ಜಿಲ್ಲಾ ಪಂಚಾಯ್ತಿ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ‘ಕವಿತಾ ಮಿಶ್ರಾ ಎಂಬ ಮಹಿಳೆ ಕೇವಲ ಎಂಟು ಎಕರೆ ಜಮೀನಿನಲ್ಲಿ ಶ್ರೀಗಂಧದದ ಜೊತೆಗೆ ದಾಳಿಂಬೆ, ಪೇರಲ ಸೇರಿದಂತೆ ತರಹೇವಾರಿ ಹಣ್ಣುಗಳನ್ನು ಬೆಳೆದಿದ್ದಾರೆ. ಮಿಶ್ರ ಬೆಳೆ ಬೆಳೆಯುವುದರಿಂದ ಆಗುವ ಲಾಭವನ್ನು ಸ್ವತಃ ನೋಡಿ ಕಲಿಯುವಂತೆ ಮಾಡಿದ್ದಾರೆ. ಜೊತೆಗೆ ಜಾನುವಾರು ಸಹ ಸಾಕುತ್ತಿದ್ದಾರೆ’ ಎಂದು ತಿಳಿಸಿದರು.