ಲಕ್ಷಕ್ಕೂ ಹೆಚ್ಚು ಮುಸ್ಲಿಮರು ಹಾಗೂ ಹಿಂದೂಗಳು ದರ್ಗಾಕ್ಕೆ ಭೇಟಿ ನೀಡಿ, ಸಕ್ಕರೆ ಸಲ್ಲಿಸಿ, ಹರಕೆ ಸಲ್ಲಿಸಲಿದ್ದಾರೆ. ಸೈಯ್ಯದ್ ಷಾ ಮುರ್ತುಜಾ ಖಾದ್ರಿ ಅವರು ಪ್ರಸಿದ್ಧ ಸೂಫಿ ಸಂತರು. ಅಧ್ಯಾತ್ಮ ಹಾಗೂ ಪ್ರವಚನದ ಮೂಲಕ ಜನರ ನಡುವಿನ ಎಲ್ಲ ರೀತಿಯ ಭೇದಗಳನ್ನು ತೊಡೆದು ಹಾಕಲು ಶ್ರಮಿಸಿದ್ದರು. ಸೌಹಾರ್ದ ಹಾಗೂ ಸಮಾನತೆಯ ಬದುಕಿಗಾಗಿ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಬೋಧಿಸಿ ಜನರ ಪ್ರೀತಿ, ವಿಶ್ವಾಸ ಹಾಗೂ ಗೌರವಕ್ಕೆ ಪಾತ್ರರಾಗಿದ್ದರು.