<p><strong>ಹುನಗುಂದ</strong>: ‘ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಓದಿನೊಂದಿಗೆ ಸಂಸ್ಕಾರಯುತರಾಗಿ ಭವಿಷ್ಯ ರೂಪಿಸಿಕೊಳ್ಳುವುದು ಅಗತ್ಯ. ಪಾಲಕರು ಮತ್ತು ಶಿಕ್ಷಕರ ಆಶಯಗಳಿಗೆ ಪೂರಕವಾಗಿ ಸ್ಪಂದಿಸಿ ಮನೆ ಮತ್ತು ವಿದ್ಯಾಸಂಸ್ಥೆಯ ಕೀರ್ತಿ ಹೆಚ್ಚಿಸಬೇಕು’ ಎಂದು ಇಳಕಲ್ ಎಸ್.ವಿ.ಎಂ.ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯೆ ಸಂಧ್ಯಾ ಎಚ್. ವಿ ಕರೆ ನೀಡಿದರು.</p>.<p>ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಶುಕ್ರವಾರ ನಡೆದ ಜವಾಹರಲಾಲ್ ನೆಹರು ಅವರ ಜನ್ಮದಿನ ಆಚರಣೆ ಮತ್ತು ಪಾಲಕ, ಪೋಷಕ ಮತ್ತು ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿ, ವಕೀಲ ಮಹಾಂತೇಶ ಅವಾರಿ, ‘ನೆಹರು ಅವರ ವ್ಯಕ್ತಿತ್ವ ಮತ್ತು ಕೊಡುಗೆಗಳನ್ನು ಸ್ಮರಿಸಬೇಕು. ವಿದ್ಯಾರ್ಥಿ ಜೀವನ ಅಮೂಲ್ಯ. ಈ ಹಂತದಲ್ಲಿ ಸಕಾರಾತ್ಮಕ ಮನೋಭಾವ ಹೆಚ್ಚಿಸಿಕೊಳ್ಳುವ ಮೂಲಕ ನಾಡಿನ ಸತ್ಪ್ರಜೆಗಳಾಗಬೇಕು. ಆಧುನಿಕ ಆಡಂಬರದ ಮೋಹಗಳಿಂದ ದೂರವಿರಬೇಕು’ ಎಂದರು.</p>.<p>ಸಿಡಿಸಿ ಸದಸ್ಯ ಚಂದ್ರಶೇಖರ ಚಟ್ನಿಹಾಳ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಹುಚ್ಚೇಶ ಕಾಳಹಸ್ತಿಮಠ, ಪ್ರಭು ನಾಗೂರ, ಮುತ್ತಣ್ಣ ಬ್ಯಾಳಿ, ಅಶ್ವಿನಿ ಹುಚನೂರ, ರವಿ ಹಳಪೇಟಿ, ಮುತ್ತಣ್ಣ ಗಂಜಿಹಾಳ, ರೇಖಾ ಬ್ಯಾಳಿ ಇದ್ದರು.</p>.<p>ಪ್ರಾಚಾರ್ಯ ಶರಣಪ್ಪ ಹೂಲಗೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಂತಿ ಬೆಣಗಿ ಪ್ರಾರ್ಥಿಸಿದರು. ಛಾಯಾ ಪುರಂದರೆ ಸಂವಿಧಾನ ಪೀಠಿಕೆ ಬೋಧಿಸಿದರು. ಐ.ಎಚ್.ನಾಯಿಕ ಅತಿಥಿಗಳನ್ನು ಪರಿಚಯಿಸಿದರು. ಎನ್.ವೈ.ನದಾಫ ನಿರೂಪಿಸಿದರು. ಎಚ್.ಟಿ. ಅಗಸಿಮುಂದಿನ ವಂದಿಸಿದರು. ನಂತರ ಪಾಲಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ‘ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಓದಿನೊಂದಿಗೆ ಸಂಸ್ಕಾರಯುತರಾಗಿ ಭವಿಷ್ಯ ರೂಪಿಸಿಕೊಳ್ಳುವುದು ಅಗತ್ಯ. ಪಾಲಕರು ಮತ್ತು ಶಿಕ್ಷಕರ ಆಶಯಗಳಿಗೆ ಪೂರಕವಾಗಿ ಸ್ಪಂದಿಸಿ ಮನೆ ಮತ್ತು ವಿದ್ಯಾಸಂಸ್ಥೆಯ ಕೀರ್ತಿ ಹೆಚ್ಚಿಸಬೇಕು’ ಎಂದು ಇಳಕಲ್ ಎಸ್.ವಿ.ಎಂ.ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯೆ ಸಂಧ್ಯಾ ಎಚ್. ವಿ ಕರೆ ನೀಡಿದರು.</p>.<p>ನಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಶುಕ್ರವಾರ ನಡೆದ ಜವಾಹರಲಾಲ್ ನೆಹರು ಅವರ ಜನ್ಮದಿನ ಆಚರಣೆ ಮತ್ತು ಪಾಲಕ, ಪೋಷಕ ಮತ್ತು ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಮುಖ್ಯ ಅತಿಥಿ, ವಕೀಲ ಮಹಾಂತೇಶ ಅವಾರಿ, ‘ನೆಹರು ಅವರ ವ್ಯಕ್ತಿತ್ವ ಮತ್ತು ಕೊಡುಗೆಗಳನ್ನು ಸ್ಮರಿಸಬೇಕು. ವಿದ್ಯಾರ್ಥಿ ಜೀವನ ಅಮೂಲ್ಯ. ಈ ಹಂತದಲ್ಲಿ ಸಕಾರಾತ್ಮಕ ಮನೋಭಾವ ಹೆಚ್ಚಿಸಿಕೊಳ್ಳುವ ಮೂಲಕ ನಾಡಿನ ಸತ್ಪ್ರಜೆಗಳಾಗಬೇಕು. ಆಧುನಿಕ ಆಡಂಬರದ ಮೋಹಗಳಿಂದ ದೂರವಿರಬೇಕು’ ಎಂದರು.</p>.<p>ಸಿಡಿಸಿ ಸದಸ್ಯ ಚಂದ್ರಶೇಖರ ಚಟ್ನಿಹಾಳ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಹುಚ್ಚೇಶ ಕಾಳಹಸ್ತಿಮಠ, ಪ್ರಭು ನಾಗೂರ, ಮುತ್ತಣ್ಣ ಬ್ಯಾಳಿ, ಅಶ್ವಿನಿ ಹುಚನೂರ, ರವಿ ಹಳಪೇಟಿ, ಮುತ್ತಣ್ಣ ಗಂಜಿಹಾಳ, ರೇಖಾ ಬ್ಯಾಳಿ ಇದ್ದರು.</p>.<p>ಪ್ರಾಚಾರ್ಯ ಶರಣಪ್ಪ ಹೂಲಗೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸೇವಂತಿ ಬೆಣಗಿ ಪ್ರಾರ್ಥಿಸಿದರು. ಛಾಯಾ ಪುರಂದರೆ ಸಂವಿಧಾನ ಪೀಠಿಕೆ ಬೋಧಿಸಿದರು. ಐ.ಎಚ್.ನಾಯಿಕ ಅತಿಥಿಗಳನ್ನು ಪರಿಚಯಿಸಿದರು. ಎನ್.ವೈ.ನದಾಫ ನಿರೂಪಿಸಿದರು. ಎಚ್.ಟಿ. ಅಗಸಿಮುಂದಿನ ವಂದಿಸಿದರು. ನಂತರ ಪಾಲಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>