ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ | ಕೊರೊನಾ ಸೋಂಕು ಗುಣಮುಖ: ಮೂವರು ಮನೆಗೆ

Last Updated 4 ಜೂನ್ 2020, 17:02 IST
ಅಕ್ಷರ ಗಾತ್ರ

ಬಾಗಲಕೋಟೆ: ಕೋವಿಡ್–19 ಸೋಂಕಿನಿಂದ ಗುಣಮುಖರಾಗಿ ಬಾದಾಮಿ ತಾಲ್ಲೂಕು ಢಾಣಕಶಿರೂರಿನ ಮೂವರುಗುರುವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದರು.

ಢಾಣಕಶಿರೂರಿನ 12 ವರ್ಷದ ಬಾಲಕಿ, 50 ವರ್ಷದ ಪುರುಷ ಹಾಗೂ 23 ವರ್ಷದ ಯುವಕ ಸೋಂಕಿನಿಂದ ಗುಣಮುಖರಾದವರು. ಆಸ್ಪತ್ರೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಪ್ರಮಾಣಪತ್ರಗಳನ್ನು ವಿತರಿಸಿದರು. ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಚಪ್ಪಾಳೆ ತಟ್ಟುವ ಮೂಲಕ ಎಲ್ಲರನ್ನೂ ಬೀಳ್ಕೊಟ್ಟರು.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 91 ಮಂದಿಗೆ ಸೋಂಕು ದೃಢಪಟ್ಟಿದೆ. ಅವರಲ್ಲಿ 74 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದು, 17 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT