<p><strong>ಗುಳೇದಗುಡ್ಡ:</strong> ಇಲ್ಲಿನ ಪುರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು 9 ತಿಂಗಳಿಂದ ಬಾಕಿ ಉಳಿಸಿ ಕೊಂಡಿರುವ ವೇತನವನ್ನು ಪಾವತಿ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಪುರಸಭೆ ಎದುರು ಸೋಮವಾರ ಧರಣಿ ನಡೆಸಿದರು.</p>.<p>ಕಾರ್ಮಿಕರ ಮುಖಂಡ ಭೀಮಸಿ ನಡುವಿನಮನಿ ಮಾತನಾಡಿ, ಪಟ್ಟಣದ ಸ್ವಚ್ಛತಾ ಕಾರ್ಯನಿರ್ವಹಿಸುವ ಗುತ್ತಿಗೆ ಪೌರಕಾರ್ಮಿಕರಿಗೆ 9 ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಕಾರ್ಮಿಕರ ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ವೇತನ ನೀಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.</p>.<p>ಮನವಿ ಮಾಡಿಕೊಂಡು ಸಾಕಾಗಿ ಹೋಗಿದೆ. ಹೀಗಾಗಿ ಗುತ್ತಿಗೆ ಪೌರ ಕಾರ್ಮಿಕರೆಲ್ಲ ಧರಣಿ ಸತ್ಯಾಗ್ರಹ ಕೈಗೊಂಡಿದ್ದೇವೆ. ಇನ್ನಾದರೂ ಬೇಡಿಕೆ ಈಡೇರಿಸಬೇಕು ಎಂದು ಹೇಳಿದರು.</p>.<p>ಅಗತ್ಯ ವಸ್ತುಗಳ ಬೆಲೆ ದಿನವೂ ಏರಿಕೆಯಾಗುತ್ತಿದೆ. ವೇತನ ಇಲ್ಲದ ಜೀವನ ಸಾಗಿಸುವುದು ಕಷ್ಟವಾಗಿದೆ. ಸಾಲ ಮಾಡಿ ಜೀವನ ನಡೆಸುವ ದಯನೀಯ ಸ್ಥಿತಿ ಒದಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಪುರಸಭೆ ಕಚೇರಿಯ ವ್ಯವಸ್ಥಾಪಕ ರಮೇಶ ಪದಕಿ, ಗುತ್ತಿಗೆ ಪೌರಕಾರ್ಮಿಕರ ಬೇಡಿಕೆಗಳ ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾ ಗುವುದು. ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಧರಣಿ ಹಿಂಪಡೆಲಾಯಿತು.</p>.<p>ಗುತ್ತಿಗೆ ಪೌರಕಾರ್ಮಿಕರಾದ ಮುತ್ತು ಹ.ಹೆಬ್ಬಳ್ಳಿ, ಉಮೇಶ ದು.ಮಾದರ, ಹನಮಂತ ದು, ಮಾದರ, ಪ್ರದೀಪ ಕೊತಂಬರಿ ಸೇರಿದಂತೆ 20ಕ್ಕೂ ಹೆಚ್ಚು ಪೌರ ಕಾರ್ಮಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ:</strong> ಇಲ್ಲಿನ ಪುರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು 9 ತಿಂಗಳಿಂದ ಬಾಕಿ ಉಳಿಸಿ ಕೊಂಡಿರುವ ವೇತನವನ್ನು ಪಾವತಿ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಪುರಸಭೆ ಎದುರು ಸೋಮವಾರ ಧರಣಿ ನಡೆಸಿದರು.</p>.<p>ಕಾರ್ಮಿಕರ ಮುಖಂಡ ಭೀಮಸಿ ನಡುವಿನಮನಿ ಮಾತನಾಡಿ, ಪಟ್ಟಣದ ಸ್ವಚ್ಛತಾ ಕಾರ್ಯನಿರ್ವಹಿಸುವ ಗುತ್ತಿಗೆ ಪೌರಕಾರ್ಮಿಕರಿಗೆ 9 ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಕಾರ್ಮಿಕರ ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ವೇತನ ನೀಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.</p>.<p>ಮನವಿ ಮಾಡಿಕೊಂಡು ಸಾಕಾಗಿ ಹೋಗಿದೆ. ಹೀಗಾಗಿ ಗುತ್ತಿಗೆ ಪೌರ ಕಾರ್ಮಿಕರೆಲ್ಲ ಧರಣಿ ಸತ್ಯಾಗ್ರಹ ಕೈಗೊಂಡಿದ್ದೇವೆ. ಇನ್ನಾದರೂ ಬೇಡಿಕೆ ಈಡೇರಿಸಬೇಕು ಎಂದು ಹೇಳಿದರು.</p>.<p>ಅಗತ್ಯ ವಸ್ತುಗಳ ಬೆಲೆ ದಿನವೂ ಏರಿಕೆಯಾಗುತ್ತಿದೆ. ವೇತನ ಇಲ್ಲದ ಜೀವನ ಸಾಗಿಸುವುದು ಕಷ್ಟವಾಗಿದೆ. ಸಾಲ ಮಾಡಿ ಜೀವನ ನಡೆಸುವ ದಯನೀಯ ಸ್ಥಿತಿ ಒದಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ ಪುರಸಭೆ ಕಚೇರಿಯ ವ್ಯವಸ್ಥಾಪಕ ರಮೇಶ ಪದಕಿ, ಗುತ್ತಿಗೆ ಪೌರಕಾರ್ಮಿಕರ ಬೇಡಿಕೆಗಳ ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾ ಗುವುದು. ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಧರಣಿ ಹಿಂಪಡೆಲಾಯಿತು.</p>.<p>ಗುತ್ತಿಗೆ ಪೌರಕಾರ್ಮಿಕರಾದ ಮುತ್ತು ಹ.ಹೆಬ್ಬಳ್ಳಿ, ಉಮೇಶ ದು.ಮಾದರ, ಹನಮಂತ ದು, ಮಾದರ, ಪ್ರದೀಪ ಕೊತಂಬರಿ ಸೇರಿದಂತೆ 20ಕ್ಕೂ ಹೆಚ್ಚು ಪೌರ ಕಾರ್ಮಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>