<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿಎಪಿ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ಆಂದೋಲನಕ್ಕೆ ಬುಧವಾರ ಜಿಲ್ಲಾಧಿಕಾರಿ ಸಂಗಪ್ಪ ಚಾಲನೆ ನೀಡಿದರು.</p>.<p>ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ಇಪ್ಕೋ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನ್ಯಾನೊ ತಂತ್ರಜ್ಞಾನ ಹೆಚ್ಚು ಪ್ರಚಲಿತದಲ್ಲಿದ್ದು, ಕೃಷಿಯಲ್ಲಿ ಅಳವಡಿಸಲಾಗುತ್ತಿದೆ. ಇದರ ಬಳಕೆಯಿಂದ ಮಣ್ಣನ್ನು ರಕ್ಷಿಸಿಕೊಳ್ಳಬಹುದು ಹಾಗೂ ಪರಿಸರ ಸ್ನೇಹಿಯಾಗಿದೆ ಎಂದರು.</p>.<p>ವ್ಯವಸಾಯದಲ್ಲಿ ಯೂರಿಯಾದ ಅತಿಯಾದ ಬಳಕೆಯಿಂದ ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಆಗುತ್ತದೆ. ನ್ಯಾನೊ ತಂತ್ರಜ್ಞಾನ ಕೃಷಿಯಲ್ಲಿ ಅಳವಡಿಸಲು ರೈತರು ಮುಂದಾಗಬೇಕಿದೆ ಎಂದು ಹೇಳಿದರು</p>.<p>ಡ್ರೋಣ್ ಮೂಲಕ ನ್ಯಾನೊ ಯೂರಿಯಾ ಸಿಂಪರಣೆ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಉಪಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ಉಪ ನಿರ್ದೇಶಕ ಎಲ್.ಐ.ರೂಡಗಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯಲ್ಲಿ ನ್ಯಾನೊ ಯೂರಿಯಾ ಹಾಗೂ ನ್ಯಾನೊ ಡಿಎಪಿ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ಆಂದೋಲನಕ್ಕೆ ಬುಧವಾರ ಜಿಲ್ಲಾಧಿಕಾರಿ ಸಂಗಪ್ಪ ಚಾಲನೆ ನೀಡಿದರು.</p>.<p>ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ಇಪ್ಕೋ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನ್ಯಾನೊ ತಂತ್ರಜ್ಞಾನ ಹೆಚ್ಚು ಪ್ರಚಲಿತದಲ್ಲಿದ್ದು, ಕೃಷಿಯಲ್ಲಿ ಅಳವಡಿಸಲಾಗುತ್ತಿದೆ. ಇದರ ಬಳಕೆಯಿಂದ ಮಣ್ಣನ್ನು ರಕ್ಷಿಸಿಕೊಳ್ಳಬಹುದು ಹಾಗೂ ಪರಿಸರ ಸ್ನೇಹಿಯಾಗಿದೆ ಎಂದರು.</p>.<p>ವ್ಯವಸಾಯದಲ್ಲಿ ಯೂರಿಯಾದ ಅತಿಯಾದ ಬಳಕೆಯಿಂದ ಮಣ್ಣಿನ ಆರೋಗ್ಯ, ಬೆಳೆ ಇಳುವರಿ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಆಗುತ್ತದೆ. ನ್ಯಾನೊ ತಂತ್ರಜ್ಞಾನ ಕೃಷಿಯಲ್ಲಿ ಅಳವಡಿಸಲು ರೈತರು ಮುಂದಾಗಬೇಕಿದೆ ಎಂದು ಹೇಳಿದರು</p>.<p>ಡ್ರೋಣ್ ಮೂಲಕ ನ್ಯಾನೊ ಯೂರಿಯಾ ಸಿಂಪರಣೆ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಉಪಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ಉಪ ನಿರ್ದೇಶಕ ಎಲ್.ಐ.ರೂಡಗಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>