ಅಪ್ಪ ಡಾ.ರಾಜಕುಮಾರ ಅವರ ಆಭಿಮಾನಿ ಆಗಿರುವುದರಿಂದ ಬಾಲ್ಯದಿಂದಲೂ ಮನೆಯಲ್ಲಿ ಕಲೆ- ಸಾಹಿತ್ಯದ ನಂಟು ಇತ್ತು. ಅದು ಕನ್ನಡ ಸಾಹಿತ್ಯದ ಬಗ್ಗೆ ನನಗೆ ವಿಶೇಷ ಪ್ರೀತಿ ಬೆಳೆಯಲು ಕಾರಣವಾಯಿತು. ಕೋಲಾರದ ಕೆ.ಆರ್. ನಂದಿನಿ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಮೊದಲ ರ್ಯಾಂಕ್ ಗಳಿಸಿದ್ದು ನನಗೆ ನಾಗರಿಕ ಸೇವಾ ಪರೀಕ್ಷೆ ಬರೆಯಲು ಪ್ರೇರಣೆಯಾಯಿತು. ನನ್ನ ಪರೀಕ್ಷಾ ತಯಾರಿಗೆ 'ಪ್ರಜಾವಾಣಿ' ಓದಿನಿಂದ ಬಹಳಷ್ಟು ನೆರವಾಗಿದೆ. ನನ್ನಂತೆಯೇ ಪರೀಕ್ಷೆ ತಯಾರಿ ನಡೆಸುವವರ ನೆಚ್ಚಿನ ಪತ್ರಿಕೆ ಅದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.