<p><strong>ಗುಳೇದಗುಡ್ಡ:</strong> ತಾಲ್ಲೂಕಿನ ಹಳದೂರ ಗ್ರಾಮದ ಸರ್ಕಾರಿ ಆರೋಗ್ಯ ಉಪ ಕೇಂದ್ರದಲ್ಲಿ ಆಟವಾಡಲು ತೆರಳಿದ್ದ ಇಬ್ಬರು ಬಾಲಕರ ಮೇಲೆ ಉಪಕೇಂದ್ರದ ಗೇಟ್ ಬಿದ್ದು ಗಾಯಗಳಾದ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಾ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಕಲಾದಗಿ ತಿಳಿಸಿದರು.</p>.<p>ಗುರುವಾರ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಆಸ್ಪತ್ರೆ ಗೇಟ್ ಬಿದ್ದು ಮಕ್ಕಳಿಗೆ ಗಾಯ ಎಂಬ ಶೀರ್ಷಿಕೆಯ ಸುದ್ದಿಗೆ ಸ್ಪಂದಿಸಿ ಮಾತನಾಡಿದ ಅವರು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗೇಟ್ ದುರಸ್ತಿಗೊಳಿಸಿದ್ದಾರೆ. ಗೇಟ್ ಮಕ್ಕಳ ಮೇಲೆ ಸಂಪೂರ್ಣ ಕಳಚಿ ಬಿದ್ದಿಲ್ಲ. ಮಕ್ಕಳ ಮೇಲೆ ಬಿದ್ದಿದ್ದರೆ ದೊಡ್ಡ ಅನಾಹುತ ಆಗುತ್ತಿತ್ತು. ಹಾಗೆ ಆಗದೇ ಮಕ್ಕಳು ಗೇಟ್ ತೆರೆದಾಗ ದಿಢೀರ್ ಗೇಟ್ ಬಡಿದು ಇದರಿಂದ ಗಾಯವಾಗಿದೆ. ಗಾಯಗೊಂಡ ಮಕ್ಕಳಿಗೆ ಗುತ್ತಿಗೆದಾರರು ಚಿಕಿತ್ಸೆ ಕೊಡಿಸಿದ್ದಾರೆ. ಮುಂದೆ ಈ ರೀತಿ ಘಟನೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ:</strong> ತಾಲ್ಲೂಕಿನ ಹಳದೂರ ಗ್ರಾಮದ ಸರ್ಕಾರಿ ಆರೋಗ್ಯ ಉಪ ಕೇಂದ್ರದಲ್ಲಿ ಆಟವಾಡಲು ತೆರಳಿದ್ದ ಇಬ್ಬರು ಬಾಲಕರ ಮೇಲೆ ಉಪಕೇಂದ್ರದ ಗೇಟ್ ಬಿದ್ದು ಗಾಯಗಳಾದ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಾ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಕಲಾದಗಿ ತಿಳಿಸಿದರು.</p>.<p>ಗುರುವಾರ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಆಸ್ಪತ್ರೆ ಗೇಟ್ ಬಿದ್ದು ಮಕ್ಕಳಿಗೆ ಗಾಯ ಎಂಬ ಶೀರ್ಷಿಕೆಯ ಸುದ್ದಿಗೆ ಸ್ಪಂದಿಸಿ ಮಾತನಾಡಿದ ಅವರು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗೇಟ್ ದುರಸ್ತಿಗೊಳಿಸಿದ್ದಾರೆ. ಗೇಟ್ ಮಕ್ಕಳ ಮೇಲೆ ಸಂಪೂರ್ಣ ಕಳಚಿ ಬಿದ್ದಿಲ್ಲ. ಮಕ್ಕಳ ಮೇಲೆ ಬಿದ್ದಿದ್ದರೆ ದೊಡ್ಡ ಅನಾಹುತ ಆಗುತ್ತಿತ್ತು. ಹಾಗೆ ಆಗದೇ ಮಕ್ಕಳು ಗೇಟ್ ತೆರೆದಾಗ ದಿಢೀರ್ ಗೇಟ್ ಬಡಿದು ಇದರಿಂದ ಗಾಯವಾಗಿದೆ. ಗಾಯಗೊಂಡ ಮಕ್ಕಳಿಗೆ ಗುತ್ತಿಗೆದಾರರು ಚಿಕಿತ್ಸೆ ಕೊಡಿಸಿದ್ದಾರೆ. ಮುಂದೆ ಈ ರೀತಿ ಘಟನೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>