ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇರದಾಳದಲ್ಲಿ ಅಲ್ಲಮಪ್ರಭು ಜಾತ್ರೆ ವೈಭವ: ಪಾಲನೆಯಾಗದ ಕೋವಿಡ್ ನಿಯಮಾವಳಿ 

Last Updated 6 ಸೆಪ್ಟೆಂಬರ್ 2021, 8:32 IST
ಅಕ್ಷರ ಗಾತ್ರ

ಬಾಗಲಕೋಟೆ: ಕಡೆಯ ಶ್ರಾವಣ ಸೋಮವಾರ ರಬಕವಿ-ಬನಹಟ್ಟಿ ತಾಲ್ಲೂಕಿನ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭುಗಳ ಜಾತ್ರೆ ವೈಭವದಿಂದ ನೆರವೇರಿತು.

ಸಾವಿರಾರು ಮಂದಿ ಪಾಲ್ಗೊಂಡು ನಂದಿಕೋಲು ಉತ್ಸವ, ದೇವರ ಪಾಲಕಿ ಸೇವೆಯನ್ನು ಕಣ್ತುಂಬಿಕೊಂಡರು.

ಹುಬ್ಬಳ್ಳಿ- ಧಾರವಾಡ, ಜಮಖಂಡಿ, ರಬಕವಿ-ಬನಹಟ್ಟಿ, ಬೆಳಗಾವಿ ನಗರ, ಅಥಣಿ, ರಾಯಭಾಗ ಹಾಗೂ ನೆರೆಯ ಮಹಾರಾಷ್ಟ್ರದಿಂದ ಖಾಸಗಿ ವಾಹನಗಳಲ್ಲಿ ಭಕ್ತರು ಬಂದು ಜಾತ್ರೆಯಲ್ಲಿ ಪಾಲ್ಗೊಂಡರು.

ಜಾತ್ರೆಯಲ್ಲಿ ಎಲ್ಲಿಯೂ ಕೋವಿಡ್ ನಿಯಮಾವಳಿ ಪಾಲನೆಯಾಗಿರುವುದು ಕಂಡುಬರಲಿಲ್ಲ. ಸುರಕ್ಷಿತ ಅಂತರ ಮಾಯವಾಗಿತ್ತು. ಈ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ ನಡೆಯುವುದಿಲ್ಲ ದೇವಸ್ಥಾನ ಸಮಿತಿ ಹಾಗೂ ಸ್ಥಳೀಯ ಪುರಸಭೆ ಆಡಳಿತ ಹೇಳಿತ್ತು. ಆದರೆ ನಿರ್ಬಂಧಗಳನ್ನು ಗಾಳಿಗೆ ತೂರಿ ಧಾರ್ಮಿಕ ಕಾರ್ಯಕ್ರಮ ಆಚರಿಸಲಾಯಿತು. ಜಾತ್ರೆಯಲ್ಲಿ ಎಲ್ಲಿಯೂ ಪೊಲೀಸ್ ಬಂದೋಬಸ್ತ್ ಕಂಡುಬರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT