<p><strong>ಬಾಗಲಕೋಟೆ</strong>: ವಿಶ್ವ ಪ್ರಸಿದ್ಧ ಪ್ರವಾಸಿ ತಾಣಗಳು ಹೊಂದಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಸಾಕಷ್ಟು ಅವಕಾಶಗಳಿವೆ. ಆದರೆ, ನಿಶ್ಚಿತ ಗುರಿಯೊಂದಿಗೆ ಸಾಗದ್ದರಿಂದ ಪ್ರವಾಸೋದ್ಯಮ ಬೆಳವಣಿಗೆ ಕಾಣುತ್ತಿಲ್ಲ.</p>.<p>ಚಾಲುಕ್ಯರ ಶಿಲ್ಪಕಲೆಯ ತೊಟ್ಟಿಲಾದ ಐಹೊಳೆ ಗ್ರಾಮದ ಸ್ಥಳಾಂತರ ವಿಷಯ ಹಲವಾರು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಸ್ಥಳಾಂತರಕ್ಕೆ ಈ ಹಿಂದೆ ಭೂಮಿ ಪೂಜೆಯೂ ಆಗಿದೆ. ಆದರೆ, ಇನ್ನೂ ಸ್ಥಳಾಂತರ ಪ್ರಕ್ರಿಯೆ ಮಾತ್ರ ಆರಂಭವಾಗಿಲ್ಲ.</p>.<p>ಐಹೊಳೆಯಲ್ಲಿರುವ ಹಲವಾರು ಸ್ಮಾರಕಗಳು ಮನೆಗಳ ಸಂದಿ ಗೊಂದಿಗಳಲ್ಲಿ ಸಿಕ್ಕು ಶಿಥಿಲವಾಗಿವೆ. ಸ್ಮಾರಕಗಳಲ್ಲಿಯೇ ವಸ್ತುಗಳನ್ನು ಸಂಗ್ರಹಿಸಿಡುವುದು, ಜಾನುವಾರುಗಳನ್ನು ಕಟ್ಟುವುದು ಇತ್ಯಾದಿ ಮಾಡುವುದರಿಂದ ಪ್ರವಾಸಿಗರು ಅತ್ತ ಹೋಗುವುದನ್ನೇ ನಿಲ್ಲಿಸಿದ್ದಾರೆ.</p>.<p>2013 ರಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಐಹೊಳೆ ಸ್ಮಾರಕಗಳ ರಕ್ಷಣೆಗೆ ಗ್ರಾಮವನ್ನು ಸಂಪೂರ್ಣ ಸ್ಥಳಾಂತರ ಮಾಡುವುದಾಗಿ ಹೇಳಿದ್ದರು. ಚಾಲುಕ್ಯರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರೂ, ಕಾರ್ಯಾರಂಭ ಮಾಡಿಲ್ಲ. ಪ್ರಾಧಿಕಾರಕ್ಕೆ ₹2 ಕೋಟಿ ಬಿಡುಗಡೆ ಮಾಡಲಾಗುವುದು. ಜನವರಿ ಅಂತ್ಯಕ್ಕೆ ಸ್ಮಾರಕಗಳಿಗೆ ಹೊಂದಿಕೊಂಡಿರುವ ಮನೆಗಳನ್ನು ಸ್ಥಳಾಂತರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದ್ದರು. ಆದರೆ, ಮನೆ ಸ್ಥಳಾಂತರವಾಗಿಲ್ಲ.</p>.<p>ಇಡೀ ಗ್ರಾಮವನ್ನೇ ಸ್ಥಳಾಂತರ ಮಾಡಿದರೆ, ಪಟ್ಟದಕಲ್ಲಿನ ಹಾಗೆ ಒಂದೇ ಸಮುಚ್ಛಯದಲ್ಲಿ 70ಕ್ಕೂ ಹೆಚ್ಚು ಸ್ಮಾರಕಗಳನ್ನು ನೋಡಬಹುದಾಗಿದೆ. ಇದರಿಂದ ಐಹೊಳೆಯು ಹೊಸ ಹೊಳಪನ್ನೇ ಪಡೆಯಲಿದೆ. ಇಚ್ಛಾಶಕ್ತಿ ಕೊರತೆಯಿಂದ ಸ್ಥಳಾಂತರ ವಿಷಯ ಮುಂದೂಡಿಕೆಯಾಗುತ್ತಲೇ ಇದೆ.</p>.<p>ಸ್ಮಾರಕಗಳಿಗೆ ರಸ್ತೆ ಸಂಪರ್ಕ, ಶೌಚಾಲಯ, ವಸತಿ ಸೌಕರ್ಯ, ಉತ್ತಮ ಹೋಟೆಲ್, ಸಾರಿಗೆ ಸಂಪರ್ಕ ಹಾಗೂ ಪಾರ್ಕಿಂಗ್ ಮತ್ತಿತರ ಮೂಲ ಸೌಲಭ್ಯಗಳು ಇಲ್ಲದ ಕಾರಣ ಪ್ರವಾಸಿಗರು ಪರದಾಡುವಂತಾಗಿದೆ.</p>.<p>ಬಾದಾಮಿ ಅಗಸ್ತ್ಯತೀರ್ಥ ದಂಡೆಯ 95 ಮನೆಗಳ ತೆರವು ಕಾರ್ಯಾಚರಣೆ ಎರಡು ದಶಕಗಳಿಂದ ನನೆಗುದಿಗೆ ಬಿದ್ದಿದೆ. ಮೇಣ ಬಸದಿ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲಿಯೇ ವಾಹನ ಪಾರ್ಕಿಂಗ್ ಮಾಡುವಂತಾಗಿದೆ.</p>.<p>ಪ್ರವಾಸಿಗರ ವಾಹನಗಳ ಪಾರ್ಕಿಂಗ್ ಮಾಡಲು ಪಾರ್ಕಿಂಗ್ ಪ್ಲಾಜಾ ನಿರ್ಮಾಣಕ್ಕಾಗಿ ಎಪಿಎಂಸಿಯು 9 ಎಕರೆ ಭೂಮಿಯನ್ನು ಪ್ರವಾಸೋದ್ಯಮ ಇಲಾಖೆಗೆ ಕೊಟ್ಟಿದೆ. ನಿವೇಶನ ಇನ್ನೂ ಹಸ್ತಾಂತರವಾಗಿಲ್ಲ ಎಂಬುದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಮಾತು. ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಸೌಲಭ್ಯ ಕಲ್ಪಿಸಲು ಹಿನ್ನಡೆಯಾಗಿದೆ.</p>.<p>ಕೂಡಲಸಂಗಮ ಅಭಿವೃದ್ಧಿಯೂ ಕುಂಟುತ್ತಾ ಸಾಗಿದೆ. ದೆಹಲಿ ಅಕ್ಷರಧಾಮ ಮಾದರಿಯಲ್ಲಿ ಬಸವ ಅಂತರರಾಷ್ಟ್ರೀಯ ಕೇಂದ್ರ ನಿರ್ಮಾಣವನ್ನು ₹15 ಕೋಟಿ ವೆಚ್ಚದಲ್ಲಿ ಆರಂಭಿಸಿ 2005ರಲ್ಲಿ ಪೂರ್ಣಗೊಳಿಸಲಾಗಿದೆ. ಇಂದಿನವರೆಗೂ ಉದ್ಘಾಟನೆಯಾಗಿಲ್ಲ. ವಿವಿಧ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಸಮಗ್ರ ಅಭಿವೃದ್ಧಿ ಮಾಡಬೇಕಿದೆ.</p>.<div><blockquote>ಪ್ರವಾಸೋದ್ಯಮ ಬೆಳೆಯಲು ಪ್ರವಾಸಿಗರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಬಾಗಲಕೋಟೆಯಲ್ಲಿದೆ. ಅದನ್ನು ಬಾದಾಮಿಗೆ ಸ್ಥಳಾಂತರಿಸಬೇಕು.</blockquote><span class="attribution">–ಎಸ್.ಎಚ್. ವಾಸನ ಅಧ್ಯಕ್ಷ ನಿಸರ್ಗ ಬಳಗ</span></div>.<div><blockquote>ಐಹೊಳೆ ಸ್ಥಳಾಂತರಕ್ಕೆ ಜಾಗ ತೆಗೆದುಕೊಳ್ಳಲು ಭೂಮಿ ಮಾಲೀಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗಿದೆ.</blockquote><span class="attribution">–ಕೆ.ಎಂ. ಜಾನಕಿ ಅಧ್ಯಕ್ಷರು ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ವಿಶ್ವ ಪ್ರಸಿದ್ಧ ಪ್ರವಾಸಿ ತಾಣಗಳು ಹೊಂದಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಸಾಕಷ್ಟು ಅವಕಾಶಗಳಿವೆ. ಆದರೆ, ನಿಶ್ಚಿತ ಗುರಿಯೊಂದಿಗೆ ಸಾಗದ್ದರಿಂದ ಪ್ರವಾಸೋದ್ಯಮ ಬೆಳವಣಿಗೆ ಕಾಣುತ್ತಿಲ್ಲ.</p>.<p>ಚಾಲುಕ್ಯರ ಶಿಲ್ಪಕಲೆಯ ತೊಟ್ಟಿಲಾದ ಐಹೊಳೆ ಗ್ರಾಮದ ಸ್ಥಳಾಂತರ ವಿಷಯ ಹಲವಾರು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಸ್ಥಳಾಂತರಕ್ಕೆ ಈ ಹಿಂದೆ ಭೂಮಿ ಪೂಜೆಯೂ ಆಗಿದೆ. ಆದರೆ, ಇನ್ನೂ ಸ್ಥಳಾಂತರ ಪ್ರಕ್ರಿಯೆ ಮಾತ್ರ ಆರಂಭವಾಗಿಲ್ಲ.</p>.<p>ಐಹೊಳೆಯಲ್ಲಿರುವ ಹಲವಾರು ಸ್ಮಾರಕಗಳು ಮನೆಗಳ ಸಂದಿ ಗೊಂದಿಗಳಲ್ಲಿ ಸಿಕ್ಕು ಶಿಥಿಲವಾಗಿವೆ. ಸ್ಮಾರಕಗಳಲ್ಲಿಯೇ ವಸ್ತುಗಳನ್ನು ಸಂಗ್ರಹಿಸಿಡುವುದು, ಜಾನುವಾರುಗಳನ್ನು ಕಟ್ಟುವುದು ಇತ್ಯಾದಿ ಮಾಡುವುದರಿಂದ ಪ್ರವಾಸಿಗರು ಅತ್ತ ಹೋಗುವುದನ್ನೇ ನಿಲ್ಲಿಸಿದ್ದಾರೆ.</p>.<p>2013 ರಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಐಹೊಳೆ ಸ್ಮಾರಕಗಳ ರಕ್ಷಣೆಗೆ ಗ್ರಾಮವನ್ನು ಸಂಪೂರ್ಣ ಸ್ಥಳಾಂತರ ಮಾಡುವುದಾಗಿ ಹೇಳಿದ್ದರು. ಚಾಲುಕ್ಯರ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರೂ, ಕಾರ್ಯಾರಂಭ ಮಾಡಿಲ್ಲ. ಪ್ರಾಧಿಕಾರಕ್ಕೆ ₹2 ಕೋಟಿ ಬಿಡುಗಡೆ ಮಾಡಲಾಗುವುದು. ಜನವರಿ ಅಂತ್ಯಕ್ಕೆ ಸ್ಮಾರಕಗಳಿಗೆ ಹೊಂದಿಕೊಂಡಿರುವ ಮನೆಗಳನ್ನು ಸ್ಥಳಾಂತರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದ್ದರು. ಆದರೆ, ಮನೆ ಸ್ಥಳಾಂತರವಾಗಿಲ್ಲ.</p>.<p>ಇಡೀ ಗ್ರಾಮವನ್ನೇ ಸ್ಥಳಾಂತರ ಮಾಡಿದರೆ, ಪಟ್ಟದಕಲ್ಲಿನ ಹಾಗೆ ಒಂದೇ ಸಮುಚ್ಛಯದಲ್ಲಿ 70ಕ್ಕೂ ಹೆಚ್ಚು ಸ್ಮಾರಕಗಳನ್ನು ನೋಡಬಹುದಾಗಿದೆ. ಇದರಿಂದ ಐಹೊಳೆಯು ಹೊಸ ಹೊಳಪನ್ನೇ ಪಡೆಯಲಿದೆ. ಇಚ್ಛಾಶಕ್ತಿ ಕೊರತೆಯಿಂದ ಸ್ಥಳಾಂತರ ವಿಷಯ ಮುಂದೂಡಿಕೆಯಾಗುತ್ತಲೇ ಇದೆ.</p>.<p>ಸ್ಮಾರಕಗಳಿಗೆ ರಸ್ತೆ ಸಂಪರ್ಕ, ಶೌಚಾಲಯ, ವಸತಿ ಸೌಕರ್ಯ, ಉತ್ತಮ ಹೋಟೆಲ್, ಸಾರಿಗೆ ಸಂಪರ್ಕ ಹಾಗೂ ಪಾರ್ಕಿಂಗ್ ಮತ್ತಿತರ ಮೂಲ ಸೌಲಭ್ಯಗಳು ಇಲ್ಲದ ಕಾರಣ ಪ್ರವಾಸಿಗರು ಪರದಾಡುವಂತಾಗಿದೆ.</p>.<p>ಬಾದಾಮಿ ಅಗಸ್ತ್ಯತೀರ್ಥ ದಂಡೆಯ 95 ಮನೆಗಳ ತೆರವು ಕಾರ್ಯಾಚರಣೆ ಎರಡು ದಶಕಗಳಿಂದ ನನೆಗುದಿಗೆ ಬಿದ್ದಿದೆ. ಮೇಣ ಬಸದಿ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲಿಯೇ ವಾಹನ ಪಾರ್ಕಿಂಗ್ ಮಾಡುವಂತಾಗಿದೆ.</p>.<p>ಪ್ರವಾಸಿಗರ ವಾಹನಗಳ ಪಾರ್ಕಿಂಗ್ ಮಾಡಲು ಪಾರ್ಕಿಂಗ್ ಪ್ಲಾಜಾ ನಿರ್ಮಾಣಕ್ಕಾಗಿ ಎಪಿಎಂಸಿಯು 9 ಎಕರೆ ಭೂಮಿಯನ್ನು ಪ್ರವಾಸೋದ್ಯಮ ಇಲಾಖೆಗೆ ಕೊಟ್ಟಿದೆ. ನಿವೇಶನ ಇನ್ನೂ ಹಸ್ತಾಂತರವಾಗಿಲ್ಲ ಎಂಬುದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಮಾತು. ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಸೌಲಭ್ಯ ಕಲ್ಪಿಸಲು ಹಿನ್ನಡೆಯಾಗಿದೆ.</p>.<p>ಕೂಡಲಸಂಗಮ ಅಭಿವೃದ್ಧಿಯೂ ಕುಂಟುತ್ತಾ ಸಾಗಿದೆ. ದೆಹಲಿ ಅಕ್ಷರಧಾಮ ಮಾದರಿಯಲ್ಲಿ ಬಸವ ಅಂತರರಾಷ್ಟ್ರೀಯ ಕೇಂದ್ರ ನಿರ್ಮಾಣವನ್ನು ₹15 ಕೋಟಿ ವೆಚ್ಚದಲ್ಲಿ ಆರಂಭಿಸಿ 2005ರಲ್ಲಿ ಪೂರ್ಣಗೊಳಿಸಲಾಗಿದೆ. ಇಂದಿನವರೆಗೂ ಉದ್ಘಾಟನೆಯಾಗಿಲ್ಲ. ವಿವಿಧ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಸಮಗ್ರ ಅಭಿವೃದ್ಧಿ ಮಾಡಬೇಕಿದೆ.</p>.<div><blockquote>ಪ್ರವಾಸೋದ್ಯಮ ಬೆಳೆಯಲು ಪ್ರವಾಸಿಗರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಬಾಗಲಕೋಟೆಯಲ್ಲಿದೆ. ಅದನ್ನು ಬಾದಾಮಿಗೆ ಸ್ಥಳಾಂತರಿಸಬೇಕು.</blockquote><span class="attribution">–ಎಸ್.ಎಚ್. ವಾಸನ ಅಧ್ಯಕ್ಷ ನಿಸರ್ಗ ಬಳಗ</span></div>.<div><blockquote>ಐಹೊಳೆ ಸ್ಥಳಾಂತರಕ್ಕೆ ಜಾಗ ತೆಗೆದುಕೊಳ್ಳಲು ಭೂಮಿ ಮಾಲೀಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಲಾಗಿದೆ.</blockquote><span class="attribution">–ಕೆ.ಎಂ. ಜಾನಕಿ ಅಧ್ಯಕ್ಷರು ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>