<p><strong>ಬಾಗಲಕೋಟೆ</strong>: ‘ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಜ.12ರಿಂದ ಮೂರು ದಿನ ‘39ನೇ ಶರಣ<br>ಮೇಳ’ ನಡೆಯಲಿದ್ದು, 13ರಂದು ಬೆಳಿಗ್ಗೆ 10.30ಕ್ಕೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರು ಉದ್ಘಾಟಿಸುವರು’ ಎಂದು ಉತ್ಸವ ಸಮಿತಿ ಕಾರ್ಯಾಧ್ಯಕ್ಷೆ ಮಾತೆ ಗಂಗಾದೇವಿ ತಿಳಿಸಿದರು.</p>.<p>‘ಲಿಂಗಾನಂದ ಸ್ವಾಮಿ ಸ್ಮರಣಾರ್ಥ ನೀಡುವ ‘ಸ್ವಾಮಿ ಲಿಂಗಾನಂದಶ್ರೀ’ ರಾಷ್ಟ್ರೀಯ ಪ್ರಶಸ್ತಿಗೆ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ₹1 ಲಕ್ಷ ನಗದು ಒಳಗೊಂಡಿದೆ. ಇದೇ ವೇಳೆ ಶಾಸಕ ದರ್ಶನ ಪುಟ್ಟಣ್ಣಯ್ಯ ಅವರಿಗೆ ‘ಪ್ರಮುಖ ಪ್ರಜೆ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.</p>.<p>‘ಮಾತೆ ಮಹಾದೇವಿ ಸ್ಮರಣಾರ್ಥ ನೀಡುವ ‘ಬಸವಾತ್ಮಜೆ’ ರಾಷ್ಟ್ರೀಯ ಪ್ರಶಸ್ತಿಗೆ ಗಾಯಕಿ ಸಂಗೀತಾ ಕಟ್ಟಿ ಆಯ್ಕೆ ಆಗಿದ್ದು, ಪ್ರಶಸ್ತಿಯು ₹50 ಸಾವಿರ ನಗದು ಒಳಗೊಂಡಿದೆ. ಇದೇ ವೇಳೆ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ ‘ಶರಣ ಕಾಯಕ ರತ್ನ, ಪತ್ರಕರ್ತ ರವಿ ಮೂಕಿ ಅವರಿಗೆ ‘ಶರಣ ಜ್ಞಾನ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಜ.12ರಿಂದ ಮೂರು ದಿನ ‘39ನೇ ಶರಣ<br>ಮೇಳ’ ನಡೆಯಲಿದ್ದು, 13ರಂದು ಬೆಳಿಗ್ಗೆ 10.30ಕ್ಕೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರು ಉದ್ಘಾಟಿಸುವರು’ ಎಂದು ಉತ್ಸವ ಸಮಿತಿ ಕಾರ್ಯಾಧ್ಯಕ್ಷೆ ಮಾತೆ ಗಂಗಾದೇವಿ ತಿಳಿಸಿದರು.</p>.<p>‘ಲಿಂಗಾನಂದ ಸ್ವಾಮಿ ಸ್ಮರಣಾರ್ಥ ನೀಡುವ ‘ಸ್ವಾಮಿ ಲಿಂಗಾನಂದಶ್ರೀ’ ರಾಷ್ಟ್ರೀಯ ಪ್ರಶಸ್ತಿಗೆ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ₹1 ಲಕ್ಷ ನಗದು ಒಳಗೊಂಡಿದೆ. ಇದೇ ವೇಳೆ ಶಾಸಕ ದರ್ಶನ ಪುಟ್ಟಣ್ಣಯ್ಯ ಅವರಿಗೆ ‘ಪ್ರಮುಖ ಪ್ರಜೆ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.</p>.<p>‘ಮಾತೆ ಮಹಾದೇವಿ ಸ್ಮರಣಾರ್ಥ ನೀಡುವ ‘ಬಸವಾತ್ಮಜೆ’ ರಾಷ್ಟ್ರೀಯ ಪ್ರಶಸ್ತಿಗೆ ಗಾಯಕಿ ಸಂಗೀತಾ ಕಟ್ಟಿ ಆಯ್ಕೆ ಆಗಿದ್ದು, ಪ್ರಶಸ್ತಿಯು ₹50 ಸಾವಿರ ನಗದು ಒಳಗೊಂಡಿದೆ. ಇದೇ ವೇಳೆ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ ‘ಶರಣ ಕಾಯಕ ರತ್ನ, ಪತ್ರಕರ್ತ ರವಿ ಮೂಕಿ ಅವರಿಗೆ ‘ಶರಣ ಜ್ಞಾನ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>