<p><strong>ಬೀಳಗಿ: ‘</strong>ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು. ತಾಯಂದಿರು ಮನಸ್ಸು ಮಾಡಿದರೆ ಮಕ್ಕಳು ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಸಾಧ್ಯ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಚೆನ್ನಕೇಶವ ಹೇಳಿದರು.</p>.<p>ಪಟ್ಟಣದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಬುಧವಾರ ಏರ್ಪಡಿಸಿದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಾ ಯೋಜನಾಧಿಕಾರಿ ಸುಬ್ರಾಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಮತ್ತು ಇತರ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಅವುಗಳನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ವಿವರಿಸಿದರು.</p>.<p>ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ಪ್ರಕಾಶ ಮಾತನಾಡಿ, ‘ಆರೋಗ್ಯ ಇಲಾಖೆಯಿಂದ ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಆಯೋಜನೆ ಮಾಡಲಾಗುತ್ತಿದ್ದು ಅವುಗಳ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.</p>.<p>ವಲಯ ಮೇಲ್ವಿಚಾರಕಿ ನಿರ್ಮಲಾ ಗೊರ್ಜನಾಳ, ಗಿರಿಜಾ ಕಟಗೇರಿ, ಬೀಳಗಿ ವಲಯದ ಎಲ್ಲ ಸೇವಾ ಪ್ರತಿನಿಧಿಗಳು ಒಕ್ಕೂಟದ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ: ‘</strong>ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು. ತಾಯಂದಿರು ಮನಸ್ಸು ಮಾಡಿದರೆ ಮಕ್ಕಳು ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಸಾಧ್ಯ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಚೆನ್ನಕೇಶವ ಹೇಳಿದರು.</p>.<p>ಪಟ್ಟಣದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಬುಧವಾರ ಏರ್ಪಡಿಸಿದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಾ ಯೋಜನಾಧಿಕಾರಿ ಸುಬ್ರಾಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕು ಮತ್ತು ಇತರ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಅವುಗಳನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ವಿವರಿಸಿದರು.</p>.<p>ಆರೋಗ್ಯ ಇಲಾಖೆಯ ಸಂಪನ್ಮೂಲ ವ್ಯಕ್ತಿ ಪ್ರಕಾಶ ಮಾತನಾಡಿ, ‘ಆರೋಗ್ಯ ಇಲಾಖೆಯಿಂದ ಸಾಕಷ್ಟು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಆಯೋಜನೆ ಮಾಡಲಾಗುತ್ತಿದ್ದು ಅವುಗಳ ಸದುಪಯೋಗ ಪಡೆಯಬೇಕು’ ಎಂದು ತಿಳಿಸಿದರು.</p>.<p>ವಲಯ ಮೇಲ್ವಿಚಾರಕಿ ನಿರ್ಮಲಾ ಗೊರ್ಜನಾಳ, ಗಿರಿಜಾ ಕಟಗೇರಿ, ಬೀಳಗಿ ವಲಯದ ಎಲ್ಲ ಸೇವಾ ಪ್ರತಿನಿಧಿಗಳು ಒಕ್ಕೂಟದ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>