‘ಇಲ್ಲಿ ಖಾತ್ರಿ ಯೋಜನೆಯಲ್ಲಿ ಸರಿಯಾಗಿ ಕೆಲಸ ಸಿಗದು. ಸಿಕ್ಕರೂ ಸರಿಯಾಗಿ ಸಂಬಳ ಆಗದು. ಮತ್ತು ಕಡಿಮೆ ಸಂಬಳದಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗುವುದರಿಂದ ಜನರು ಬೇರೆ ಊರುಗಳಿಗೆ ದುಡಿಯಲು ಹೋಗುತ್ತಾರೆ. ತಾಂಡೆಯಲ್ಲಿ 20ಕ್ಕೂ ಅಧಿಕ ಕುಟುಂಬಗಳ ನೂರಾರು ಜನರು ಕೆಲಸವನ್ನು ಅರಸಿಕೊಂಡು ಮಂಗಳೂರು, ಉಡುಪಿ, ಗೋವಾ, ಶಿವಮೊಗ್ಗಾ ಮೊದಲಾದ ಕಡೆಗೆ ಗುಳೆ ಹೋಗಿದ್ದಾರೆ’ ಎಂದು ಹೇಳಿದರು.