<p><strong>ಬಾಗಲಕೋಟೆ: </strong>ಮಲಪ್ರಭಾ ನದಿಯಲ್ಲಿ ಈಜು ಕಲಿಯಲು ಹೋಗಿದ್ದ ಗುಳೇದಗುಡ್ಡ ತಾಲ್ಲೂಕಿನ ಕೊಟ್ನೂರು ಗ್ರಾಮದ ಇಬ್ಬರು ಬಾಲಕರು ಶುಕ್ರವಾರ ಮಧ್ಯಾಹ್ನ ನೀರುಪಾಲಾಗಿದ್ದಾರೆ.</p>.<p>ಗ್ರಾಮದ ಬೈಲಪ್ಪ ಅಂಬಿಗೇರ ಅವರ ಪುತ್ರ ಮಲ್ಲೇಶ (12) ಹಾಗೂ ಮಲ್ಲಪ್ಪ ಉಪ್ಪಾರ ಅವರ ಪುತ್ರ ಮನೋಜ (10) ಸಾವಿಗೀಡಾದವರು. ಶಾಲೆಗೆ ರಜೆ ಇದ್ದ ಕಾರಣ ಇಬ್ಬರು ಈಜು ಕಲಿಯಲು ನದಿಗೆ ತೆರಳಿದ್ದರು. ಈ ವೇಳೆ ಸೆಳವಿಗೆ ಸಿಲುಕಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ.</p>.<p>ಗುಳೇದಗುಡ್ಡದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಶವಗಳನ್ನು ಹೊರತೆಗೆದು ಪಾಲಕರಿಗೆ ಒಪ್ಪಿಸಿದರು. ಈ ವೇಳೆ ಅವರ ರೋದನ ಮನಕಲಕಿತು. ಗುಳೇದಗುಡ್ಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಮಲಪ್ರಭಾ ನದಿಯಲ್ಲಿ ಈಜು ಕಲಿಯಲು ಹೋಗಿದ್ದ ಗುಳೇದಗುಡ್ಡ ತಾಲ್ಲೂಕಿನ ಕೊಟ್ನೂರು ಗ್ರಾಮದ ಇಬ್ಬರು ಬಾಲಕರು ಶುಕ್ರವಾರ ಮಧ್ಯಾಹ್ನ ನೀರುಪಾಲಾಗಿದ್ದಾರೆ.</p>.<p>ಗ್ರಾಮದ ಬೈಲಪ್ಪ ಅಂಬಿಗೇರ ಅವರ ಪುತ್ರ ಮಲ್ಲೇಶ (12) ಹಾಗೂ ಮಲ್ಲಪ್ಪ ಉಪ್ಪಾರ ಅವರ ಪುತ್ರ ಮನೋಜ (10) ಸಾವಿಗೀಡಾದವರು. ಶಾಲೆಗೆ ರಜೆ ಇದ್ದ ಕಾರಣ ಇಬ್ಬರು ಈಜು ಕಲಿಯಲು ನದಿಗೆ ತೆರಳಿದ್ದರು. ಈ ವೇಳೆ ಸೆಳವಿಗೆ ಸಿಲುಕಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ.</p>.<p>ಗುಳೇದಗುಡ್ಡದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಶವಗಳನ್ನು ಹೊರತೆಗೆದು ಪಾಲಕರಿಗೆ ಒಪ್ಪಿಸಿದರು. ಈ ವೇಳೆ ಅವರ ರೋದನ ಮನಕಲಕಿತು. ಗುಳೇದಗುಡ್ಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>