ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಧೋಳ: ಸಿಡಿಲು ಬಡಿದು ಬಾಲಕ ಸಾವು 

Last Updated 8 ಸೆಪ್ಟೆಂಬರ್ 2020, 16:13 IST
ಅಕ್ಷರ ಗಾತ್ರ

ಬಾಗಲಕೋಟೆ: ಮುಧೋಳ ತಾಲ್ಲೂಕಿನ ಚಿಚಖಂಡಿ ಕೆ.ಡಿ ಗ್ರಾಮದ ದರ್ಶನ್ ಫಕೀರಪ್ಪ ಮಾದರ (14) ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ದರ್ಶನ್ ತನ್ನ ಅಪ್ಪ ಫಕೀರಪ್ಪ ಮಾದರ ಹಾಗೂ ಸಹೋದರ ಆಕಾಶ ಅವರೊಂದಿಗೆ ಸಂಜೆ ಹೊಲದಲ್ಲಿ ಕುರಿಗಳೊಂದಿಗೆ ಇದ್ದಾಗ ಸಿಡಿಲು ಬಡಿದಿದೆ. ಈ ವೇಳೆ ದರ್ಶನ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಅವರನ್ನು ಮುಧೋಳದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಪರಿಹಾರ ವಿತರಣೆಗೆ ಸೂಚನೆ: ಬಾಲಕನ ಕುಟುಂಬದ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ₹5 ಲಕ್ಷ ಪರಿಹಾರ ವಿತರಣೆಗೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಮೃತಪಟ್ಟ ಬಾಲಕನ ಕುಟುಂಬದ ಇತರ ಸದಸ್ಯರಿಗೂ ಸಿಡಿಲಿನಿಂದ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಿ, ಪರಿಹಾರ ಧನ ನೀಡುವಂತೆ ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT