ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಹಶೀಲ್ದಾರ್ ಸಂಗಮೇಶ ಬಾಡಗಿ ನಿಧನ

Last Updated 18 ಮಾರ್ಚ್ 2022, 12:13 IST
ಅಕ್ಷರ ಗಾತ್ರ

ಬಾಗಲಕೋಟೆ: ಮುಧೋಳದ ತಹಶೀಲ್ದಾರ್ ಸಂಗಮೇಶ ಬಾಡಗಿ (38) ಗುರುವಾರ ನಿಧನರಾಗಿದ್ದಾರೆ. ತಡರಾತ್ರಿ ಮನೆಗೆ ಬಂದ ಅವರು ಮಲಗಿದ್ದು, ಬೆಳಿಗ್ಗೆ ಎಬ್ಬಿಸಲು ಹೋದಾಗ ಸಾವಿಗೀಡಾಗಿರುವುದು ಬೆಳಕಿಗೆ ಬಂದಿದೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ನಂತರ ಸಾವಿಗೆ ಕಾರಣ ತಿಳಿದುಬರಲಿದೆ.

ಸಂಗಮೇಶ ಬಾಡಗಿ ಮೂಲತಃ ಬೆಳಗಾವಿ ಜಿಲ್ಲೆ ಜನವಾಡ ಗ್ರಾಮದವರು. 2014ರ ಬ್ಯಾಚ್‌ನ ಕೆಎಎಸ್ ಅಧಿಕಾರಿ. ಸರಳತೆ ಹಾಗೂ ಎಲ್ಲರೊಂದಿಗೆ ಬೆರೆಯುವ ಗುಣದಿಂದ ಮುಧೋಳದಲ್ಲಿ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿದ್ದರು.

ಅವರಿಗೆ ಪತ್ನಿ, ಪುತ್ರಿ, ತಂದೆ, ತಾಯಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT