<p><strong>ತೇರದಾಳ</strong>: ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿ ತಂಬಾಕು ವ್ಯಸನಿಯಾದರೆ ಅನಾರೋಗಕ್ಕೆ ರಹದಾರಿಯಾಗುವುದಲ್ಲದೆ ಕೌಟುಂಬಿಕ ವ್ಯವಸ್ಥೆ ಹಾಳಾಗುತ್ತದೆ. ಆದ್ದರಿಂದ ಸರ್ಕಾರ ತಂಬಾಕು ಹಾಗೂ ಅದರ ಉತ್ಪನ್ನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಿದೆ ಎಂದು ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಚೇರ್ಮನ್ ಡಾ.ಎಂ.ಎಸ್.ದಾನಿಗೊಂಡ ಹೇಳಿದರು.</p>.<p>ದಾನಿಗೊಂಡ ಆಯುರ್ವೇದಿಕ್ ವೈದ್ಯಕೀಯ ಕಾಲೇಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ತೇರದಾಳ ಪೊಲೀಸ್ ಠಾಣೆ ಆಶ್ರಯದಲ್ಲಿ ಶುಕ್ರವಾರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ನಿಷೇಧ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>ತಂಬಾಕು ನಿಷೇಧ ಕುರಿತಂತೆ ಮಹತ್ವದ ಕಾನೂನು ಜಾರಿಯಾಗಬೇಕು. ತಂಬಾಕು ಬೆಳೆಯುವ ರೈತರಿಗೆ ಅನ್ಯಾಯವಾಗದಂತೆ ಅದನ್ನು ಔಷಧ ಮತ್ತಿತರ ತಯಾರಿಕೆಗೆ ಮಾತ್ರ ಬಳಸಿ, ಸೇವನೆಗೆ ನಿಷಿದ್ಧವಿರುವ ಕಾನೂನು ಜಾರಿಯಾಗುವ ಮೂಲಕ ಯುವ ಜನತೆಯ ಆರೋಗ್ಯ ಕಾಪಾಡಬೇಕಿದೆ ಎಂದರು.</p>.<p>ಬನಹಟ್ಟಿಯ ಸರ್ಕಾರಿ ಸಹಾಯಕ ಅಭಿಯೋಜಕರಾದ ಆರ್.ಜಿ.ಶಹಾ ಮಾತನಾಡಿ, ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ನಿಯಂತ್ರಣ ಕಾಯ್ದೆ ಬಗ್ಗೆ ವಿವರಿಸಿದರು.</p>.<p>ಬನಹಟ್ಟಿ ಸೆಷನ್ಸ್ ನ್ಯಾಯಾಧೀಶೆ ಸೌಮ್ಯ ಹೂಲಿ ಕಾರ್ಯಕ್ರಮ ಉದ್ಘಾಟಿಸಿದರು. ತೇರದಾಳ ಪಿಎಸೈ ಶಿವಾನಂದ ಸಿಂಗನ್ನವರ, ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ.ಪಿ.ಬಿ.ಅಪರಾಜ, ಉಪನ್ಯಾಸಕರಾದ ಡಾ.ಶಕುಂತಲಾ ಸಾಸಿವೆಹಳ್ಳಿ, ಡಾ.ನೇಹಾ ರೋಕಡೆ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-19-587225073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೇರದಾಳ</strong>: ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿ ತಂಬಾಕು ವ್ಯಸನಿಯಾದರೆ ಅನಾರೋಗಕ್ಕೆ ರಹದಾರಿಯಾಗುವುದಲ್ಲದೆ ಕೌಟುಂಬಿಕ ವ್ಯವಸ್ಥೆ ಹಾಳಾಗುತ್ತದೆ. ಆದ್ದರಿಂದ ಸರ್ಕಾರ ತಂಬಾಕು ಹಾಗೂ ಅದರ ಉತ್ಪನ್ನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕಿದೆ ಎಂದು ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಚೇರ್ಮನ್ ಡಾ.ಎಂ.ಎಸ್.ದಾನಿಗೊಂಡ ಹೇಳಿದರು.</p>.<p>ದಾನಿಗೊಂಡ ಆಯುರ್ವೇದಿಕ್ ವೈದ್ಯಕೀಯ ಕಾಲೇಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ತೇರದಾಳ ಪೊಲೀಸ್ ಠಾಣೆ ಆಶ್ರಯದಲ್ಲಿ ಶುಕ್ರವಾರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ನಿಷೇಧ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.</p>.<p>ತಂಬಾಕು ನಿಷೇಧ ಕುರಿತಂತೆ ಮಹತ್ವದ ಕಾನೂನು ಜಾರಿಯಾಗಬೇಕು. ತಂಬಾಕು ಬೆಳೆಯುವ ರೈತರಿಗೆ ಅನ್ಯಾಯವಾಗದಂತೆ ಅದನ್ನು ಔಷಧ ಮತ್ತಿತರ ತಯಾರಿಕೆಗೆ ಮಾತ್ರ ಬಳಸಿ, ಸೇವನೆಗೆ ನಿಷಿದ್ಧವಿರುವ ಕಾನೂನು ಜಾರಿಯಾಗುವ ಮೂಲಕ ಯುವ ಜನತೆಯ ಆರೋಗ್ಯ ಕಾಪಾಡಬೇಕಿದೆ ಎಂದರು.</p>.<p>ಬನಹಟ್ಟಿಯ ಸರ್ಕಾರಿ ಸಹಾಯಕ ಅಭಿಯೋಜಕರಾದ ಆರ್.ಜಿ.ಶಹಾ ಮಾತನಾಡಿ, ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ನಿಯಂತ್ರಣ ಕಾಯ್ದೆ ಬಗ್ಗೆ ವಿವರಿಸಿದರು.</p>.<p>ಬನಹಟ್ಟಿ ಸೆಷನ್ಸ್ ನ್ಯಾಯಾಧೀಶೆ ಸೌಮ್ಯ ಹೂಲಿ ಕಾರ್ಯಕ್ರಮ ಉದ್ಘಾಟಿಸಿದರು. ತೇರದಾಳ ಪಿಎಸೈ ಶಿವಾನಂದ ಸಿಂಗನ್ನವರ, ವಕೀಲರ ಸಂಘದ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ.ಪಿ.ಬಿ.ಅಪರಾಜ, ಉಪನ್ಯಾಸಕರಾದ ಡಾ.ಶಕುಂತಲಾ ಸಾಸಿವೆಹಳ್ಳಿ, ಡಾ.ನೇಹಾ ರೋಕಡೆ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-19-587225073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>