<p><strong>ಬಾಗಲಕೋಟೆ</strong>: ಕಾಯಕದಲ್ಲಿ ಮೇಲು–ಕೀಳಿಲ್ಲ. ಜಾತಿ ವ್ಯವಸ್ಥೆ ಸಾಮಾಜಿಕ ಅನಿಷ್ಟವಾಗಿದೆ. ಆರ್ಥಿಕ, ಸಾಮಾಜಿಕ ಸಮಾನತೆ ಸಾಧನೆಯಿಂದ ಜಾತಿ ವ್ಯವಸ್ಥೆ ನಿರ್ಮೂಲನೆಯಾಗುತ್ತದೆ ಎಂದು ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>ಬುಧವಾರ ಬಾಗಲಕೋಟೆಯ ಕಲಾಭವನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಅಂಗವಾಗಿ ನಡೆದ ‘ಸಂವಾದ’ದಲ್ಲಿ ಮಾತನಾಡಿದ ಅವರು, ಜಾತಿ ಭೇದ ಹೊಡೆದು ಹಾಕಲು ಬಸವಣ್ಣ ಶ್ರಮಿಸಿದ್ದರು. ಮೀಸಲಾತಿಗಾಗಿ ಜಾತಿ ಮುಂದುವರೆದಿದೆ. ಅದರ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕು ಎಂದರು.</p>.<p>ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣ ನೀಡಿದ ಇಷ್ಟಲಿಂಗ ಪೂಜೆ ಮಾಡಬೇಕು. ಅದರೊಂದಿಗೆ ಧರ್ಮಗುರು ಬಸವಣ್ಣನಿಗೂ ಗೌರವ ಸೂಚಕವಾಗಿ ಪೂಜೆ ಸಲ್ಲಿಸಿದರೆ ತಪ್ಪೇನಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ದೆವ್ವ, ಭೂತ ಇಲ್ಲ. ಅದೊಂದು ಸುಳ್ಳು ಕಲ್ಪನೆ. ಕೆಲವರು ಮೂಢನಂಬಿಕೆಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಾರೆ. ಮಾನಸಿಕ ಕಾಯಿಲೆಯಾಗಿದೆ ಎಂದರು.</p>.<p>‘ಬಸವಣ್ಣನವರು ದಯವೇ ಧರ್ಮದ ಮೂಲ ಎಂದಿದ್ದಾರೆ. ಎಲ್ಲರಿಗೂ ಲೇಸನೇ ಬಯಸಿದ್ದಾರೆ. ಗೋ ಹತ್ಯೆ ನಿಲ್ಲಿಸಲು ಧ್ವನಿ ಎತ್ತಬೇಕು. ಆಗಲೇ ನಿಲ್ಲುತ್ತದೆ ಎಂದು ಹೇಳಿದರು.</p>.<p>ವಿಧವೆ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿಡಸೋಶಿ ಸಿದ್ದ ಸಂಸ್ಥಾನಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಪರಿವರ್ತನೆಗೆ ಮುಂದಾಗುವ ಅವಶ್ಯಕತೆ ಇದೆ. ಹೇಳುವುದಕ್ಕಿಂತ ಕೃತಿಯಲ್ಲಿ ಜಾರಿಗೆ ತರಬೇಕು. ಹಲವು ಮೂಢನಂಬಿಕೆಗಳ ನಿವಾರಣೆ ಮಾಡಿದ್ದೇವೆ. ಮಹಿಳೆಯರೂ ಜಾಗೃತರಾಗಬೇಕು ಎಂದರು.</p>.<p>ಮನುಷ್ಯರೆಲ್ಲರೂ ಒಂದು ಎನ್ನುವ ಭಾವ ಬೆಳೆಸಿಕೊಳ್ಳಬೇಕು. ವಿಧವೆಗೆ ಮದುವೆ ಮಾಡಿಸಿದ್ದೇವೆ. ನಿಮಗೆಲ್ಲ ಗೊತ್ತಾದರೆ, ಮುಂದೆ ನಮಸ್ಕಾರ ಹೇಳಿ, ಹಿಂದೆ ವಿರೋಧ ಮಾಡುತ್ತೀರಿ ಎಂದು ಹೇಳಿದರು.</p>.<p>ಇಳಕಲ್ ಗುರುಮಹಾಂತ ಸ್ವಾಮೀಜಿ ಮಾತನಾಡಿ, ದುಶ್ಚಟಗಳು ಬಿಡಿಸುವ ಕಾರ್ಯ ಇಂದಿಗೂ ಮುಂದುವರೆದಿದೆ. ಮೊದಲು ಇಳಕಲ್ನ ಹಿರಿಯ ಶ್ರೀಗಳು ಮಾತ್ರ ಮಾಡುತ್ತಿದ್ದರು. ಈಗ ಎಲ್ಲ ಸ್ವಾಮೀಜಿಗಳೂ ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ ಎಂದರು.</p>.<p>ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ, ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಶಿರೂರಿನ ಬಸವಲಿಂಗ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಕಾಯಕದಲ್ಲಿ ಮೇಲು–ಕೀಳಿಲ್ಲ. ಜಾತಿ ವ್ಯವಸ್ಥೆ ಸಾಮಾಜಿಕ ಅನಿಷ್ಟವಾಗಿದೆ. ಆರ್ಥಿಕ, ಸಾಮಾಜಿಕ ಸಮಾನತೆ ಸಾಧನೆಯಿಂದ ಜಾತಿ ವ್ಯವಸ್ಥೆ ನಿರ್ಮೂಲನೆಯಾಗುತ್ತದೆ ಎಂದು ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>ಬುಧವಾರ ಬಾಗಲಕೋಟೆಯ ಕಲಾಭವನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಅಂಗವಾಗಿ ನಡೆದ ‘ಸಂವಾದ’ದಲ್ಲಿ ಮಾತನಾಡಿದ ಅವರು, ಜಾತಿ ಭೇದ ಹೊಡೆದು ಹಾಕಲು ಬಸವಣ್ಣ ಶ್ರಮಿಸಿದ್ದರು. ಮೀಸಲಾತಿಗಾಗಿ ಜಾತಿ ಮುಂದುವರೆದಿದೆ. ಅದರ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕು ಎಂದರು.</p>.<p>ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಣ್ಣ ನೀಡಿದ ಇಷ್ಟಲಿಂಗ ಪೂಜೆ ಮಾಡಬೇಕು. ಅದರೊಂದಿಗೆ ಧರ್ಮಗುರು ಬಸವಣ್ಣನಿಗೂ ಗೌರವ ಸೂಚಕವಾಗಿ ಪೂಜೆ ಸಲ್ಲಿಸಿದರೆ ತಪ್ಪೇನಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ದೆವ್ವ, ಭೂತ ಇಲ್ಲ. ಅದೊಂದು ಸುಳ್ಳು ಕಲ್ಪನೆ. ಕೆಲವರು ಮೂಢನಂಬಿಕೆಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಾರೆ. ಮಾನಸಿಕ ಕಾಯಿಲೆಯಾಗಿದೆ ಎಂದರು.</p>.<p>‘ಬಸವಣ್ಣನವರು ದಯವೇ ಧರ್ಮದ ಮೂಲ ಎಂದಿದ್ದಾರೆ. ಎಲ್ಲರಿಗೂ ಲೇಸನೇ ಬಯಸಿದ್ದಾರೆ. ಗೋ ಹತ್ಯೆ ನಿಲ್ಲಿಸಲು ಧ್ವನಿ ಎತ್ತಬೇಕು. ಆಗಲೇ ನಿಲ್ಲುತ್ತದೆ ಎಂದು ಹೇಳಿದರು.</p>.<p>ವಿಧವೆ ಹೆಣ್ಣು ಮಕ್ಕಳನ್ನು ಕೀಳಾಗಿ ಕಾಣುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿಡಸೋಶಿ ಸಿದ್ದ ಸಂಸ್ಥಾನಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಪರಿವರ್ತನೆಗೆ ಮುಂದಾಗುವ ಅವಶ್ಯಕತೆ ಇದೆ. ಹೇಳುವುದಕ್ಕಿಂತ ಕೃತಿಯಲ್ಲಿ ಜಾರಿಗೆ ತರಬೇಕು. ಹಲವು ಮೂಢನಂಬಿಕೆಗಳ ನಿವಾರಣೆ ಮಾಡಿದ್ದೇವೆ. ಮಹಿಳೆಯರೂ ಜಾಗೃತರಾಗಬೇಕು ಎಂದರು.</p>.<p>ಮನುಷ್ಯರೆಲ್ಲರೂ ಒಂದು ಎನ್ನುವ ಭಾವ ಬೆಳೆಸಿಕೊಳ್ಳಬೇಕು. ವಿಧವೆಗೆ ಮದುವೆ ಮಾಡಿಸಿದ್ದೇವೆ. ನಿಮಗೆಲ್ಲ ಗೊತ್ತಾದರೆ, ಮುಂದೆ ನಮಸ್ಕಾರ ಹೇಳಿ, ಹಿಂದೆ ವಿರೋಧ ಮಾಡುತ್ತೀರಿ ಎಂದು ಹೇಳಿದರು.</p>.<p>ಇಳಕಲ್ ಗುರುಮಹಾಂತ ಸ್ವಾಮೀಜಿ ಮಾತನಾಡಿ, ದುಶ್ಚಟಗಳು ಬಿಡಿಸುವ ಕಾರ್ಯ ಇಂದಿಗೂ ಮುಂದುವರೆದಿದೆ. ಮೊದಲು ಇಳಕಲ್ನ ಹಿರಿಯ ಶ್ರೀಗಳು ಮಾತ್ರ ಮಾಡುತ್ತಿದ್ದರು. ಈಗ ಎಲ್ಲ ಸ್ವಾಮೀಜಿಗಳೂ ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ ಎಂದರು.</p>.<p>ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ, ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಶಿರೂರಿನ ಬಸವಲಿಂಗ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>