<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ಒಂದಲ್ಲ, ಎರಡು ಜವಳಿ ಪಾರ್ಕ್ ಸ್ಥಾಪನೆಯ ಘೋಷಣೆಯಾಗಿವೆ. ಆದರೆ, ಒಂದೂ ಕಾರ್ಯಾರಂಭ ಮಾಡಿಲ್ಲ. ಕೂಡಲೇ ಆರಂಭಿಸಬೇಕು. ಇಲಾಖೆಗೆ ₹1,500 ಕೋಟಿ ಅನುದಾನ ನೀಡಬೇಕು. ಸರ್ಕಾರಿ ಇಲಾಖೆ ನೌಕರರಿಗೆ ನೇಕಾರರ ಬಟ್ಟೆ ಕೊಡುವ ಯೋಜನೆ ಜಾರಿಗೊಳಿಸಬೇಕು ಎಂಬುದು ನೇಕಾರರ ಒತ್ತಾಯವಾಗಿದೆ.</p>.<p>ಜಿಲ್ಲೆಯ ಬಾಗಲಕೋಟೆ, ಹುನಗುಂದ, ಜಮಖಂಡಿ, ತೇರದಾಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕಡೆಗಳಲ್ಲಿ ನೇಕಾರರಿದ್ದಾರೆ. ಇಳಕಲ್ ಸೀರೆ, ಗುಳೇದಗುಡ್ಡ ಖಣ, ರಬಕವಿ–ಬನಹಟ್ಟಿಯಲ್ಲಿನ ಸೀರೆಗಳು ಸಾಕಷ್ಟು ಪ್ರಸಿದ್ಧಿಯಾಗಿವೆ. ಆದರೆ, ಸರಿಯಾದ ಮಾರುಕಟ್ಟೆ ಸೌಲಭ್ಯ ದೊರೆಯದ್ದರಿಂದ ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ.</p>.<p>ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಆರಂಭಿಸುವುದಾಗಿ ಘೋಷಣೆ ಮಾಡಲಾಗಿತ್ತು. ಘೋಷಣೆಯಾಗಿ ಹಲವು ವರ್ಷಗಳೇ ಕಳೆದಿದ್ದರೂ, ಕಾರ್ಯಾರಂಭ ಮಾಡಿಲ್ಲ. ಮತ್ತೆ ಕಾಂಗ್ರೆಸ್ ಸರ್ಕಾರವೇ ಬಂದಿದೆ. </p>.<p>ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ರಬಕವಿ–ಬನಹಟ್ಟಿ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ 25 ಜವಳಿ ಪಾರ್ಕ್ ಆರಂಭಿಸಲಾಗುವುದು. ಮೊದಲ ಪಾರ್ಕ್ ಅನ್ನು ರಬಕವಿ ಬನಹಟ್ಟಿಯಿಂದಲೇ ಆರಂಭಿಸಲಾಗುವುದು ಎಂದು ಹೇಳಿದ್ದರು. ಅದೂ ಜಾರಿಗೆ ಬಂದಿಲ್ಲ.</p>.<p>ನೇಕಾರ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ನಿಗಮ ಮಾಡಲಾಗಿದೆ. ಆದರೆ, ಅದಕ್ಕೆ ಅಗತ್ಯದಷ್ಟು ಅನುದಾನ ಲಭ್ಯವಾಗುತ್ತಿಲ್ಲ. ಕೂಡಲೇ ಅನುದಾನ ನೀಡಿ, ಜನರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬುದು ನೇಕಾರರ ಆಗ್ರಹವಾಗಿದೆ.</p>.<p>ಬಜೆಟ್ನಲ್ಲಿ ಅನುದಾನ ಕಡಿಮೆಯಾಗಿರುವುದರಿಂದ ಸಂಕಷ್ಟಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ, ಬಜೆಟ್ನಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಗೆ ₹1,500 ಕೋಟಿ ಅನುದಾನ ನೀಡಬೇಕು. ನೇಕಾರ ಸಮ್ಮಾನ ಯೋಜನೆ ಮೊತ್ತವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಬೇಕು. </p>.<p>ನೇಕಾರರು ಅಸಂಘಟಿತರಾಗಿದ್ದು, ಅವರಿಗೆ ಕಟ್ಟಡ ಕಾರ್ಮಿಕರ ಮಾದರಿ ಸೌಲಭ್ಯಗಳನ್ನು ನೀಡಬೇಕು. ಕಾರ್ಮಿಕರ ಕಾರ್ಡ್ ನೀಡಿ, ಸೌಲಭ್ಯ ಒದಗಿಸಬೇಕು. ಬಜೆಟ್ ಪೂರ್ವಭಾವಿಯಾಗಿ ನೇಕಾರರೊಂದಿಗೆ ಸಭೆ ನಡೆಸಬೇಕು. ರಾಜ್ಯದಲ್ಲಿ ₹5 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅವರಿಗೆ ನೇಕಾರರಿಂದ ಬಟ್ಟೆ ಸರಬರಾಜು ಮಾಡುವಂತೆ ಆದರೆ, ಕೈತುಂಬ ಕೆಲಸ ಸಿಗಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ.</p>.<p>ಮಾರುಕಟ್ಟೆ ಸರಿಯಾಗಿ ದೊರೆಯದ್ದರಿಂದ ಉತ್ಪನ್ನಗಳ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ನಂದಿನಿ ಮಾದರಿಯಲ್ಲಿ ಅಲ್ಲಲ್ಲಿ ಮಳಿಗೆಳನ್ನು ಒದಗಿಸಬೇಕು. ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.</p>.<div><blockquote>ಬಜೆಟ್ ಮಂಡನೆಗೆ ಮುನ್ನ ಸಭೆ ನಡೆಸಿ ಸಂಕಷ್ಟಗಳನ್ನು ಆಲಿಸಬೇಕು. ಮಾರುಕಟ್ಟೆಗೆ ಮೊದಲ ಆದ್ಯತೆ ನೀಡಬೇಕು.</blockquote><span class="attribution">– ಶಿವಲಿಂಗ ಟಿರಕಿ, ಅಧ್ಯಕ್ಷ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ಒಂದಲ್ಲ, ಎರಡು ಜವಳಿ ಪಾರ್ಕ್ ಸ್ಥಾಪನೆಯ ಘೋಷಣೆಯಾಗಿವೆ. ಆದರೆ, ಒಂದೂ ಕಾರ್ಯಾರಂಭ ಮಾಡಿಲ್ಲ. ಕೂಡಲೇ ಆರಂಭಿಸಬೇಕು. ಇಲಾಖೆಗೆ ₹1,500 ಕೋಟಿ ಅನುದಾನ ನೀಡಬೇಕು. ಸರ್ಕಾರಿ ಇಲಾಖೆ ನೌಕರರಿಗೆ ನೇಕಾರರ ಬಟ್ಟೆ ಕೊಡುವ ಯೋಜನೆ ಜಾರಿಗೊಳಿಸಬೇಕು ಎಂಬುದು ನೇಕಾರರ ಒತ್ತಾಯವಾಗಿದೆ.</p>.<p>ಜಿಲ್ಲೆಯ ಬಾಗಲಕೋಟೆ, ಹುನಗುಂದ, ಜಮಖಂಡಿ, ತೇರದಾಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಬಹುತೇಕ ಕಡೆಗಳಲ್ಲಿ ನೇಕಾರರಿದ್ದಾರೆ. ಇಳಕಲ್ ಸೀರೆ, ಗುಳೇದಗುಡ್ಡ ಖಣ, ರಬಕವಿ–ಬನಹಟ್ಟಿಯಲ್ಲಿನ ಸೀರೆಗಳು ಸಾಕಷ್ಟು ಪ್ರಸಿದ್ಧಿಯಾಗಿವೆ. ಆದರೆ, ಸರಿಯಾದ ಮಾರುಕಟ್ಟೆ ಸೌಲಭ್ಯ ದೊರೆಯದ್ದರಿಂದ ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ.</p>.<p>ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಆರಂಭಿಸುವುದಾಗಿ ಘೋಷಣೆ ಮಾಡಲಾಗಿತ್ತು. ಘೋಷಣೆಯಾಗಿ ಹಲವು ವರ್ಷಗಳೇ ಕಳೆದಿದ್ದರೂ, ಕಾರ್ಯಾರಂಭ ಮಾಡಿಲ್ಲ. ಮತ್ತೆ ಕಾಂಗ್ರೆಸ್ ಸರ್ಕಾರವೇ ಬಂದಿದೆ. </p>.<p>ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ರಬಕವಿ–ಬನಹಟ್ಟಿ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ 25 ಜವಳಿ ಪಾರ್ಕ್ ಆರಂಭಿಸಲಾಗುವುದು. ಮೊದಲ ಪಾರ್ಕ್ ಅನ್ನು ರಬಕವಿ ಬನಹಟ್ಟಿಯಿಂದಲೇ ಆರಂಭಿಸಲಾಗುವುದು ಎಂದು ಹೇಳಿದ್ದರು. ಅದೂ ಜಾರಿಗೆ ಬಂದಿಲ್ಲ.</p>.<p>ನೇಕಾರ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕವಾಗಿ ನಿಗಮ ಮಾಡಲಾಗಿದೆ. ಆದರೆ, ಅದಕ್ಕೆ ಅಗತ್ಯದಷ್ಟು ಅನುದಾನ ಲಭ್ಯವಾಗುತ್ತಿಲ್ಲ. ಕೂಡಲೇ ಅನುದಾನ ನೀಡಿ, ಜನರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬುದು ನೇಕಾರರ ಆಗ್ರಹವಾಗಿದೆ.</p>.<p>ಬಜೆಟ್ನಲ್ಲಿ ಅನುದಾನ ಕಡಿಮೆಯಾಗಿರುವುದರಿಂದ ಸಂಕಷ್ಟಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ, ಬಜೆಟ್ನಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಗೆ ₹1,500 ಕೋಟಿ ಅನುದಾನ ನೀಡಬೇಕು. ನೇಕಾರ ಸಮ್ಮಾನ ಯೋಜನೆ ಮೊತ್ತವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಬೇಕು. </p>.<p>ನೇಕಾರರು ಅಸಂಘಟಿತರಾಗಿದ್ದು, ಅವರಿಗೆ ಕಟ್ಟಡ ಕಾರ್ಮಿಕರ ಮಾದರಿ ಸೌಲಭ್ಯಗಳನ್ನು ನೀಡಬೇಕು. ಕಾರ್ಮಿಕರ ಕಾರ್ಡ್ ನೀಡಿ, ಸೌಲಭ್ಯ ಒದಗಿಸಬೇಕು. ಬಜೆಟ್ ಪೂರ್ವಭಾವಿಯಾಗಿ ನೇಕಾರರೊಂದಿಗೆ ಸಭೆ ನಡೆಸಬೇಕು. ರಾಜ್ಯದಲ್ಲಿ ₹5 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅವರಿಗೆ ನೇಕಾರರಿಂದ ಬಟ್ಟೆ ಸರಬರಾಜು ಮಾಡುವಂತೆ ಆದರೆ, ಕೈತುಂಬ ಕೆಲಸ ಸಿಗಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ.</p>.<p>ಮಾರುಕಟ್ಟೆ ಸರಿಯಾಗಿ ದೊರೆಯದ್ದರಿಂದ ಉತ್ಪನ್ನಗಳ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ನಂದಿನಿ ಮಾದರಿಯಲ್ಲಿ ಅಲ್ಲಲ್ಲಿ ಮಳಿಗೆಳನ್ನು ಒದಗಿಸಬೇಕು. ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.</p>.<div><blockquote>ಬಜೆಟ್ ಮಂಡನೆಗೆ ಮುನ್ನ ಸಭೆ ನಡೆಸಿ ಸಂಕಷ್ಟಗಳನ್ನು ಆಲಿಸಬೇಕು. ಮಾರುಕಟ್ಟೆಗೆ ಮೊದಲ ಆದ್ಯತೆ ನೀಡಬೇಕು.</blockquote><span class="attribution">– ಶಿವಲಿಂಗ ಟಿರಕಿ, ಅಧ್ಯಕ್ಷ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>