ಪ್ರಕರಣದ ವಿವರ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಅರುಣ್ ಹಾಗೂ ಭಾರತಿ ದಂಪತಿಯು ಮಗ ಶಿವರಾಜ್ನೊಂದಿಗೆ ಉಡುಪಿಯ ಕರಾವಳಿ ಬೈಪಾಸ್ ಬಳಿಯ ಶೆಡ್ವೊಂದರಲ್ಲಿ ವಾಸವಿದ್ದರು. ಈಚೆಗೆ ದಂಪತಿಗೆ ಪರಿಚಿತವಾಗಿದ್ದ ಆರೋಪಿ ಪರಶುರಾಮ, ಮಗುವಿನ ಜತೆ ಸಲುಗೆ ಬೆಳೆಸಿಕೊಂಡಿದ್ದ. ಭಾನುವಾರ ಬೆಳಿಗ್ಗೆ ತಿಂಡಿಕೊಡಿಸುವುದಾಗಿ ಮಗುವನ್ನು ಕರೆದೊಯ್ದು ಮರಳಿ ಬಂದಿರಲಿಲ್ಲ. ಮಗು ನಾಪತ್ತೆಯಾದ ಬಗ್ಗೆ ಪೋಷಕರು ದೂರು ನೀಡಿದ್ದರು. ಆರೋಪಿ ಮಗುವನ್ನು ಎತ್ತಿಕೊಂಡು ಖಾಸಗಿ ಬಸ್ ಹತ್ತುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು.