<p>ಕಮತಗಿ (ಅಮೀನಗಡ): ‘ವೃತ್ತಿಯಲ್ಲಿ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ’ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಂಡ್ಯ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ವಿಷ್ಣು ಶಿಂಧೆ ಅಭಿಪ್ರಾಯಪಟ್ಟರು.</p>.<p>ಶುಕ್ರವಾರ ಪಟ್ಟಣದ ಶ್ರೀಮತಿ ವೈ. ಆರ್.ಪಾಟೀಲ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಬಾಗಲಕೋಟೆ ಗುಳೇದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯಸ್ಥಾಪಕ ನಿರ್ದೇಶಕಿ ಡಾ.ಅಪೂರ್ವ ಗುಳೇದ ಮಾತನಾಡಿ, ‘ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದು, ಸಮಾಜಮುಖಿಯಾಗಿ ಕಾರ್ಯ ಮಾಡುವ ಅವಶ್ಯಕತೆ ಇದೆ’ ಎಂದರು.</p>.<p>ಸಂಘದ ಅಧ್ಯಕ್ಷ ಹುಚ್ಚೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಘದ ಸಹ ಕಾರ್ಯದರ್ಶಿ ವಿದ್ಯಾಧರ ಮಳ್ಳಿ ಅಧ್ಯಕ್ಷತೆ ವಹಿಸಿದ್ದರು.</p>.<p>ನಿರ್ದೇಶಕ ಮಂಡಳಿಯ ಎಂ.ಬಿ ಶಾಬಾದಿ, ಆರ್. ಎಸ್ ಬಾಫ್ರಿ, ಆಡಳಿತಾಧಿಕಾರಿ ಎ.ಎಸ್ ಕಲ್ಯಾಣಶೆಟ್ಟಿ, ಪ್ರಾಚಾರ್ಯೆ ಪಿ.ಐ.ಮೋಮಿನ, ಸಾಂಸ್ಕೃತಿಕ ವಿಭಾಗದ ಅನುಪಮಾ ಕಲ್ಯಾಣಿಶೆಟ್ಟಿ, ಎಂ.ಎಂ ಲಾಯದಗುಂದಿ, ಜಿ.ಎಲ್. ವಾಲಿಕಾರ, ಎಸ್.ವಿ. ಕಲ್ಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮತಗಿ (ಅಮೀನಗಡ): ‘ವೃತ್ತಿಯಲ್ಲಿ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವುದು ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ’ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಂಡ್ಯ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ವಿಷ್ಣು ಶಿಂಧೆ ಅಭಿಪ್ರಾಯಪಟ್ಟರು.</p>.<p>ಶುಕ್ರವಾರ ಪಟ್ಟಣದ ಶ್ರೀಮತಿ ವೈ. ಆರ್.ಪಾಟೀಲ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ಬಾಗಲಕೋಟೆ ಗುಳೇದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯಸ್ಥಾಪಕ ನಿರ್ದೇಶಕಿ ಡಾ.ಅಪೂರ್ವ ಗುಳೇದ ಮಾತನಾಡಿ, ‘ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದು, ಸಮಾಜಮುಖಿಯಾಗಿ ಕಾರ್ಯ ಮಾಡುವ ಅವಶ್ಯಕತೆ ಇದೆ’ ಎಂದರು.</p>.<p>ಸಂಘದ ಅಧ್ಯಕ್ಷ ಹುಚ್ಚೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಘದ ಸಹ ಕಾರ್ಯದರ್ಶಿ ವಿದ್ಯಾಧರ ಮಳ್ಳಿ ಅಧ್ಯಕ್ಷತೆ ವಹಿಸಿದ್ದರು.</p>.<p>ನಿರ್ದೇಶಕ ಮಂಡಳಿಯ ಎಂ.ಬಿ ಶಾಬಾದಿ, ಆರ್. ಎಸ್ ಬಾಫ್ರಿ, ಆಡಳಿತಾಧಿಕಾರಿ ಎ.ಎಸ್ ಕಲ್ಯಾಣಶೆಟ್ಟಿ, ಪ್ರಾಚಾರ್ಯೆ ಪಿ.ಐ.ಮೋಮಿನ, ಸಾಂಸ್ಕೃತಿಕ ವಿಭಾಗದ ಅನುಪಮಾ ಕಲ್ಯಾಣಿಶೆಟ್ಟಿ, ಎಂ.ಎಂ ಲಾಯದಗುಂದಿ, ಜಿ.ಎಲ್. ವಾಲಿಕಾರ, ಎಸ್.ವಿ. ಕಲ್ಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>