<p><strong>ಜಮಖಂಡಿ:</strong> ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳಲು ಅಡಿಪಾಯ ಇದ್ದಂತೆ. ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಅನಿಲ್ ಬಡಿಗೇರ ಹೇಳಿದರು.</p>.<p>ತಾಲ್ಲೂಕಿನ ತುಬಚಿ ಗ್ರಾಮದ ರಾಣಿ ಚನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. </p>.<p>ರೈತ ಮುಖಂಡ ಬಿ.ಎಸ್. ಸಿಂಧೂರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.</p>.<p>ಸದಾಶಿವ ಬಾಲಪ್ಪನವರ ಮಾತನಾಡಿದರು. ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಿಗೆ ಸನ್ಮಾನಿಸಲಾಯಿತು. </p>.<p>ಗುರುರಾಜ ಕುಲಕರ್ಣಿ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ತೇಲಿ, ಶಿವಲಿಂಗಪ್ಪ ಕಿತ್ತೂರು, ಜೀನಗೌಡ ಪಾಟೀಲ, ವಸಂತರಾವ ಕುಲಕರ್ಣಿ, ನಾರಾಯಣ ಅದ್ಯಾಪಕ, ರಮೇಶ್ ಕಣಬೂರ ಇದ್ದರು. ಆನಂದ ದೂಪದಾಳ ಸ್ವಾಗತಿಸಿದರು, ಅಕ್ಷತಾ ಬಿರಾದಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳಲು ಅಡಿಪಾಯ ಇದ್ದಂತೆ. ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಅನಿಲ್ ಬಡಿಗೇರ ಹೇಳಿದರು.</p>.<p>ತಾಲ್ಲೂಕಿನ ತುಬಚಿ ಗ್ರಾಮದ ರಾಣಿ ಚನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. </p>.<p>ರೈತ ಮುಖಂಡ ಬಿ.ಎಸ್. ಸಿಂಧೂರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದರು.</p>.<p>ಸದಾಶಿವ ಬಾಲಪ್ಪನವರ ಮಾತನಾಡಿದರು. ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಿಗೆ ಸನ್ಮಾನಿಸಲಾಯಿತು. </p>.<p>ಗುರುರಾಜ ಕುಲಕರ್ಣಿ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ತೇಲಿ, ಶಿವಲಿಂಗಪ್ಪ ಕಿತ್ತೂರು, ಜೀನಗೌಡ ಪಾಟೀಲ, ವಸಂತರಾವ ಕುಲಕರ್ಣಿ, ನಾರಾಯಣ ಅದ್ಯಾಪಕ, ರಮೇಶ್ ಕಣಬೂರ ಇದ್ದರು. ಆನಂದ ದೂಪದಾಳ ಸ್ವಾಗತಿಸಿದರು, ಅಕ್ಷತಾ ಬಿರಾದಾರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>