<p><strong>ಮಹಾಲಿಂಗಪುರ</strong>: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು. ನಂತರ ಶಾರದಾ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ವಿತರಿಸಲಾಯಿತು.</p>.<p>ಶಿಕ್ಷಕರಾದ ಸದಾಶಿವ ಕಂಬಾರ, ಪಿ.ಸಿ.ಫಕೀರಣ್ಣವರ, ಎಂ.ಎಸ್.ಮಲಾಬಾದಿ, ಎಂ.ಜಿ.ಅಲ್ಲಾಖಾನ, ಆರ್.ಎಸ್.ಬೀಳಗಿ, ಆರ್.ಎಸ್.ಲಮಾಣಿ ಇದ್ದರು.</p>.<p>ಸಮೀಪದ ರನ್ನಬೆಳಗಲಿ ಸರ್ಕಾರಿ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ಗಳನ್ನು ನೀಡಲಾಯಿತು.</p>.<p>ಸಸಿಗೆ ನೀರುಣಿಸುವ ಮೂಲಕ ಎಸ್ಡಿಎಂಸಿ ಅಧ್ಯಕ್ಷ ಯಮನಪ್ಪ ಆಲಗೂರ, ಪಟ್ಟಣ ಪಂಚಾಯಿತಿ ಸದಸ್ಯ ಪ್ರವೀಣ ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಮುಖ್ಯಶಿಕ್ಷಕಿ ಎಸ್.ಎಲ್.ಕಠಾರೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಯಿತು.</p>.<p>ಸದಾಶಿವ ಹಳ್ಳೂರ, ಶ್ರೀಶೈಲ ಬಬಲಾದಿ, ಸದಾಶಿವ ಗುಲಗಂಜಿಕೊಪ್ಪ, ಈರಪ್ಪ ಲೋಹಾರ, ಮಂಜುನಾಥ ಪಾಟೀಲ, ಬಂದವ್ವ ಲಾಲಸಿಂಗಿ, ಮಾಲವ್ವ ಹಂಚಿನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು. ನಂತರ ಶಾರದಾ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ವಿತರಿಸಲಾಯಿತು.</p>.<p>ಶಿಕ್ಷಕರಾದ ಸದಾಶಿವ ಕಂಬಾರ, ಪಿ.ಸಿ.ಫಕೀರಣ್ಣವರ, ಎಂ.ಎಸ್.ಮಲಾಬಾದಿ, ಎಂ.ಜಿ.ಅಲ್ಲಾಖಾನ, ಆರ್.ಎಸ್.ಬೀಳಗಿ, ಆರ್.ಎಸ್.ಲಮಾಣಿ ಇದ್ದರು.</p>.<p>ಸಮೀಪದ ರನ್ನಬೆಳಗಲಿ ಸರ್ಕಾರಿ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ಗಳನ್ನು ನೀಡಲಾಯಿತು.</p>.<p>ಸಸಿಗೆ ನೀರುಣಿಸುವ ಮೂಲಕ ಎಸ್ಡಿಎಂಸಿ ಅಧ್ಯಕ್ಷ ಯಮನಪ್ಪ ಆಲಗೂರ, ಪಟ್ಟಣ ಪಂಚಾಯಿತಿ ಸದಸ್ಯ ಪ್ರವೀಣ ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಮುಖ್ಯಶಿಕ್ಷಕಿ ಎಸ್.ಎಲ್.ಕಠಾರೆ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಯಿತು.</p>.<p>ಸದಾಶಿವ ಹಳ್ಳೂರ, ಶ್ರೀಶೈಲ ಬಬಲಾದಿ, ಸದಾಶಿವ ಗುಲಗಂಜಿಕೊಪ್ಪ, ಈರಪ್ಪ ಲೋಹಾರ, ಮಂಜುನಾಥ ಪಾಟೀಲ, ಬಂದವ್ವ ಲಾಲಸಿಂಗಿ, ಮಾಲವ್ವ ಹಂಚಿನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>