<p><strong>ಹುನಗುಂದ</strong>: ‘23 ವರ್ಷಗಳ ನಂತರವೂ ಎಸ್.ಆರ್.ಕಾಶಪ್ಪನವರ ಹೆಸರು ಜನ ಮಾನಸದಲ್ಲಿ ಉಳಿದಿದೆ ಎಂದರೆ ಅವರು ತಮ್ಮ ಅವಧಿಯಲ್ಲಿ ಮಾಡಿದ ಜನಪರ ಕಾರ್ಯಗಳು ಮತ್ತು ಕೈಗೊಂಡ ದಿಟ್ಟ ನಿರ್ಧಾರಗಳು ಕಾರಣ’ ಎಂದು ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಾವರಗಿ ಗ್ರಾಮದಲ್ಲಿ ಸೋಮವಾರ ನಡೆದ ಎಸ್.ಆರ್.ಕಾಶಪ್ಪನವರ 23ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಪಂಚಪೀಠಗಳಿಗೆ ಎಸ್.ಆರ್.ಕಾಶಪ್ಪನವರ ಕೊಡುಗೆ ಅಪಾರ’ ಎಂದರು.</p>.<p>ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಪಂಚಪೀಠಗಳಲ್ಲಿ ಎಸ್.ಆರ್.ಕಾಶಪ್ಪನವರ ನಂಬಿಕೆ, ವಿಶ್ವಾಸ ಸ್ಮರಣೀಯವಾದದ್ದು’ ಎಂದು ತಿಳಿಸಿದರು.</p>.<p>ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಎಸ್.ಆರ್.ಕಾಶಪ್ಪನವರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಮಾರ್ಗದಲ್ಲಿ ಅವರ ಕುಟುಂಬದವರು ಬೇರೆ ಬೇರೆ ಸೇವೆ ಮಾಡುತ್ತಿದ್ದಾರೆ. ಅದು ಮುಂದುವರೆಯಲಿ’ ಎಂದು ಹೇಳಿದರು.</p>.<p>ನಂದವಾಡಗಿ ಆಳಂದದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಕೊಲ್ಹಾರದ ದಿಗಂಬರೇಶ್ವರ ಸಂಸ್ಥಾನ ಮಠದ ಯೋಗಿ ಕಲ್ಲಿನಾಥ ದೇವರು ಮಾತನಾಡಿದರು.</p>.<p>ಸಾಹಿತಿ ಎಸ್.ಕೆ.ಕೊನೆಸಾಗರ, ವಿಜಯ ಗದ್ದನಕೇರಿ, ಮಹಾಂತೇಶ ಅವಾರಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.</p>.<p>ದಿಂಡವಾರ ಕುಮಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಹಡಗಲಿ ನಿಡಗುಂದಿ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬಿಲ್ ಕೆರೂರ್ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮುತ್ತತ್ತಿ ಗುರಲಿಂಗ ಶಿವಾಚಾರ್ಯ ಸ್ವಾಮೀಜಿ, ಚಳಗೇರಿ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ಗಿರಿಸಾಗರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ತಂಗಡಗಿ ಅನ್ನದಾನಿ ಭಾರತಿ ಸ್ವಾಮೀಜಿ, ಪುರಗೇರಿ ಹಿರೇಮಠದ ಶಿವಸಂಗಮೇಶ್ವರ ದೇವರು, ಹುನಗುಂದ ಗಚ್ಚಿನ ಮಠದ ಅಮರೇಶ್ವರ ದೇವರು, ಮಾಜಿ ಶಾಸಕಿ ಗೌರಮ್ಮ ಕಾಶಪ್ಪನವರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಎಸ್.ಆರ್.ಕಾಶಪ್ಪನವರ ಪ್ರತಿಷ್ಠಾನದ ಖಜಾಂಚಿ ದೇವಾನಂದ ಕಾಶಪ್ಪನವರ, ಪ್ರತಿಷ್ಠಾನದ ಕಾರ್ಯದರ್ಶಿ ಬಸವರಾಜ ಶಿರೂರು ಹಾಗೂ ಇತರರಿದ್ದರು.</p>.<p> ‘ರಾಜಕೀಯ ಜೀವನಕ್ಕೆ ಪ್ರೇರಣೆ’ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ ಹುನಗುಂದ ಮತಕ್ಷೇತ್ರದಲ್ಲಿ ನಮ್ಮ ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳು ಮತ್ತು ನಿರ್ಭೀತ ನಿಲುವಿನ ನಿರ್ಧಾರಗಳು ನನ್ನ ರಾಜಕೀಯ ಜೀವನಕ್ಕೆ ಪ್ರೇರಣೆ. ಪಂಚಪೀಠದ ಗುರುಗಳು ಹಾಗೂ ಹರಗುರು ಚರಮೂರ್ತಿಗಳ ಮಾರ್ಗದರ್ಶನ ಹಾಗೂ ಆಶೀರ್ವಾದ ಬಲ ನಮ್ಮ ಕುಟುಂಬದ ಮೇಲೆ ಸದಾ ಇರುತ್ತದೆ. ನನ್ನ ಕೊನೆ ಉಸಿರಿರುವವರೆಗೂ ಎಸ್.ಆರ್.ಕೆ ಪ್ರತಿಷ್ಠಾನದ ಅಡಿಯಲ್ಲಿ ತಂದೆಯವರ ಪುಣ್ಯ ಸ್ಮರಣೆಯ ಸಾರ್ವಜನಿಕ ಕಾರ್ಯಕ್ರಮ ಮುಂದುವರೆಯುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ‘23 ವರ್ಷಗಳ ನಂತರವೂ ಎಸ್.ಆರ್.ಕಾಶಪ್ಪನವರ ಹೆಸರು ಜನ ಮಾನಸದಲ್ಲಿ ಉಳಿದಿದೆ ಎಂದರೆ ಅವರು ತಮ್ಮ ಅವಧಿಯಲ್ಲಿ ಮಾಡಿದ ಜನಪರ ಕಾರ್ಯಗಳು ಮತ್ತು ಕೈಗೊಂಡ ದಿಟ್ಟ ನಿರ್ಧಾರಗಳು ಕಾರಣ’ ಎಂದು ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಾವರಗಿ ಗ್ರಾಮದಲ್ಲಿ ಸೋಮವಾರ ನಡೆದ ಎಸ್.ಆರ್.ಕಾಶಪ್ಪನವರ 23ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಪಂಚಪೀಠಗಳಿಗೆ ಎಸ್.ಆರ್.ಕಾಶಪ್ಪನವರ ಕೊಡುಗೆ ಅಪಾರ’ ಎಂದರು.</p>.<p>ಉಜ್ಜಯಿನಿ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಪಂಚಪೀಠಗಳಲ್ಲಿ ಎಸ್.ಆರ್.ಕಾಶಪ್ಪನವರ ನಂಬಿಕೆ, ವಿಶ್ವಾಸ ಸ್ಮರಣೀಯವಾದದ್ದು’ ಎಂದು ತಿಳಿಸಿದರು.</p>.<p>ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಎಸ್.ಆರ್.ಕಾಶಪ್ಪನವರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಮಾರ್ಗದಲ್ಲಿ ಅವರ ಕುಟುಂಬದವರು ಬೇರೆ ಬೇರೆ ಸೇವೆ ಮಾಡುತ್ತಿದ್ದಾರೆ. ಅದು ಮುಂದುವರೆಯಲಿ’ ಎಂದು ಹೇಳಿದರು.</p>.<p>ನಂದವಾಡಗಿ ಆಳಂದದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಕೊಲ್ಹಾರದ ದಿಗಂಬರೇಶ್ವರ ಸಂಸ್ಥಾನ ಮಠದ ಯೋಗಿ ಕಲ್ಲಿನಾಥ ದೇವರು ಮಾತನಾಡಿದರು.</p>.<p>ಸಾಹಿತಿ ಎಸ್.ಕೆ.ಕೊನೆಸಾಗರ, ವಿಜಯ ಗದ್ದನಕೇರಿ, ಮಹಾಂತೇಶ ಅವಾರಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.</p>.<p>ದಿಂಡವಾರ ಕುಮಾರಲಿಂಗ ಶಿವಾಚಾರ್ಯ ಸ್ವಾಮೀಜಿ, ಹಡಗಲಿ ನಿಡಗುಂದಿ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬಿಲ್ ಕೆರೂರ್ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮುತ್ತತ್ತಿ ಗುರಲಿಂಗ ಶಿವಾಚಾರ್ಯ ಸ್ವಾಮೀಜಿ, ಚಳಗೇರಿ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ಗಿರಿಸಾಗರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ತಂಗಡಗಿ ಅನ್ನದಾನಿ ಭಾರತಿ ಸ್ವಾಮೀಜಿ, ಪುರಗೇರಿ ಹಿರೇಮಠದ ಶಿವಸಂಗಮೇಶ್ವರ ದೇವರು, ಹುನಗುಂದ ಗಚ್ಚಿನ ಮಠದ ಅಮರೇಶ್ವರ ದೇವರು, ಮಾಜಿ ಶಾಸಕಿ ಗೌರಮ್ಮ ಕಾಶಪ್ಪನವರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಎಸ್.ಆರ್.ಕಾಶಪ್ಪನವರ ಪ್ರತಿಷ್ಠಾನದ ಖಜಾಂಚಿ ದೇವಾನಂದ ಕಾಶಪ್ಪನವರ, ಪ್ರತಿಷ್ಠಾನದ ಕಾರ್ಯದರ್ಶಿ ಬಸವರಾಜ ಶಿರೂರು ಹಾಗೂ ಇತರರಿದ್ದರು.</p>.<p> ‘ರಾಜಕೀಯ ಜೀವನಕ್ಕೆ ಪ್ರೇರಣೆ’ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ ಹುನಗುಂದ ಮತಕ್ಷೇತ್ರದಲ್ಲಿ ನಮ್ಮ ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳು ಮತ್ತು ನಿರ್ಭೀತ ನಿಲುವಿನ ನಿರ್ಧಾರಗಳು ನನ್ನ ರಾಜಕೀಯ ಜೀವನಕ್ಕೆ ಪ್ರೇರಣೆ. ಪಂಚಪೀಠದ ಗುರುಗಳು ಹಾಗೂ ಹರಗುರು ಚರಮೂರ್ತಿಗಳ ಮಾರ್ಗದರ್ಶನ ಹಾಗೂ ಆಶೀರ್ವಾದ ಬಲ ನಮ್ಮ ಕುಟುಂಬದ ಮೇಲೆ ಸದಾ ಇರುತ್ತದೆ. ನನ್ನ ಕೊನೆ ಉಸಿರಿರುವವರೆಗೂ ಎಸ್.ಆರ್.ಕೆ ಪ್ರತಿಷ್ಠಾನದ ಅಡಿಯಲ್ಲಿ ತಂದೆಯವರ ಪುಣ್ಯ ಸ್ಮರಣೆಯ ಸಾರ್ವಜನಿಕ ಕಾರ್ಯಕ್ರಮ ಮುಂದುವರೆಯುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>