<p><strong>ಮುಧೋಳ</strong>: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ಸೋಮವಾರ ಜಿಎಲ್ಬಿಸಿ ಆವರಣದಲ್ಲಿ ಕಬ್ಬು ಬೆಳೆಗಾರರ, ಕಟಾವುದಾರರ ಹಾಗೂ ಸಾಗಾಣಿಕದಾರರು ಎದುರಿಸುತ್ತಿರುವ ಸಮಸ್ಯೆ ಹಾಗೂ ಬಾಕಿ ಹಣದ ಕುರಿತು ಚರ್ಚೆ ಮಾಡಲಾಯಿತು.</p>.<p>ಸಭೆಯಲ್ಲಿ ಮಾತನಾಡಿದ ಮುತ್ತಪ್ಪ ಕೋಮಾರ ಹಾಗೂ ಮುಖಂಡರು, ಸ್ಥಳೀಯ ಕಬ್ಬು ಕಟಾವುದಾರರಿಗೆ 2023-2024 ರ ಬಾಕಿ ಪ್ರತಿ ಟನ್ ₹114 ಗಳಂತೆ ಕೊಡಬೇಕಾಗಿದೆ. ಮಹಾರಾಷ್ಟ್ರದಿಂದ ತಂದ ಕಟಾವುದಾರರಿಗೆ ಈಗಾಗಲೇ ಪಾವತಿಸಲಾಗಿದೆ. ಕಬ್ಬು ಕಟಾವು ದರ ಪ್ರತಿ ಟನ್ಗೆ ಮಹಾರಾಷ್ಟ್ರ ಗ್ಯಾಂಗನವರಿಗೆ ₹519 ರೂಪಾಯಿ ಕೊಡುತಿದ್ದು ಸ್ಥಳೀಯ ಗ್ಯಾಂಗಳಿಗೆ ₹439 ರೂ ಗಳನ್ನು ನಿಗದಿ ಮಾಡಿದ್ದು ಪ್ರತಿ ಟನ್ ಕಬ್ಬಿಗೆ ₹75 ವ್ಯತ್ಯಾಸ ಮಾಡುತ್ತಿದ್ದಾರೆ. ಇದನ್ನು ಸರಿಪಡಿಸಬೇಕು. ಕಬ್ಬು ಸಾಗಾಣಿಕೆ ಮಾಡುವ ಟ್ರಾಕ್ಟರ್ ಮಾಲೀಕರಿಗೆ ಬಾಡಿಗೆ ಪರಿಷ್ಕರಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಬ್ಬು ಬೆಳೆಗಾರರು 2024-2025 ರ ಹಂಗಾಮಿಗೆ ಪೂರೈಸಿದ ಕಬ್ಬಿಗೆ ಅಂತಿಮ ಕಂತು ನಿಗದಿ ಮಾಡಬೇಕಾಗಿದೆ ಹಾಗೂ ಕಾರ್ಖಾನೆಗಳಿಂದ ಬರಬೇಕಾದ ಹಳೆಯ ಬಾಕಿಗಳನ್ನು ಕೊಡಬೇಕು ಎಂದು ಆಗ್ರಹಿಸಿದರು.</p>.<p>ಕಟಬಾಕಿದಾರರ ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್, ಸೌಹಾರ್ದ ಬ್ಯಾಂಕ್ ಹಾಗೂ ಇತರೆ ಹಣಕಾಸು ಸಂಸ್ಥೆಗಳಿಂದ ಕೋರ್ಟ್ ಮುಖಾಂತರ ನೋಟಿಸ್ ಬರುತ್ತಿರುವುರಿಂದ ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸಭೆಯ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಮಾತನಾಡಿ, ಅ.8 ರಂದು ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿ ಅವರು ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಲಿದ್ದಾರೆ. ಅ.9 ರಂದು 11 ಗಂಟೆಗೆ ರೈತರೊಂದಿಗೆ ಮುಧೋಳ ನಗರದಲ್ಲಿ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.</p>.<p>ರೈತರು ತಮ್ಮ ಬೇಡಿಕೆಗಳ ಕುರಿತು ಪ್ರಕಾಶ ಗಾಯಕವಾಡ ಅವರಿಗೆ ಮನವಿ ಸಲ್ಲಿಸಿದರು.</p>.<p>ಮುಖಂಡರಾದ ಮುತ್ತಪ್ಪ ಕೋಮಾರ, ಈರಪ್ಪ ಹಂಚಿನಾಳ, ಸುಭಾಷ ಶಿರಬೂರ, ಸಂಗಪ್ಪ ಸಂಗಾಪೂರ, ಗೋವಿಂದಪ್ಪ ಮೆಟಗುಡ್ಡ, ದುಂಡಪ್ಪ ನೀಲಿ, ಗಂಗಾಧರ ಮೇಟಿ, ಸಿದ್ದಪ್ಪ ಬಳಗಾನೂರ ಇದ್ದರು ನೂರಾರು ಸಂಖ್ಯೆಯಲ್ಲಿ ರೈತರು, ಕಟಾವುದಾರರು ಹಾಗೂ ಸಾಗಾಣಿಕೆದಾರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ</strong>: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ಸೋಮವಾರ ಜಿಎಲ್ಬಿಸಿ ಆವರಣದಲ್ಲಿ ಕಬ್ಬು ಬೆಳೆಗಾರರ, ಕಟಾವುದಾರರ ಹಾಗೂ ಸಾಗಾಣಿಕದಾರರು ಎದುರಿಸುತ್ತಿರುವ ಸಮಸ್ಯೆ ಹಾಗೂ ಬಾಕಿ ಹಣದ ಕುರಿತು ಚರ್ಚೆ ಮಾಡಲಾಯಿತು.</p>.<p>ಸಭೆಯಲ್ಲಿ ಮಾತನಾಡಿದ ಮುತ್ತಪ್ಪ ಕೋಮಾರ ಹಾಗೂ ಮುಖಂಡರು, ಸ್ಥಳೀಯ ಕಬ್ಬು ಕಟಾವುದಾರರಿಗೆ 2023-2024 ರ ಬಾಕಿ ಪ್ರತಿ ಟನ್ ₹114 ಗಳಂತೆ ಕೊಡಬೇಕಾಗಿದೆ. ಮಹಾರಾಷ್ಟ್ರದಿಂದ ತಂದ ಕಟಾವುದಾರರಿಗೆ ಈಗಾಗಲೇ ಪಾವತಿಸಲಾಗಿದೆ. ಕಬ್ಬು ಕಟಾವು ದರ ಪ್ರತಿ ಟನ್ಗೆ ಮಹಾರಾಷ್ಟ್ರ ಗ್ಯಾಂಗನವರಿಗೆ ₹519 ರೂಪಾಯಿ ಕೊಡುತಿದ್ದು ಸ್ಥಳೀಯ ಗ್ಯಾಂಗಳಿಗೆ ₹439 ರೂ ಗಳನ್ನು ನಿಗದಿ ಮಾಡಿದ್ದು ಪ್ರತಿ ಟನ್ ಕಬ್ಬಿಗೆ ₹75 ವ್ಯತ್ಯಾಸ ಮಾಡುತ್ತಿದ್ದಾರೆ. ಇದನ್ನು ಸರಿಪಡಿಸಬೇಕು. ಕಬ್ಬು ಸಾಗಾಣಿಕೆ ಮಾಡುವ ಟ್ರಾಕ್ಟರ್ ಮಾಲೀಕರಿಗೆ ಬಾಡಿಗೆ ಪರಿಷ್ಕರಣೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಕಬ್ಬು ಬೆಳೆಗಾರರು 2024-2025 ರ ಹಂಗಾಮಿಗೆ ಪೂರೈಸಿದ ಕಬ್ಬಿಗೆ ಅಂತಿಮ ಕಂತು ನಿಗದಿ ಮಾಡಬೇಕಾಗಿದೆ ಹಾಗೂ ಕಾರ್ಖಾನೆಗಳಿಂದ ಬರಬೇಕಾದ ಹಳೆಯ ಬಾಕಿಗಳನ್ನು ಕೊಡಬೇಕು ಎಂದು ಆಗ್ರಹಿಸಿದರು.</p>.<p>ಕಟಬಾಕಿದಾರರ ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್, ಸೌಹಾರ್ದ ಬ್ಯಾಂಕ್ ಹಾಗೂ ಇತರೆ ಹಣಕಾಸು ಸಂಸ್ಥೆಗಳಿಂದ ಕೋರ್ಟ್ ಮುಖಾಂತರ ನೋಟಿಸ್ ಬರುತ್ತಿರುವುರಿಂದ ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಸಭೆಯ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಮಾತನಾಡಿ, ಅ.8 ರಂದು ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿ ಅವರು ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಲಿದ್ದಾರೆ. ಅ.9 ರಂದು 11 ಗಂಟೆಗೆ ರೈತರೊಂದಿಗೆ ಮುಧೋಳ ನಗರದಲ್ಲಿ ಅವರು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.</p>.<p>ರೈತರು ತಮ್ಮ ಬೇಡಿಕೆಗಳ ಕುರಿತು ಪ್ರಕಾಶ ಗಾಯಕವಾಡ ಅವರಿಗೆ ಮನವಿ ಸಲ್ಲಿಸಿದರು.</p>.<p>ಮುಖಂಡರಾದ ಮುತ್ತಪ್ಪ ಕೋಮಾರ, ಈರಪ್ಪ ಹಂಚಿನಾಳ, ಸುಭಾಷ ಶಿರಬೂರ, ಸಂಗಪ್ಪ ಸಂಗಾಪೂರ, ಗೋವಿಂದಪ್ಪ ಮೆಟಗುಡ್ಡ, ದುಂಡಪ್ಪ ನೀಲಿ, ಗಂಗಾಧರ ಮೇಟಿ, ಸಿದ್ದಪ್ಪ ಬಳಗಾನೂರ ಇದ್ದರು ನೂರಾರು ಸಂಖ್ಯೆಯಲ್ಲಿ ರೈತರು, ಕಟಾವುದಾರರು ಹಾಗೂ ಸಾಗಾಣಿಕೆದಾರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>