‘ಸೋಮನಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 400 ಮೀಟರ್ನಷ್ಟು ರಸ್ತೆ ಕಾಮಗಾರಿ ಪೂರ್ಣವಾಗಿದೆ. ಇನ್ನುಳಿದ 500 ಮೀಟರ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆದು ಕಾಮಗಾರಿ ನಡೆಸಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಎಇಇ ವೈ.ಎಫ್. ಆಡಿನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಳಗೇರಿ ಕ್ರಾಸ್:</strong> ಸವದತ್ತಿ–ಪಟ್ಟದಕಲ್ಲು ರಾಜ್ಯ ಹೆದ್ದಾರಿ 14ಕ್ಕೆ ಹೊಂದಿಕೊಂಡಿರುವ ಸೋಮನಕೊಪ್ಪ ರಸ್ತೆ ಕಾಮಗಾರಿ ಅರ್ಧಕ್ಕೆ ಸ್ಥಗಿತವಾಗಿದ್ದರಿಂದ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಹದಗೆಟ್ಟ ರಸ್ತೆಯಲ್ಲೇ ಸೋಮನಕೊಪ್ಪ ಗ್ರಾಮ ತಲುಪುವ ಜನರು, ರಸ್ತೆ ಕಾಮಗಾರಿ ಪೂರ್ಣಗೊಳಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಾರೆ.</p><p>‘ಸ್ವಂತ ವಾಹನದಲ್ಲಿ ಪ್ರಯಾಣಿಸಿದರೆ ಮಾತ್ರ ಗ್ರಾಮವನ್ನು ಸಮಯಕ್ಕೆ ಸರಿಯಾಗಿ ತಲುಪಬಹುದು. ಇಲ್ಲವಾದರೆ ಸಾಧ್ಯವಾಗುವುದಿಲ್ಲ’ ಎನ್ನುತ್ತಾರೆ ಗ್ರಾಮದ ನಿವಾಸಿ ರಮೇಶ್ ಮಣ್ಣೂರ.</p><p>‘ಗ್ರಾಮದ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರತಿದಿನ 900 ಮೀಟರ್ನಷ್ಟು ನಡೆದು ರಾಜ್ಯ ಹೆದ್ದಾರಿ 14 ಅನ್ನು ತಲುಪಬೇಕು. ಕ್ರಾಸ್ನಲ್ಲಿ ಬಸ್ಗಳನ್ನು ನಿಲ್ಲಿಸುವುದಿಲ್ಲ. ಅಲ್ಲಿಂದ 2 ಕಿ.ಮೀ. ದೂರವಿರುವ ಕುಳಗೇರಿ ಕ್ರಾಸ್ವರೆಗೂ ನಡೆದುಕೊಂಡೇ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p><p>ಗ್ರಾಮಕ್ಕೆ ಒಂದು ಬಸ್ ಬೆಳಿಗ್ಗೆ ಹಾಗೂ ರಾತ್ರಿ ಮಾತ್ರ ಸಂಚರಿಸುತ್ತದೆ. ಶಾಲಾ– ಕಾಲೇಜುಗಳ ಆರಂಭ ಹಾಗೂ ಮುಕ್ತಾಯದ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ನಡೆದುಕೊಂಡು ಬರುವುದು ಅನಿವಾರ್ಯವಾಗಿದೆ. ಗ್ರಾಮಸ್ಥರು ವಿವಿಧ ಕೆಲಸಕ್ಕೆ ಹಲವಾರು ಬಾರಿ ನಡೆದುಕೊಂಡೇ ಹೋಗಬೇಕಿದೆ.</p><p>‘ಅನಾರೋಗ್ಯದಿಂದ ಬಳಲುತ್ತಿರು ವವರು ಖಾಸಗಿ ವಾಹನಗಳನ್ನೇ ಆಶ್ರಯಿಸಬೇಕಿದೆ. ರಸ್ತೆ ದುರಸ್ತಿ ಮಾಡಬೇಕು. ಬಸ್ ಸಂಚಾರ ಹೆಚ್ಚಿಸಬೇಕು’ ಎಂಬುದು ಗ್ರಾಮಸ್ಥರ ಆಗ್ರಹ.</p>.<p><strong>ಇನ್ನೂ ಮುಗಿಯದ ಸೋಮನಕೊಪ್ಪ ರಸ್ತೆ ಕಾಮಗಾರಿ</strong></p><p><strong>ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೊಂದರೆ</strong></p>.<p><strong>‘ಟೆಂಡರ್ಗೆ ಕ್ರಮ’</strong></p><p>‘ಸೋಮನಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 400 ಮೀಟರ್ನಷ್ಟು ರಸ್ತೆ ಕಾಮಗಾರಿ ಪೂರ್ಣವಾಗಿದೆ. ಇನ್ನುಳಿದ 500 ಮೀಟರ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆದು ಕಾಮಗಾರಿ ನಡೆಸಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಎಇಇ ವೈ.ಎಫ್. ಆಡಿನ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>