ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೈನಿಕರು ಹಾಗೂ ಪೊಲೀಸರ ರಕ್ತ ಹರಿಸುವ ನಕ್ಸಲರ ಪರವಾಗಿ ಬೋರ್ಡ್ ಹಾಕಿಕೊಳ್ಳುತ್ತಿದ್ದಾರೆ. ಅಂತಹವರ ಪರ ಇರುವುದಾಗಿ ಕಾರ್ನಾಡ್ ಹೇಳಿದ್ದರೂ ಅವರ ವಿರುದ್ಧ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ. ಪ್ರಕರಣ ದಾಖಲಾದರೂ ಇನ್ನೂ ಬಂಧಿಸಿಲ್ಲವೇಕೆ’ ಎಂದು ಪ್ರಶ್ನಿಸಿದರು.