<p><strong>ಬಾಗಲಕೋಟೆ:</strong> ಓಣಿಯ ಮಠದಂತಿದ್ದ ಚರಂತಿಮಠವನ್ನು ಪ್ರವಚನ, ಧಾರ್ಮಿಕ ಕಾರ್ಯಕ್ರಮಗಳ ಮೂಲಕ ನಾಡಿನ ಮಠವನ್ನಾಗಿಸಿ ಕೀರ್ತಿ ಪ್ರಭು ಸ್ವಾಮೀಜಿಯವರಿಗೆ ಸಲ್ಲುತ್ತದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.</p>.<p>ಬಿವಿವಿ ಸಂಘದ ವತಿಯಿಂದ ಶುಕ್ರವಾರ ಎಂಜಿನಿಯರಿಂಗ್ ಕಾಲೇಜಿನ ನೂತನ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪ್ರಭು ಸ್ವಾಮೀಜಿ ಅವರಿಗೆ ಗೌರವಾಭಿನಂದನೆ ಹಾಗೂ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೂಢನಂಬಿಕೆಗಳ ಪಿಡುಗುಗಳನ್ನು ತೊಡೆದು ಹಾಕುವ ಮೂಲಕ ಕ್ರಾಂತಿಕಾರಿ ಬದಲಾವಣೆಗೆ ಸಾಕ್ಷಿಯಾಗಿದ್ದಾರೆ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಇಳಕಲ್ ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಅತ್ಯಂತ ಕ್ರಿಯಾಶೀಲ, ಅಧ್ಯಯನಶೀಲರಾಗಿ ಹೊಸ, ಹೊಸ ಚಿಂತನೆಗಳ ಮೂಲಕ ನಿತ್ಯ ನೂತನರಾಗಿದ್ದಾರೆ. ಅವರ ವಿಚಾರಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿವೆ ಎಂದರು.</p>.<p>ಗೌರವಾಭಿನಂದನೆ ಸ್ವೀಕರಿಸಿದ ಚರಂತಿಮಠದ ಪ್ರಭು ಸ್ವಾಮೀಜಿ ಮಾತನಾಡಿ, ಜಗತ್ತನ್ನೆ ಸೆಳೆಯುವ ಶಕ್ತಿ ಭಾರತೀಯ ಸಂಸ್ಕೃತಿಗೆ ಇದೆ. ಅದಕ್ಕೆ ಎಲ್ಲ ಶಾಲಾ, ಕಾಲೇಜುಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.</p>.<p>ಶಿಕ್ಷಣ ಪಡೆದರೂ ಸಹಿತ ಮಾನವೀಯತೆ ಎಂಬ ಸಂಸ್ಕೃತಿಯಲ್ಲಿ ಬದುಕಿದಾಗ ಮಾತ್ರ ಮನುಷ್ಯ, ಮನುಷ್ಯಾಗಿ ಜೀವನ ಸಾಗಿಸುತ್ತಾನೆ. ಇಲ್ಲದಿದ್ದರೆ, ಯಾಂತ್ರಿಕವಾಗಿ ಬದುಕುತ್ತಾನೆ. ಬಿವಿವಿ ಸಂಘವು ನಾಡಿಗೆ ಕುಲಪತಿ, ವಿಜ್ಞಾನಿ, ಸಮಾಜ ಚಿಂತಕರು ಸೇರಿದಂತೆ ಹಲವು ಸಾಧಕರನ್ನು ನಾಡಿಗೆ ನೀಡಿದೆ ಎಂದರು.</p>.<p>ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಓಣಿಯ ಮಠದಂತಿದ್ದ ಚರಂತಿಮಠವನ್ನು ಪ್ರವಚನ, ಧಾರ್ಮಿಕ ಕಾರ್ಯಕ್ರಮಗಳ ಮೂಲಕ ನಾಡಿನ ಮಠವನ್ನಾಗಿಸಿ ಕೀರ್ತಿ ಪ್ರಭು ಸ್ವಾಮೀಜಿಯವರಿಗೆ ಸಲ್ಲುತ್ತದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.</p>.<p>ಬಿವಿವಿ ಸಂಘದ ವತಿಯಿಂದ ಶುಕ್ರವಾರ ಎಂಜಿನಿಯರಿಂಗ್ ಕಾಲೇಜಿನ ನೂತನ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಪ್ರಭು ಸ್ವಾಮೀಜಿ ಅವರಿಗೆ ಗೌರವಾಭಿನಂದನೆ ಹಾಗೂ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೂಢನಂಬಿಕೆಗಳ ಪಿಡುಗುಗಳನ್ನು ತೊಡೆದು ಹಾಕುವ ಮೂಲಕ ಕ್ರಾಂತಿಕಾರಿ ಬದಲಾವಣೆಗೆ ಸಾಕ್ಷಿಯಾಗಿದ್ದಾರೆ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಇಳಕಲ್ ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಅತ್ಯಂತ ಕ್ರಿಯಾಶೀಲ, ಅಧ್ಯಯನಶೀಲರಾಗಿ ಹೊಸ, ಹೊಸ ಚಿಂತನೆಗಳ ಮೂಲಕ ನಿತ್ಯ ನೂತನರಾಗಿದ್ದಾರೆ. ಅವರ ವಿಚಾರಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿವೆ ಎಂದರು.</p>.<p>ಗೌರವಾಭಿನಂದನೆ ಸ್ವೀಕರಿಸಿದ ಚರಂತಿಮಠದ ಪ್ರಭು ಸ್ವಾಮೀಜಿ ಮಾತನಾಡಿ, ಜಗತ್ತನ್ನೆ ಸೆಳೆಯುವ ಶಕ್ತಿ ಭಾರತೀಯ ಸಂಸ್ಕೃತಿಗೆ ಇದೆ. ಅದಕ್ಕೆ ಎಲ್ಲ ಶಾಲಾ, ಕಾಲೇಜುಗಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.</p>.<p>ಶಿಕ್ಷಣ ಪಡೆದರೂ ಸಹಿತ ಮಾನವೀಯತೆ ಎಂಬ ಸಂಸ್ಕೃತಿಯಲ್ಲಿ ಬದುಕಿದಾಗ ಮಾತ್ರ ಮನುಷ್ಯ, ಮನುಷ್ಯಾಗಿ ಜೀವನ ಸಾಗಿಸುತ್ತಾನೆ. ಇಲ್ಲದಿದ್ದರೆ, ಯಾಂತ್ರಿಕವಾಗಿ ಬದುಕುತ್ತಾನೆ. ಬಿವಿವಿ ಸಂಘವು ನಾಡಿಗೆ ಕುಲಪತಿ, ವಿಜ್ಞಾನಿ, ಸಮಾಜ ಚಿಂತಕರು ಸೇರಿದಂತೆ ಹಲವು ಸಾಧಕರನ್ನು ನಾಡಿಗೆ ನೀಡಿದೆ ಎಂದರು.</p>.<p>ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>