<p><strong>ಮಹಾಲಿಂಗಪುರ</strong>: ‘ವಿದ್ಯಾರ್ಥಿಗಳು ಕ್ರಿಯಾತ್ಮಕ ಸಂಶೋಧನೆ ಮಾಡಬೇಕು. ಹಿಂದೆ ಮಾಡಿದ ಸಂಶೋಧನೆಯನ್ನು ನಕಲು ಮಾಡದೆ ಸಂಶೋಧನೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಡೀನ್ ಮತ್ತು ಚೇರಮನ್ ಮಲ್ಲಿಕಾರ್ಜುನ ಮರಡಿ ಹೇಳಿದರು.</p>.<p>ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಪದವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಪರಿಣಾಮಕಾರಿ ಯೋಜನಾ ವರದಿ ಬರವಣಿಗೆಗಾಗಿ ಸಂಶೋಧನಾ ವಿಧಾನ ವಿಷಯದ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಶ್ವಿನಿ ಜಮುನಿ, ಚಿಕ್ಕೋಡಿಯ ಕೆಎಲ್ಇ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ಎಂಬಿಎ ವಿಭಾಗದ ಸಂಜಯ ಹನಗಂಡಿ ಸಂಶೋಧನೆಯ ವಿಧಾನ ವಿವರಿಸಿದರು.</p>.<p>ಐಕ್ಯೂಎಸಿ ಸಂಯೋಜಕಿ ಎಸ್.ಡಿ.ಸೋರಗಾಂವಿ, ಕಾರ್ಯಕ್ರಮ ಸಂಯೋಜಕಿ ಆರ್.ಎಂ.ಕಾಕಡೆ, ವಾಣಿಜ್ಯ ವಿಭಾಗದ ಸಂಯೋಜಕ ಎಂ.ಬಿ.ಧರಿಗೌಡರ, ಡಿ.ಎಂ.ಹೊಸಪೇಟಿ ಇದ್ದರು.</p>.<p>9 ಪದವಿ ಕಾಲೇಜಿನ 183 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p> <strong>‘ಪ್ರಾಯೋಗಿಕ ಅವಲೋಕನ ಅಗತ್ಯ’</strong></p><p> ಪ್ರಾಚಾರ್ಯ ಎನ್.ಬಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ ‘ವಿದ್ಯಾರ್ಥಿಗಳು ಅಂಕಗಳಿಗಾಗಿ ಸಂಶೋಧನೆ ಮಾಡಬಾರದು. ಸಂಶೋಧನೆ ಹಲವಾರು ಸಂಶೋಧಕರಿಗೆ ಮಾದರಿಯಾಗಬೇಕು. ಸಂಶೋಧನೆ ನಡೆಸುವಾಗ ವಿದ್ಯಾರ್ಥಿಗಳು ಕೇವಲ ಆಧುನಿಕ ತಂತ್ರಾಂಶಗಳ ಮೊರೆ ಹೋಗದೆ ಪ್ರಾಯೋಗಿಕ ಅವಲೋಕನ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ‘ವಿದ್ಯಾರ್ಥಿಗಳು ಕ್ರಿಯಾತ್ಮಕ ಸಂಶೋಧನೆ ಮಾಡಬೇಕು. ಹಿಂದೆ ಮಾಡಿದ ಸಂಶೋಧನೆಯನ್ನು ನಕಲು ಮಾಡದೆ ಸಂಶೋಧನೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಡೀನ್ ಮತ್ತು ಚೇರಮನ್ ಮಲ್ಲಿಕಾರ್ಜುನ ಮರಡಿ ಹೇಳಿದರು.</p>.<p>ಪಟ್ಟಣದ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಪದವಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡ ವಾಣಿಜ್ಯ ಮತ್ತು ನಿರ್ವಹಣೆಯಲ್ಲಿ ಪರಿಣಾಮಕಾರಿ ಯೋಜನಾ ವರದಿ ಬರವಣಿಗೆಗಾಗಿ ಸಂಶೋಧನಾ ವಿಧಾನ ವಿಷಯದ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಬೆಳಗಾವಿಯ ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಶ್ವಿನಿ ಜಮುನಿ, ಚಿಕ್ಕೋಡಿಯ ಕೆಎಲ್ಇ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನ ಎಂಬಿಎ ವಿಭಾಗದ ಸಂಜಯ ಹನಗಂಡಿ ಸಂಶೋಧನೆಯ ವಿಧಾನ ವಿವರಿಸಿದರು.</p>.<p>ಐಕ್ಯೂಎಸಿ ಸಂಯೋಜಕಿ ಎಸ್.ಡಿ.ಸೋರಗಾಂವಿ, ಕಾರ್ಯಕ್ರಮ ಸಂಯೋಜಕಿ ಆರ್.ಎಂ.ಕಾಕಡೆ, ವಾಣಿಜ್ಯ ವಿಭಾಗದ ಸಂಯೋಜಕ ಎಂ.ಬಿ.ಧರಿಗೌಡರ, ಡಿ.ಎಂ.ಹೊಸಪೇಟಿ ಇದ್ದರು.</p>.<p>9 ಪದವಿ ಕಾಲೇಜಿನ 183 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p> <strong>‘ಪ್ರಾಯೋಗಿಕ ಅವಲೋಕನ ಅಗತ್ಯ’</strong></p><p> ಪ್ರಾಚಾರ್ಯ ಎನ್.ಬಿ.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ ‘ವಿದ್ಯಾರ್ಥಿಗಳು ಅಂಕಗಳಿಗಾಗಿ ಸಂಶೋಧನೆ ಮಾಡಬಾರದು. ಸಂಶೋಧನೆ ಹಲವಾರು ಸಂಶೋಧಕರಿಗೆ ಮಾದರಿಯಾಗಬೇಕು. ಸಂಶೋಧನೆ ನಡೆಸುವಾಗ ವಿದ್ಯಾರ್ಥಿಗಳು ಕೇವಲ ಆಧುನಿಕ ತಂತ್ರಾಂಶಗಳ ಮೊರೆ ಹೋಗದೆ ಪ್ರಾಯೋಗಿಕ ಅವಲೋಕನ ಮಾಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>