ಬಾಗಲಕೋಟೆ: ಇಲ್ಲಿನ ಜಮಖಂಡಿ ಮೂಲದ ಗಾಲ್ಫರ್ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್ನ ಗಾಲ್ಫ್ ಆಟದಲ್ಲಿ ಫೈನಲ್ ಪ್ರವೇಶಿಸಿರುವುದು ಜಿಲ್ಲೆಯ ಜನರಲ್ಲಿ ಹೆಮ್ಮೆಯ ಭಾವ ಮೂಡಿಸಿದೆ.
ಅದಿತಿ ತಂದೆ ಅಶೋಕ ಗುಡ್ಲಮನಿ ಜಮಖಂಡಿಯವರು. ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ನ ಗಾಲ್ಫ್ ಸ್ಪರ್ಧೆಯಲ್ಲಿ ಅದಿತಿ ಫೈನಲ್ ತಲುಪಿದ್ದಾರೆ. ಅಶೋಕ್ ಅವರ ಸಹೋದರರಾದ ಅರುಣ್ ಹಾಗೂ ಬಸವರಾಜ ಜಮಖಂಡಿಯಲ್ಲಿಯೇ ನೆಲೆಸಿದ್ದಾರೆ. ಅವರ ಕುಟುಂಬ ವರ್ಗದವರು ಹಾಗೂ ಜಿಲ್ಲೆಯ ಕ್ರೀಡಾ ಅಭಿಮಾನಿಗಳು ಅದಿತಿ ಪದಕ ಗೆಲ್ಲಲಿ ಎಂದು ಹಾರೈಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.