<p>ತೇರದಾಳ: ಈ ಭಾಗದ ಪವಾಡ ಪುರುಷರಾದ ಗುರುದೇವ ಬ್ರಹ್ಮಾನಂದ ಶಿವಯೋಗಿಗಳ 50ನೇ ಹಾಗೂ ಗುರುದೇವ ಸಿದ್ಧೇಶ್ವರ ಶಿವಯೋಗಿಗಳ 20ನೇ ಪುಣ್ಯಾರಾಧನೆ ಅಂಗವಾಗಿ ಪಟ್ಟಣದಲ್ಲಿ ಶನಿವಾರ ಪಲ್ಲಕ್ಕಿ ಉತ್ಸವ ಹಾಗೂ ಭಾವಚಿತ್ರದ ಮೆರವಣಿಗೆ ಶ್ರದ್ಧಾ–ಭಕ್ತಿಯಿಂದ ನಡೆಯಿತು.</p>.<p>ಕಾರ್ಯಕ್ರಮದ ಅಂಗವಾಗಿ ಗುರುದೇವ ಬ್ರಹ್ಮಾನಂದ ಆಶ್ರಮದಲ್ಲಿ ರುದ್ರಾಭಿಷೇಕ, ವಿಶೇಷ ಅಲಂಕಾರಿತ ಪೂಜೆ, ಮಂಗಳಾರತಿ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.</p>.<p>ಪುಣ್ಯಾರಾಧನೆ ಅಂಗವಾಗಿ ಬಬಲೇಶ್ವರ ತಾಲ್ಲೂಕಿನ ನಾಗರಾಳ ಪರಮಾನಂದ ಯೋಗಾಶ್ರಮದ ಅನಂತಾನಂದ ಶರಣರಿಂದ ಹಮ್ಮಿಕೊಂಡಿದ್ದ ಆಧ್ಯಾತ್ಮಿಕ ಪ್ರವಚನದ ಮಹಾಮಂಗಲ ಹಾಗೂ ಜಪಯಜ್ಞ ಕಾರ್ಯಕ್ರಮ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಉತ್ಸವವು ಗುಮ್ಮಟ ಗಲ್ಲಿ, ಕಾಳಿನ ಬಜಾರ, ಕನ್ನಡ ಶಾಲೆ, ದ್ವಾರ ಬಾಗಿಲು, ಎಸ್ಬಿಐ ಮುಖಾಂತರ ಕಲ್ಲಟ್ಟಿ ಗಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ತಲುಪಿತು. ಕರಡಿ ಮೇಳ ಉತ್ಸವಕ್ಕೆ ಕಳೆ ಕಟ್ಟಿತು. ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಮಿಟಿಯವರು, ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-19-816763171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೇರದಾಳ: ಈ ಭಾಗದ ಪವಾಡ ಪುರುಷರಾದ ಗುರುದೇವ ಬ್ರಹ್ಮಾನಂದ ಶಿವಯೋಗಿಗಳ 50ನೇ ಹಾಗೂ ಗುರುದೇವ ಸಿದ್ಧೇಶ್ವರ ಶಿವಯೋಗಿಗಳ 20ನೇ ಪುಣ್ಯಾರಾಧನೆ ಅಂಗವಾಗಿ ಪಟ್ಟಣದಲ್ಲಿ ಶನಿವಾರ ಪಲ್ಲಕ್ಕಿ ಉತ್ಸವ ಹಾಗೂ ಭಾವಚಿತ್ರದ ಮೆರವಣಿಗೆ ಶ್ರದ್ಧಾ–ಭಕ್ತಿಯಿಂದ ನಡೆಯಿತು.</p>.<p>ಕಾರ್ಯಕ್ರಮದ ಅಂಗವಾಗಿ ಗುರುದೇವ ಬ್ರಹ್ಮಾನಂದ ಆಶ್ರಮದಲ್ಲಿ ರುದ್ರಾಭಿಷೇಕ, ವಿಶೇಷ ಅಲಂಕಾರಿತ ಪೂಜೆ, ಮಂಗಳಾರತಿ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.</p>.<p>ಪುಣ್ಯಾರಾಧನೆ ಅಂಗವಾಗಿ ಬಬಲೇಶ್ವರ ತಾಲ್ಲೂಕಿನ ನಾಗರಾಳ ಪರಮಾನಂದ ಯೋಗಾಶ್ರಮದ ಅನಂತಾನಂದ ಶರಣರಿಂದ ಹಮ್ಮಿಕೊಂಡಿದ್ದ ಆಧ್ಯಾತ್ಮಿಕ ಪ್ರವಚನದ ಮಹಾಮಂಗಲ ಹಾಗೂ ಜಪಯಜ್ಞ ಕಾರ್ಯಕ್ರಮ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಉತ್ಸವವು ಗುಮ್ಮಟ ಗಲ್ಲಿ, ಕಾಳಿನ ಬಜಾರ, ಕನ್ನಡ ಶಾಲೆ, ದ್ವಾರ ಬಾಗಿಲು, ಎಸ್ಬಿಐ ಮುಖಾಂತರ ಕಲ್ಲಟ್ಟಿ ಗಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ತಲುಪಿತು. ಕರಡಿ ಮೇಳ ಉತ್ಸವಕ್ಕೆ ಕಳೆ ಕಟ್ಟಿತು. ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಮಿಟಿಯವರು, ಭಕ್ತರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-19-816763171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>