<p>ಬಾಗಲಕೋಟೆ: ‘ಆಲಮಟ್ಟಿ ಜಲಾಶಯ ನಿರ್ಮಾಣ, ನೀರು ನಿಲ್ಲಿಸಿ ನೀರಾವರಿ ಕಲ್ಪಿಸುವಲ್ಲಿ ಕಾಂಗ್ರೆಸ್ ಪಾತ್ರ ದೊಡ್ಡದಾಗಿದೆ. ಈ ವಿಷಯದಲ್ಲಿ ಮಾತನಾಡುವ ಯಾವುದೇ ನೈತಿಕತೆ ಬಿಜೆಪಿಗಿಲ್ಲ’ ಎಂದು ಸಚಿವ ಎಚ್.ಕೆ. ಪಾಟೀಲ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1975ರಿಂದ 1999ರವರೆಗೆ ₹14,500 ಕೋಟಿ ಖರ್ಚು ಮಾಡ ಲಾಗಿದೆ. ನಾನು ನೀರಾವರಿ ಸಚಿವನಾಗಿದ್ದ ನಾಲ್ಕು ವರ್ಷಗಳಲ್ಲಿ ₹8,200 ಕೋಟಿ ಅನುದಾನ ನೀಡಲಾಗಿತ್ತು. ನಿಮ್ಮ ಕೊಡುಗೆ ಏನು’ ಎಂದು ಪ್ರಶ್ನಿಸಿದರು.</p>.<p>‘ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಬಂದು 13 ವರ್ಷ ಕಳೆದರೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುತ್ತಿಲ್ಲ. 2050ಕ್ಕೆ ಅಂತ್ಯಗೊಳ್ಳಲಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಈಗಾಗಲೇ 2.55 ಲಕ್ಷ ಹೆಕ್ಟೇರ್ಗೆ ನೀರಾವರಿ ಕಲ್ಪಿಸಲಾಗಿದೆ. ಉಳಿದಿರುವ ಭೂಮಿಗೂ ನೀರು ಒದಗಿಸುವ ನಿಟ್ಟಿನಲ್ಲಿ ಬಿ ಸ್ಕೀಂನಲ್ಲಿ ಬರುವ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಮೂರನೇ ಹಂತದಲ್ಲಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತರ ಭೂಮಿಗೂ ಪರಿಹಾರ ಧನ ಹೆಚ್ಚಳ ಮಾಡಲಾಗಿದೆ. ವಿತರಣೆಯನ್ನೂ ಆರಂಭಿಸಲಾಗಿದೆ’ ಎಂದರು.</p>.<p>‘3 ವರ್ಷಗಳಿಂದ ಕೇಂದ್ರ ಜಿಎಸ್ಟಿ ಪರಿಹಾರ ನೀಡಿಲ್ಲ. ಅನ್ನಭಾಗ್ಯಕ್ಕೆ ಅಕ್ಕಿ ಕೇಳಿದಾಗ ರಾಜ್ಯ ಸರ್ಕಾರಕ್ಕೆ ನೀಡದೇ ಖಾಸಗಿಯವರಿಗೆ ನೀಡಿದರು’ ಎಂದು ಆರೋಪಿಸಿದರು.</p>.<p>ಗ್ಯಾರಂಟಿ ಯೋಜನೆಗಳಿಗೆ ಅನುದಾನ ವನ್ನು ಅವರಪ್ಪನ ಮನೆಯಿಂದ ನೀಡುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಾರಾದರೂ ಅವರಪ್ಪನದ್ದು ಕೊಡುತ್ತಾರೆಯೇ? ಮೋದಿ ಅವರು ಅವರಪ್ಪನ ಮನೆಯದ್ದು ಕೊಡುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ₹100 ಜಿಎಸ್ಟಿ ಸಂಗ್ರಹವಾದರೆ ₹13.50 ರಾಜ್ಯಕ್ಕೆ ನೀಡಲಾಗುತ್ತದೆ. ನಮ್ಮಪ್ಪನ ದುಡ್ಡು ತೆಗೆದುಕೊಳ್ಳುತ್ತಿದ್ದೀರಿ. 253 ಲಕ್ಷ ಕೋಟಿ ಸಾಲ ಮಾಡಿದ ಮೋದಿ ಅವರಿಗೆ ಛೀ, ಥೂ ಅನ್ನಬೇಕು. ಸಿದ್ದರಾಮಯ್ಯ ಅವರು ಹೇಳುವುದು ಸುಳ್ಳು ಎನ್ನುತ್ತೀರಿ. 2 ಕೋಟಿ ಉದ್ಯೋಗ, ಕಪ್ಪು ಹಣದ ₹15 ಲಕ್ಷ ಎಲ್ಲಿ ಹೋಯಿತು’ ಎಂದು ಕೇಳಿದರು.</p>.<p>ಮಾಜಿ ಸಚಿವ ಎಸ್.ಆರ್. ಪಾಟೀಲ, ಎ. ವಸಂತಕುಮಾರ, ಶಾಸಕ ಜೆ.ಟಿ. ಪಾಟೀಲ, ಎಸ್.ಜಿ. ನಂಜಯ್ಯನಮಠ , ಬಿ.ಬಿ. ಚಿಮ್ಮನಕಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-1236837075</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಆಲಮಟ್ಟಿ ಜಲಾಶಯ ನಿರ್ಮಾಣ, ನೀರು ನಿಲ್ಲಿಸಿ ನೀರಾವರಿ ಕಲ್ಪಿಸುವಲ್ಲಿ ಕಾಂಗ್ರೆಸ್ ಪಾತ್ರ ದೊಡ್ಡದಾಗಿದೆ. ಈ ವಿಷಯದಲ್ಲಿ ಮಾತನಾಡುವ ಯಾವುದೇ ನೈತಿಕತೆ ಬಿಜೆಪಿಗಿಲ್ಲ’ ಎಂದು ಸಚಿವ ಎಚ್.ಕೆ. ಪಾಟೀಲ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1975ರಿಂದ 1999ರವರೆಗೆ ₹14,500 ಕೋಟಿ ಖರ್ಚು ಮಾಡ ಲಾಗಿದೆ. ನಾನು ನೀರಾವರಿ ಸಚಿವನಾಗಿದ್ದ ನಾಲ್ಕು ವರ್ಷಗಳಲ್ಲಿ ₹8,200 ಕೋಟಿ ಅನುದಾನ ನೀಡಲಾಗಿತ್ತು. ನಿಮ್ಮ ಕೊಡುಗೆ ಏನು’ ಎಂದು ಪ್ರಶ್ನಿಸಿದರು.</p>.<p>‘ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಬಂದು 13 ವರ್ಷ ಕಳೆದರೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುತ್ತಿಲ್ಲ. 2050ಕ್ಕೆ ಅಂತ್ಯಗೊಳ್ಳಲಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಈಗಾಗಲೇ 2.55 ಲಕ್ಷ ಹೆಕ್ಟೇರ್ಗೆ ನೀರಾವರಿ ಕಲ್ಪಿಸಲಾಗಿದೆ. ಉಳಿದಿರುವ ಭೂಮಿಗೂ ನೀರು ಒದಗಿಸುವ ನಿಟ್ಟಿನಲ್ಲಿ ಬಿ ಸ್ಕೀಂನಲ್ಲಿ ಬರುವ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಮೂರನೇ ಹಂತದಲ್ಲಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತರ ಭೂಮಿಗೂ ಪರಿಹಾರ ಧನ ಹೆಚ್ಚಳ ಮಾಡಲಾಗಿದೆ. ವಿತರಣೆಯನ್ನೂ ಆರಂಭಿಸಲಾಗಿದೆ’ ಎಂದರು.</p>.<p>‘3 ವರ್ಷಗಳಿಂದ ಕೇಂದ್ರ ಜಿಎಸ್ಟಿ ಪರಿಹಾರ ನೀಡಿಲ್ಲ. ಅನ್ನಭಾಗ್ಯಕ್ಕೆ ಅಕ್ಕಿ ಕೇಳಿದಾಗ ರಾಜ್ಯ ಸರ್ಕಾರಕ್ಕೆ ನೀಡದೇ ಖಾಸಗಿಯವರಿಗೆ ನೀಡಿದರು’ ಎಂದು ಆರೋಪಿಸಿದರು.</p>.<p>ಗ್ಯಾರಂಟಿ ಯೋಜನೆಗಳಿಗೆ ಅನುದಾನ ವನ್ನು ಅವರಪ್ಪನ ಮನೆಯಿಂದ ನೀಡುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಯಾರಾದರೂ ಅವರಪ್ಪನದ್ದು ಕೊಡುತ್ತಾರೆಯೇ? ಮೋದಿ ಅವರು ಅವರಪ್ಪನ ಮನೆಯದ್ದು ಕೊಡುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ₹100 ಜಿಎಸ್ಟಿ ಸಂಗ್ರಹವಾದರೆ ₹13.50 ರಾಜ್ಯಕ್ಕೆ ನೀಡಲಾಗುತ್ತದೆ. ನಮ್ಮಪ್ಪನ ದುಡ್ಡು ತೆಗೆದುಕೊಳ್ಳುತ್ತಿದ್ದೀರಿ. 253 ಲಕ್ಷ ಕೋಟಿ ಸಾಲ ಮಾಡಿದ ಮೋದಿ ಅವರಿಗೆ ಛೀ, ಥೂ ಅನ್ನಬೇಕು. ಸಿದ್ದರಾಮಯ್ಯ ಅವರು ಹೇಳುವುದು ಸುಳ್ಳು ಎನ್ನುತ್ತೀರಿ. 2 ಕೋಟಿ ಉದ್ಯೋಗ, ಕಪ್ಪು ಹಣದ ₹15 ಲಕ್ಷ ಎಲ್ಲಿ ಹೋಯಿತು’ ಎಂದು ಕೇಳಿದರು.</p>.<p>ಮಾಜಿ ಸಚಿವ ಎಸ್.ಆರ್. ಪಾಟೀಲ, ಎ. ವಸಂತಕುಮಾರ, ಶಾಸಕ ಜೆ.ಟಿ. ಪಾಟೀಲ, ಎಸ್.ಜಿ. ನಂಜಯ್ಯನಮಠ , ಬಿ.ಬಿ. ಚಿಮ್ಮನಕಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-19-1236837075</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>