<p><strong>ಬಾಗಲಕೋಟೆ</strong>: ‘ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ವಿದ್ಯಾರ್ಥಿಗಳಲ್ಲಿ ಸಮಾನತೆ ಪ್ರೋತ್ಸಾಹಿಸಲು ರೂಪಿಸಿರುವ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮೂಲಕ ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಮನವಿ ಸಲ್ಲಿಸಿದರು.</p>.<p>‘ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಮಾನತೆ ಪ್ರೋತ್ಸಾಹಿಸಲು ತಂದಿರುವ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆ ಆಜ್ಞೆ ತೆರವುಗೊಳಿಸಬೇಕು. ಜಾತಿ, ಧರ್ಮ, ಇನ್ನಿತರ ತಾರತಮ್ಯ ಆಗುತ್ತಿರುವುದನ್ನು ತಡೆಗಟ್ಟಲು ಮಾಡಿರುವ ಯುಜಿಸಿ ನಿಯಮಾವಳಿಗಳನ್ನು ಜಾರಿ ತರಬೇಕು’ ಎಂದು ಒತ್ತಾಯಿಸಿದರು.</p>.<p>‘ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಿಯಮಾವಳಿಗಳು ಯುಜಿಸಿ ಹೊರಡಿಸಬೇಕು. ರಾಜ್ಯ ಸರ್ಕಾರ ರಾಜ್ಯದಲ್ಲಿ ದಲಿತ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ತರುತ್ತಿರುವ ಕಾನೂನುಗಳನ್ನು ವಿಂಳಬ ಮಾಡದೇ ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.</p>.<p>‘ರೋಹಿತ್ ವೇಮುಲ ಕಾಯಿದೆಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು. ಕೇಂದ್ರ, ರಾಜ್ಯ ಸರ್ಕಾರಗಳು ವಿಳಂಬ ನೀತಿ ಅನುಸರಿಸದೇ ದಲಿತ ವಿದ್ಯಾರ್ಥಿಗಳ ಸಮಾನತೆ ಉತ್ತೇಜನೆಗಾಗಿ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು’ ಎಂದು ಕೋರಿದರು.</p>.<p>‘ಕೋಮುವಾದಿಗಳು ಶೋಷಿತ ಸಮುದಾಯದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಲಾಗುತ್ತಿದ್ದಾರೆ. ಜಾತಿ ದೌರ್ಜನ್ಯ ಕಾರಣಕ್ಕೆ 20ಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂವಿಧಾನ ವಿರೋಧಿ, ದಲಿತ, ಹಿಂದುಳಿದವರು ಹಕ್ಕು ಪಡೆಯುವುದನ್ನು ಸಹಿಸದೇ ಷಡ್ಯಂತ್ರ ರೂಪಿಸಲಾಗುತ್ತಿದೆ’ ಎಂದು ದೂರಿದರು.</p>.<p>ಪ್ರಜ್ಞಾಬೋಧಿಬಂತೇಜಿ, ಪರಶುರಾಮ ಕಾಂಬಳೆ, ಬಸವರಾಜದೊಡಮನಿ, ಹುಲ್ಲಪ್ಪ ಅಂಟರಠಾಣಾ, ದೀಪಕ ಕಂಕಣವಾಡಿ, ಸದಾಶಿವ ಐನಾಪುರ, ದಯಾನಂದ ಕಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ವಿದ್ಯಾರ್ಥಿಗಳಲ್ಲಿ ಸಮಾನತೆ ಪ್ರೋತ್ಸಾಹಿಸಲು ರೂಪಿಸಿರುವ ನಿಯಮಾವಳಿಗಳನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮೂಲಕ ಕೇಂದ್ರ ಮಾನವ ಸಂಪನ್ಮೂಲ ಸಚಿವರಿಗೆ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಮನವಿ ಸಲ್ಲಿಸಿದರು.</p>.<p>‘ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಮಾನತೆ ಪ್ರೋತ್ಸಾಹಿಸಲು ತಂದಿರುವ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆ ಆಜ್ಞೆ ತೆರವುಗೊಳಿಸಬೇಕು. ಜಾತಿ, ಧರ್ಮ, ಇನ್ನಿತರ ತಾರತಮ್ಯ ಆಗುತ್ತಿರುವುದನ್ನು ತಡೆಗಟ್ಟಲು ಮಾಡಿರುವ ಯುಜಿಸಿ ನಿಯಮಾವಳಿಗಳನ್ನು ಜಾರಿ ತರಬೇಕು’ ಎಂದು ಒತ್ತಾಯಿಸಿದರು.</p>.<p>‘ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಿಯಮಾವಳಿಗಳು ಯುಜಿಸಿ ಹೊರಡಿಸಬೇಕು. ರಾಜ್ಯ ಸರ್ಕಾರ ರಾಜ್ಯದಲ್ಲಿ ದಲಿತ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ತರುತ್ತಿರುವ ಕಾನೂನುಗಳನ್ನು ವಿಂಳಬ ಮಾಡದೇ ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.</p>.<p>‘ರೋಹಿತ್ ವೇಮುಲ ಕಾಯಿದೆಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು. ಕೇಂದ್ರ, ರಾಜ್ಯ ಸರ್ಕಾರಗಳು ವಿಳಂಬ ನೀತಿ ಅನುಸರಿಸದೇ ದಲಿತ ವಿದ್ಯಾರ್ಥಿಗಳ ಸಮಾನತೆ ಉತ್ತೇಜನೆಗಾಗಿ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು’ ಎಂದು ಕೋರಿದರು.</p>.<p>‘ಕೋಮುವಾದಿಗಳು ಶೋಷಿತ ಸಮುದಾಯದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಲಾಗುತ್ತಿದ್ದಾರೆ. ಜಾತಿ ದೌರ್ಜನ್ಯ ಕಾರಣಕ್ಕೆ 20ಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂವಿಧಾನ ವಿರೋಧಿ, ದಲಿತ, ಹಿಂದುಳಿದವರು ಹಕ್ಕು ಪಡೆಯುವುದನ್ನು ಸಹಿಸದೇ ಷಡ್ಯಂತ್ರ ರೂಪಿಸಲಾಗುತ್ತಿದೆ’ ಎಂದು ದೂರಿದರು.</p>.<p>ಪ್ರಜ್ಞಾಬೋಧಿಬಂತೇಜಿ, ಪರಶುರಾಮ ಕಾಂಬಳೆ, ಬಸವರಾಜದೊಡಮನಿ, ಹುಲ್ಲಪ್ಪ ಅಂಟರಠಾಣಾ, ದೀಪಕ ಕಂಕಣವಾಡಿ, ಸದಾಶಿವ ಐನಾಪುರ, ದಯಾನಂದ ಕಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>