<p><strong>ಬಾಗಲಕೋಟೆ:</strong> ಜಿಲ್ಲೆಯ ಬನಶಂಕರಿ ಜಾತ್ರೆಯಲ್ಲಿರುವ ಬಿಎಸ್ಆರ್ ನಾಟಕ ಕಂಪನಿಯಲ್ಲಿ ಜ.18, 19ರಂದು ಮಧ್ಯಾಹ್ನ 3.30ಕ್ಕೆ ನಟಿ ಉಮಾಶ್ರಿ ಅಭಿನಯದ ‘ಶರ್ಮಿಷ್ಠೆ’ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಾಟಕಕಾರ ರಾಜಣ್ಣ ಜೇವರ್ಗಿ, ಏಕವ್ಯಕ್ತಿ ಪ್ರದರ್ಶನ ಇದಾಗಿದ್ದು, 90 ನಿಮಿಷಗಳ ನಾಟಕವಿದೆ ಎಂದರು.</p>.<p>ಚಿದಂಬರ ರಾವ್ ಜಂಬೆ ನಿರ್ದೇಶಿಸಿದ್ದು, ನಾಟಕ, ಚಲನಚಿತ್ರ, ರಾಜಕೀಯದಲ್ಲಿ ಹೆಸರು ಮಾಡಿರುವ ಉಮಾಶ್ರೀ ಅಭಿನಯಿಸುತ್ತಿದ್ದಾರೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪ್ರದರ್ಶನಗೊಂಡಿದ್ದ ನಾಟಕವನ್ನು, ಉತ್ತರ ಕರ್ನಾಟಕದಲ್ಲಿಯೂ ಪ್ರದರ್ಶಿಸಬೇಕು ಎಂಬ ಉದ್ದೇಶದಿಂದ ಆಯೋಜನೆ ಮಾಡಲಾಗಿದೆ ಎಂದರು.</p>.<p>ನಮ್ಮ ತಂಡದ ‘ಮುತ್ತಿನಂತ ಅತ್ತಿಗೆ’ ನಾಟಕ ಉತ್ತಮ ಪ್ರದರ್ಶನಗೊಳ್ಳುತ್ತಿದ್ದು, ಚಳಿಯಿಂದಾಗಿ ಆರಂಭದಲ್ಲಿ ಪ್ರೇಕ್ಷಕರ ಸಂಖ್ಯೆ ಕಡಿಮೆ ಇತ್ತು. ಈಗ ಮೂರ್ನಾಲ್ಕು ದಿನಗಳಿಂದ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗಿದೆ. ನಾಟಕದಲ್ಲಿ ಯಾವುದೇ ಅಶ್ಲೀಲ ಸಂಭಾಷಣೆಗಳಿರುವುದಿಲ್ಲ. ಮಹಿಳಾ ಪ್ರೇಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಎಂದು ಹೇಳಿದರು.</p>.<p>ರೇಣುಕಾ, ಶರಣಪ್ಪ ಮಾವಿನಮರದ, ಜಗದೀಶ ಹಿರೇಮಠ, ಮಹಾಬಳೇಶ್ವರ ಗುಡಗುಂಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲೆಯ ಬನಶಂಕರಿ ಜಾತ್ರೆಯಲ್ಲಿರುವ ಬಿಎಸ್ಆರ್ ನಾಟಕ ಕಂಪನಿಯಲ್ಲಿ ಜ.18, 19ರಂದು ಮಧ್ಯಾಹ್ನ 3.30ಕ್ಕೆ ನಟಿ ಉಮಾಶ್ರಿ ಅಭಿನಯದ ‘ಶರ್ಮಿಷ್ಠೆ’ ನಾಟಕ ಪ್ರದರ್ಶನಗೊಳ್ಳಲಿದೆ.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಾಟಕಕಾರ ರಾಜಣ್ಣ ಜೇವರ್ಗಿ, ಏಕವ್ಯಕ್ತಿ ಪ್ರದರ್ಶನ ಇದಾಗಿದ್ದು, 90 ನಿಮಿಷಗಳ ನಾಟಕವಿದೆ ಎಂದರು.</p>.<p>ಚಿದಂಬರ ರಾವ್ ಜಂಬೆ ನಿರ್ದೇಶಿಸಿದ್ದು, ನಾಟಕ, ಚಲನಚಿತ್ರ, ರಾಜಕೀಯದಲ್ಲಿ ಹೆಸರು ಮಾಡಿರುವ ಉಮಾಶ್ರೀ ಅಭಿನಯಿಸುತ್ತಿದ್ದಾರೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪ್ರದರ್ಶನಗೊಂಡಿದ್ದ ನಾಟಕವನ್ನು, ಉತ್ತರ ಕರ್ನಾಟಕದಲ್ಲಿಯೂ ಪ್ರದರ್ಶಿಸಬೇಕು ಎಂಬ ಉದ್ದೇಶದಿಂದ ಆಯೋಜನೆ ಮಾಡಲಾಗಿದೆ ಎಂದರು.</p>.<p>ನಮ್ಮ ತಂಡದ ‘ಮುತ್ತಿನಂತ ಅತ್ತಿಗೆ’ ನಾಟಕ ಉತ್ತಮ ಪ್ರದರ್ಶನಗೊಳ್ಳುತ್ತಿದ್ದು, ಚಳಿಯಿಂದಾಗಿ ಆರಂಭದಲ್ಲಿ ಪ್ರೇಕ್ಷಕರ ಸಂಖ್ಯೆ ಕಡಿಮೆ ಇತ್ತು. ಈಗ ಮೂರ್ನಾಲ್ಕು ದಿನಗಳಿಂದ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗಿದೆ. ನಾಟಕದಲ್ಲಿ ಯಾವುದೇ ಅಶ್ಲೀಲ ಸಂಭಾಷಣೆಗಳಿರುವುದಿಲ್ಲ. ಮಹಿಳಾ ಪ್ರೇಕ್ಷಕರೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಎಂದು ಹೇಳಿದರು.</p>.<p>ರೇಣುಕಾ, ಶರಣಪ್ಪ ಮಾವಿನಮರದ, ಜಗದೀಶ ಹಿರೇಮಠ, ಮಹಾಬಳೇಶ್ವರ ಗುಡಗುಂಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>