<p><strong>ಬಾಗಲಕೋಟೆ</strong>: ಕೇಂದ್ರ ಸರ್ಕಾರವು ನ್ಯಾಯಸಮ್ಮತ ಹಾಗೂ ಪ್ರೋತ್ಸಾಹದಾಯಕ ದರ (ಎಫ್ಆರ್ಪಿ) ಹೆಚ್ಚಳದಲ್ಲಿ ಅನ್ಯಾಯ ಮಾಡಲಾಗಿದೆ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ಪ್ರತಿ ಕ್ವಿಂಟಲ್ಗೆ ಪಾವತಿಸಬೇಕಿರುವ ಮೊತ್ತವನ್ನು ₹15 ಹೆಚ್ಚಿಸಿದೆ. ಈ ವರ್ಷದ ಅಕ್ಟೋಬರ್ನಿಂದ ಆರಂಭವಾಗುವ 2025–26ನೇ ಹಂಗಾಮಿನಲ್ಲಿ ಕಾರ್ಖಾನೆಗಳು ಕ್ವಿಂಟಲ್ಗೆ ₹355 ಪಾವತಿಸಬೇಕು ಎಂದು ತಿಳಿಸಿದೆ. </p>.<p>ಕಬ್ಬು ರೈತರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ನ್ಯಾಯಸಮ್ಮತ ಹಾಗೂ ಪ್ರೋತ್ಸಾಹದಾಯಕ ದರವನ್ನು (ಎಫ್ಆರ್ಪಿ) ಶೇ 4.41 ಹೆಚ್ಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>2024-25ನೇ ಹಂಗಾಮಿನಲ್ಲಿ ಕಬ್ಬಿನ ಎಫ್ಆರ್ಪಿಯನ್ನು ಕ್ವಿಂಟಲ್ಗೆ ₹340 ಕ್ಕೆ ನಿಗದಿಪಡಿಸಲಾಗಿತ್ತು. ಈಗ ₹15 ರೂ ಹೆಚ್ಚಿಸಲಾಗಿದೆ.</p>.<p>ಒಂದು ಕೆಜಿಗೆ ಕೇವಲ 15 ಪೈಸೆಯಷ್ಟು ಮಾತ್ರ ಹೆಚ್ಚಳ ಮಾಡುವ ಮೂಲಕ ಕಬ್ಬು ಬೆಳೆಗಾರರಿಗೆ ನಾಚಿಕೆಯಾಗುವಂತೆ ಮಾಡಲಾಗಿದೆ ಎಂದು ಮುಖಂಡ ಸುಭಾಷ ಶಿಬರೂರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟವನ್ನು ಕೇಂದ್ರವು ಗಮನಕ್ಕೆ ತೆಗೆದುಕೊಂಡಿಲ್ಲ. ಕಬ್ಬು ಬೆಳೆಯುವ ಖರ್ಚನ್ನು ಹೊರತುಪಡಿಸಿ ಲಾಭಾಂಶ ಇಟ್ಟುಕೊಂಡು ಬೆಲೆ ನಿಗದಿ ಮಾಡಬೇಕುಂಬುದಕ್ಕೆ ಕಾನೂನಿದ್ದರೂ ಅದ್ಯಾವುದನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.</p>.<p>ಮುಖ್ಯಮಂತ್ರಿ, ಸಕ್ಕರೆ ಸಚಿವ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರನ್ನು ಸೇರಿದಂತೆ ಭೇಟಿಯಾಗಿ ಮನವಿ ಮಾಡಲಾಗಿತ್ತು. 2024–25ನೇ ಸಾಲಿನಲ್ಲಿ ನಿಗದಿ ಮಾಡಿದ್ದ ಬೆಲೆಯಲ್ಲಿಯೇ ಅವೈಜ್ಞಾನಿಕವಾಗಿದೆ ಎಂದು ತಿಳಿಸಿದ್ದೆವು.</p>.<p>ಕೇಂದ್ರವೂ ಈಗ ಕಡಿಮೆ ಬೆಲೆ ನಿಗದಿ ಮಾಡಿರುವುದರಿಂದ ರೈತರಿಗೆ ಖರ್ಚು ಕೂಡ ವಾಪಸ್ ಬರುವುದಿಲ್ಲ. 9.5 ಸಕ್ಕರೆ ಇಳುವರಿಗೆ ಪ್ರತಿ ಟನ್ಗೆ ₹4,500 ನೀಡಬೇಕು. ಇಲ್ಲದಿದ್ದರೆ ಹೊಸ ಬೆಲೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಕೇಂದ್ರ ಸರ್ಕಾರವು ನ್ಯಾಯಸಮ್ಮತ ಹಾಗೂ ಪ್ರೋತ್ಸಾಹದಾಯಕ ದರ (ಎಫ್ಆರ್ಪಿ) ಹೆಚ್ಚಳದಲ್ಲಿ ಅನ್ಯಾಯ ಮಾಡಲಾಗಿದೆ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರವು ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ಪ್ರತಿ ಕ್ವಿಂಟಲ್ಗೆ ಪಾವತಿಸಬೇಕಿರುವ ಮೊತ್ತವನ್ನು ₹15 ಹೆಚ್ಚಿಸಿದೆ. ಈ ವರ್ಷದ ಅಕ್ಟೋಬರ್ನಿಂದ ಆರಂಭವಾಗುವ 2025–26ನೇ ಹಂಗಾಮಿನಲ್ಲಿ ಕಾರ್ಖಾನೆಗಳು ಕ್ವಿಂಟಲ್ಗೆ ₹355 ಪಾವತಿಸಬೇಕು ಎಂದು ತಿಳಿಸಿದೆ. </p>.<p>ಕಬ್ಬು ರೈತರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ನ್ಯಾಯಸಮ್ಮತ ಹಾಗೂ ಪ್ರೋತ್ಸಾಹದಾಯಕ ದರವನ್ನು (ಎಫ್ಆರ್ಪಿ) ಶೇ 4.41 ಹೆಚ್ಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>2024-25ನೇ ಹಂಗಾಮಿನಲ್ಲಿ ಕಬ್ಬಿನ ಎಫ್ಆರ್ಪಿಯನ್ನು ಕ್ವಿಂಟಲ್ಗೆ ₹340 ಕ್ಕೆ ನಿಗದಿಪಡಿಸಲಾಗಿತ್ತು. ಈಗ ₹15 ರೂ ಹೆಚ್ಚಿಸಲಾಗಿದೆ.</p>.<p>ಒಂದು ಕೆಜಿಗೆ ಕೇವಲ 15 ಪೈಸೆಯಷ್ಟು ಮಾತ್ರ ಹೆಚ್ಚಳ ಮಾಡುವ ಮೂಲಕ ಕಬ್ಬು ಬೆಳೆಗಾರರಿಗೆ ನಾಚಿಕೆಯಾಗುವಂತೆ ಮಾಡಲಾಗಿದೆ ಎಂದು ಮುಖಂಡ ಸುಭಾಷ ಶಿಬರೂರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟವನ್ನು ಕೇಂದ್ರವು ಗಮನಕ್ಕೆ ತೆಗೆದುಕೊಂಡಿಲ್ಲ. ಕಬ್ಬು ಬೆಳೆಯುವ ಖರ್ಚನ್ನು ಹೊರತುಪಡಿಸಿ ಲಾಭಾಂಶ ಇಟ್ಟುಕೊಂಡು ಬೆಲೆ ನಿಗದಿ ಮಾಡಬೇಕುಂಬುದಕ್ಕೆ ಕಾನೂನಿದ್ದರೂ ಅದ್ಯಾವುದನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.</p>.<p>ಮುಖ್ಯಮಂತ್ರಿ, ಸಕ್ಕರೆ ಸಚಿವ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರನ್ನು ಸೇರಿದಂತೆ ಭೇಟಿಯಾಗಿ ಮನವಿ ಮಾಡಲಾಗಿತ್ತು. 2024–25ನೇ ಸಾಲಿನಲ್ಲಿ ನಿಗದಿ ಮಾಡಿದ್ದ ಬೆಲೆಯಲ್ಲಿಯೇ ಅವೈಜ್ಞಾನಿಕವಾಗಿದೆ ಎಂದು ತಿಳಿಸಿದ್ದೆವು.</p>.<p>ಕೇಂದ್ರವೂ ಈಗ ಕಡಿಮೆ ಬೆಲೆ ನಿಗದಿ ಮಾಡಿರುವುದರಿಂದ ರೈತರಿಗೆ ಖರ್ಚು ಕೂಡ ವಾಪಸ್ ಬರುವುದಿಲ್ಲ. 9.5 ಸಕ್ಕರೆ ಇಳುವರಿಗೆ ಪ್ರತಿ ಟನ್ಗೆ ₹4,500 ನೀಡಬೇಕು. ಇಲ್ಲದಿದ್ದರೆ ಹೊಸ ಬೆಲೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>