<p><strong>ಬಾಗಲಕೋಟೆ</strong>: ನವನಗರ ಪೊಲೀಸ್ ಠಾಣೆಗೆ ಹೋದಾಗ ಸಿಪಿಐ ಗೌರವದಿಂದ ನಡೆದುಕೊಳ್ಳಲಿಲ್ಲ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ರಾತ್ರಿ ಪ್ರತಿಭಟನೆ ಮಾಡುತ್ತಿದ್ದ ಹಿಂದೂ ಜಾಗರಣ ವೇದಿಕೆ ಸದಸ್ಯರ ಮೇಲೆ ಕಲ್ಲು ತೂರಾಡಲಾಗಿದೆ. ಜನರನ್ನು ಚದುರಿಸಲು ಲಾಠಿ ಪ್ರಹಾರ ಮಾಡಲಾಗಿದೆ.</p><p>ನವನಗರ ಪೊಲೀಸ್ ಠಾಣೆಯ ಸಿಪಿಐ ಎಸ್.ಎಸ್. ಬಿರಾದಾರ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಪೊಲೀಸರು ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.</p><p>ಕಲ್ಲು ತೂರಾಟದಿಂದ ಕೋಪಗೊಂಡ ವೇದಿಕೆ ಸದಸ್ಯರು ಪೊಲೀಸರೊಂದಿಗೆ ಮಾತಿಗೆ ಇಳಿದಾಗ ಎಲ್ಲರನ್ನು ಚದುರಿಸಲು ಲಾಠಿ ಬೀಸಲಾಯಿತು.</p>.<p>ಕುಮಾರಸ್ವಾಮಿ ಹಿರೇಮಠ, ವಿಕ್ರಂ ದೇಶಪಾಂಡೆ, ಮನೋಜ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳಕ್ಕೆ ಬಂದಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ‘ಅಗೌರವವಾಗಿ ನಡೆದುಕೊಂಡ ಪೊಲೀಸ್ ವಿರುದ್ಧ ಕ್ರಮಗೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p><p>‘ಪೊಲೀಸ್ ಠಾಣೆಗೆ ಹೋದರೆ ಶಾಸಕರು ಹೇಳಿದಂತೆ ಕೇಳುತ್ತೇನೆ ಎಂದು ಹೇಳುತ್ತಾನಂತೆ, ಪೊಲೀಸರೇ ಕಾನೂನು ಪ್ರಕಾರ ನಡೆದುಕೊಳ್ಳದಿದ್ದರೆ ಹೇಗೆ?’ ಎಂದು ಪ್ರಶ್ನಿಸಿದರು.</p><p>ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ‘ಘಟನೆ ಬಗ್ಗೆ ವಿಚಾರಣೆ ನಡೆಸಲಾಗುವುದು. ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಎಲ್ಲರೂ ಮನೆಗೆ ತೆರಳಬೇಕು’ ಎಂದು ಮನವಿ ಮಾಡಿದರು. ವೃತ್ತದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.</p>.ಬಾಗಲಕೋಟೆ ಲೋಕಸಭಾ ಕ್ಷೇತ್ರ: ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಸಿಬ್ಬಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ನವನಗರ ಪೊಲೀಸ್ ಠಾಣೆಗೆ ಹೋದಾಗ ಸಿಪಿಐ ಗೌರವದಿಂದ ನಡೆದುಕೊಳ್ಳಲಿಲ್ಲ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ರಾತ್ರಿ ಪ್ರತಿಭಟನೆ ಮಾಡುತ್ತಿದ್ದ ಹಿಂದೂ ಜಾಗರಣ ವೇದಿಕೆ ಸದಸ್ಯರ ಮೇಲೆ ಕಲ್ಲು ತೂರಾಡಲಾಗಿದೆ. ಜನರನ್ನು ಚದುರಿಸಲು ಲಾಠಿ ಪ್ರಹಾರ ಮಾಡಲಾಗಿದೆ.</p><p>ನವನಗರ ಪೊಲೀಸ್ ಠಾಣೆಯ ಸಿಪಿಐ ಎಸ್.ಎಸ್. ಬಿರಾದಾರ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಪೊಲೀಸರು ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.</p><p>ಕಲ್ಲು ತೂರಾಟದಿಂದ ಕೋಪಗೊಂಡ ವೇದಿಕೆ ಸದಸ್ಯರು ಪೊಲೀಸರೊಂದಿಗೆ ಮಾತಿಗೆ ಇಳಿದಾಗ ಎಲ್ಲರನ್ನು ಚದುರಿಸಲು ಲಾಠಿ ಬೀಸಲಾಯಿತು.</p>.<p>ಕುಮಾರಸ್ವಾಮಿ ಹಿರೇಮಠ, ವಿಕ್ರಂ ದೇಶಪಾಂಡೆ, ಮನೋಜ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳಕ್ಕೆ ಬಂದಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ, ಬಿಜೆಪಿ ಬೆಳಗಾವಿ ಸಹ ಪ್ರಭಾರಿ ಬಸವರಾಜ ಯಂಕಂಚಿ, ‘ಅಗೌರವವಾಗಿ ನಡೆದುಕೊಂಡ ಪೊಲೀಸ್ ವಿರುದ್ಧ ಕ್ರಮಗೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p><p>‘ಪೊಲೀಸ್ ಠಾಣೆಗೆ ಹೋದರೆ ಶಾಸಕರು ಹೇಳಿದಂತೆ ಕೇಳುತ್ತೇನೆ ಎಂದು ಹೇಳುತ್ತಾನಂತೆ, ಪೊಲೀಸರೇ ಕಾನೂನು ಪ್ರಕಾರ ನಡೆದುಕೊಳ್ಳದಿದ್ದರೆ ಹೇಗೆ?’ ಎಂದು ಪ್ರಶ್ನಿಸಿದರು.</p><p>ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ‘ಘಟನೆ ಬಗ್ಗೆ ವಿಚಾರಣೆ ನಡೆಸಲಾಗುವುದು. ತಪ್ಪು ಮಾಡಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಎಲ್ಲರೂ ಮನೆಗೆ ತೆರಳಬೇಕು’ ಎಂದು ಮನವಿ ಮಾಡಿದರು. ವೃತ್ತದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.</p>.ಬಾಗಲಕೋಟೆ ಲೋಕಸಭಾ ಕ್ಷೇತ್ರ: ಚುನಾವಣಾ ಕರ್ತವ್ಯಕ್ಕೆ ಹೊರಟಿದ್ದ ಸಿಬ್ಬಂದಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>