ಕುಮಾರಸ್ವಾಮಿ ಹಿರೇಮಠ, ವಿಕ್ರಂ ದೇಶಪಾಂಡೆ, ಮನೋಜ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳಕ್ಕೆ ಬಂದಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ‘ಅಗೌರವವಾಗಿ ನಡೆದುಕೊಂಡ ಪೊಲೀಸ್ ವಿರುದ್ಧ ಕ್ರಮಗೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಪೊಲೀಸ್ ಠಾಣೆಗೆ ಹೋದರೆ ಶಾಸಕರು ಹೇಳಿದಂತೆ ಕೇಳುತ್ತೇನೆ ಎಂದು ಹೇಳುತ್ತಾನಂತೆ, ಪೊಲೀಸರೇ ಕಾನೂನು ಪ್ರಕಾರ ನಡೆದುಕೊಳ್ಳದಿದ್ದರೆ ಹೇಗೆ?’ ಎಂದು ಪ್ರಶ್ನಿಸಿದರು.
ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ‘ಘಟನೆ ಬಗ್ಗೆ ವಿಚಾರಣೆ ನಡೆಸಲಾಗುವುದು. ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಎಲ್ಲರೂ ಮನೆಗೆ ತೆರಳಬೇಕು’ ಎಂದು ಮನವಿ ಮಾಡಿದರು. ವೃತ್ತದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.