<p><strong>ಕೆರೂರ: </strong>ಸರ್ಕಾರದ ವಿವಿಧ ಯೋಜನೆಗಳ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸೀಪರಮಟ್ಟಿ ಗ್ರಾಮದಲ್ಲಿ ಇಬ್ಬರನ್ನು ಬಂಧಿಸಿ, ವಾಹನ ಸಮೇತ 5.50 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಹುಸೇಬಿ ಬಾವಾಖಾನ, ಸಿದ್ದರಾಯಪ್ಪ ದ್ಯಾವಣ್ಣವರ ಬಂಧಿತರು.</p>.<p>ಬಾದಾಮಿ ತಾಲ್ಲೂಕು ಆಹಾರ ಇಲಾಖೆ ಶಿರಸ್ತೇದಾರ ಜಿ.ಎಸ್. ಸಬ್ಬನೀಸ್ಮತ್ತು ಪಿಎಸ್ಐ ರಾಮಪ್ಪ ಜಲಗೇರಿ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ. ಆರೋಪಿತರು ಅನ್ನಭಾಗ್ಯ, ಅಕ್ಷರ ದಾಸೋಹ ಸೇರಿದಂತೆ ವಿವಿಧ ಯೋಜನೆಗಳ ಅಕ್ಕಿಯನ್ನು ಪ್ರತಿ ತಿಂಗಳು ಸಂಗ್ರಹಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.</p>.<p>ಬೆಳಗಾವಿ ಜಿಲ್ಲೆ ರಾಮದುರ್ಗ, ಲೋಕಾಪೂರ, ಕಲಾದಗಿ ಮತ್ತಿತರ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಇನ್ನೂ ಅನೇಕರು ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.</p>.<p>ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಯೋಜನೆಯ ಅಕ್ರಮ ಅಕ್ಕಿ ಮಾರಾಟ ದಂಧೆ ವ್ಯಾಪಕವಾಗಿದ್ದು ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಿ ಇಂತಹ ಜಾಲಗಳನ್ನು ಪತ್ತೆ ಹಚ್ಚಿಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ: </strong>ಸರ್ಕಾರದ ವಿವಿಧ ಯೋಜನೆಗಳ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸೀಪರಮಟ್ಟಿ ಗ್ರಾಮದಲ್ಲಿ ಇಬ್ಬರನ್ನು ಬಂಧಿಸಿ, ವಾಹನ ಸಮೇತ 5.50 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಹುಸೇಬಿ ಬಾವಾಖಾನ, ಸಿದ್ದರಾಯಪ್ಪ ದ್ಯಾವಣ್ಣವರ ಬಂಧಿತರು.</p>.<p>ಬಾದಾಮಿ ತಾಲ್ಲೂಕು ಆಹಾರ ಇಲಾಖೆ ಶಿರಸ್ತೇದಾರ ಜಿ.ಎಸ್. ಸಬ್ಬನೀಸ್ಮತ್ತು ಪಿಎಸ್ಐ ರಾಮಪ್ಪ ಜಲಗೇರಿ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ. ಆರೋಪಿತರು ಅನ್ನಭಾಗ್ಯ, ಅಕ್ಷರ ದಾಸೋಹ ಸೇರಿದಂತೆ ವಿವಿಧ ಯೋಜನೆಗಳ ಅಕ್ಕಿಯನ್ನು ಪ್ರತಿ ತಿಂಗಳು ಸಂಗ್ರಹಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.</p>.<p>ಬೆಳಗಾವಿ ಜಿಲ್ಲೆ ರಾಮದುರ್ಗ, ಲೋಕಾಪೂರ, ಕಲಾದಗಿ ಮತ್ತಿತರ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಇನ್ನೂ ಅನೇಕರು ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.</p>.<p>ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಯೋಜನೆಯ ಅಕ್ರಮ ಅಕ್ಕಿ ಮಾರಾಟ ದಂಧೆ ವ್ಯಾಪಕವಾಗಿದ್ದು ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಿ ಇಂತಹ ಜಾಲಗಳನ್ನು ಪತ್ತೆ ಹಚ್ಚಿಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>