<p><strong>ಬಾಗಲಕೋಟೆ</strong>: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಡುವೆ ಮೊದಲಿನಿಂದ ಹೊಂದಾಣಿಕೆ ಇದೆ. ಸರ್ಕಾರ ರಚನೆಗೆ ಬೆಂಬಲ ಕೋರಿಯೇ ಇತ್ತೀಚೆಗೆ ಅಮಿತ್ ಶಾ ಅವರನ್ನು ವಿಜಯೇಂದ್ರ ಭೇಟಿಯಾಗಿದ್ದರು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p>.<p>‘ಆದರೆ, ಬಿಜೆಪಿಯ ಬಹುತೇಕ ಶಾಸಕರು ಇದಕ್ಕೆ ಒಪ್ಪಲ್ಲ. ಇಂತಹದ್ದನ್ನು ಒಪ್ಪುವುದಿಲ್ಲ ಎಂದೇ ನನ್ನನ್ನು ಹೊರ ಹಾಕಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಬಿಜೆಪಿ ಭಾಗಿಯಾಗಲ್ಲ ಎಂಬ ಸಂದೇಶ ಬಿಜೆಪಿ ಹೈಕಮಾಂಡ್ ನೀಡಿದೆ ಎಂಬುದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಾತುಗಳಿಂದ ಸ್ಪಷ್ಟವಾಗುತ್ತದೆ. ಇದರದಲ್ಲಿ ಮಧ್ಯಪ್ರವೇಶಿಸಲು ಬಿಜೆಪಿ ಸಿದ್ಧವಿಲ್ಲ’ ಎಂದರು.</p>.<p>‘ಮುಖ್ಯಮಂತ್ರಿ ಯಾರನ್ನು ಮಾಡಬೇಕು ಎಂಬುದು ಕಾಂಗ್ರೆಸ್ನ ಆಂತರಿಕ ವಿಚಾರ. ಆದರೆ, ಕಾಂಗ್ರೆಸ್ನಲ್ಲಿ ಶಾಸಕರ ಖರೀದಿ ನಡೆಯುತ್ತಿದೆ. ಹಿಂದೆಯೂ ನಡೆದಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಡುವೆ ಮೊದಲಿನಿಂದ ಹೊಂದಾಣಿಕೆ ಇದೆ. ಸರ್ಕಾರ ರಚನೆಗೆ ಬೆಂಬಲ ಕೋರಿಯೇ ಇತ್ತೀಚೆಗೆ ಅಮಿತ್ ಶಾ ಅವರನ್ನು ವಿಜಯೇಂದ್ರ ಭೇಟಿಯಾಗಿದ್ದರು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p>.<p>‘ಆದರೆ, ಬಿಜೆಪಿಯ ಬಹುತೇಕ ಶಾಸಕರು ಇದಕ್ಕೆ ಒಪ್ಪಲ್ಲ. ಇಂತಹದ್ದನ್ನು ಒಪ್ಪುವುದಿಲ್ಲ ಎಂದೇ ನನ್ನನ್ನು ಹೊರ ಹಾಕಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಬಿಜೆಪಿ ಭಾಗಿಯಾಗಲ್ಲ ಎಂಬ ಸಂದೇಶ ಬಿಜೆಪಿ ಹೈಕಮಾಂಡ್ ನೀಡಿದೆ ಎಂಬುದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಾತುಗಳಿಂದ ಸ್ಪಷ್ಟವಾಗುತ್ತದೆ. ಇದರದಲ್ಲಿ ಮಧ್ಯಪ್ರವೇಶಿಸಲು ಬಿಜೆಪಿ ಸಿದ್ಧವಿಲ್ಲ’ ಎಂದರು.</p>.<p>‘ಮುಖ್ಯಮಂತ್ರಿ ಯಾರನ್ನು ಮಾಡಬೇಕು ಎಂಬುದು ಕಾಂಗ್ರೆಸ್ನ ಆಂತರಿಕ ವಿಚಾರ. ಆದರೆ, ಕಾಂಗ್ರೆಸ್ನಲ್ಲಿ ಶಾಸಕರ ಖರೀದಿ ನಡೆಯುತ್ತಿದೆ. ಹಿಂದೆಯೂ ನಡೆದಿತ್ತು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>