<p><strong>ಬಾಗಲಕೋಟೆ</strong>: ‘ಲೋಕದ ಆಕರ್ಷಣೆಗಳಿಗೆ ಒಳಗಾಗದೇ ಜ್ಞಾನ ವಿಕಾಸದ ಕಡೆಗೆ ಗಮನ ಹರಿಸಬೇಕು’ ಎಂದು ಚಿಕ್ಕಾಲಗುಂಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಕೆ. ಬಂಗಾರಿ ಹೇಳಿದರು.</p>.<p>ತಾಲ್ಲೂಕು ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ, ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಳೇಜಿನ ಸಹಯೋಗದಲ್ಲಿ ಸಿದ್ಧಲಿಂಗಪ್ಪ ವಂಕಲಕುಂಟಿ ಇವರ ಸ್ಮರಣಾರ್ಥ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಶಿವಶರಣರ ವಚನಗಳು ಇಂದಿಗೂ ಪ್ರಸ್ತುತ’ ವಿಷಯದ ಕುರಿತು ಮಾತನಾಡಿದರು.</p>.<p>‘ಈ ಭೂಮಿ, ಸೂರ್ಯ, ಚಂದ್ರರಿರುವವರೆಗೆ ವಚನ ಸಾಹಿತ್ಯ ಪ್ರಸ್ತುತವಾಗಿರುತ್ತದೆ. “ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನವೆ ಬೀಜ” ಎಂಬ ಅಕ್ಕಮಹಾದೇವಿಯವರ ವಚನದಿಂದ ಪ್ರೇರಿತರಾಗಿ ವಿದ್ಯಾರ್ಥಿನಿಯರು ಮನಸ್ಸಿನ ಮೇಲೆ ನಿಯಂತ್ರಣ ಹೊಂದಬೇಕು. ಸಾಧನೆಗೆ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಎಸ್. ಜೆ. ಒಡೆಯರ ಮಾತನಾಡಿ, ವಚನ ಸಾಹಿತ್ಯ ಮನಸ್ಸನ್ನು ಸಶಕ್ತಗೊಳಿಸುವ ಸಾಹಿತ್ಯವಾಗಿದೆ. ವಚನ ಸಾಹಿತ್ಯವನ್ನು ಅಭ್ಯಸಿಸುವುದರಿಂದ ಜ್ಞಾನವೃದ್ಧಿಯಾಗಿ, ಜೀವನ ಪರಿವರ್ತನೆಯಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಎ.ಎಸ್. ಪಾವಟೆ ಮಾತನಾಡಿದರು. ದತ್ತಿದಾನಿಗಳಾದ ಅನ್ನಪೂರ್ಣಮ್ಮ ವಂಕಲಕುಂಟಿ, ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ಎಸ್.ಎಚ್, ಶೆಟ್ಟರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಲೋಕದ ಆಕರ್ಷಣೆಗಳಿಗೆ ಒಳಗಾಗದೇ ಜ್ಞಾನ ವಿಕಾಸದ ಕಡೆಗೆ ಗಮನ ಹರಿಸಬೇಕು’ ಎಂದು ಚಿಕ್ಕಾಲಗುಂಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಕೆ. ಬಂಗಾರಿ ಹೇಳಿದರು.</p>.<p>ತಾಲ್ಲೂಕು ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ, ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಳೇಜಿನ ಸಹಯೋಗದಲ್ಲಿ ಸಿದ್ಧಲಿಂಗಪ್ಪ ವಂಕಲಕುಂಟಿ ಇವರ ಸ್ಮರಣಾರ್ಥ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಶಿವಶರಣರ ವಚನಗಳು ಇಂದಿಗೂ ಪ್ರಸ್ತುತ’ ವಿಷಯದ ಕುರಿತು ಮಾತನಾಡಿದರು.</p>.<p>‘ಈ ಭೂಮಿ, ಸೂರ್ಯ, ಚಂದ್ರರಿರುವವರೆಗೆ ವಚನ ಸಾಹಿತ್ಯ ಪ್ರಸ್ತುತವಾಗಿರುತ್ತದೆ. “ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನವೆ ಬೀಜ” ಎಂಬ ಅಕ್ಕಮಹಾದೇವಿಯವರ ವಚನದಿಂದ ಪ್ರೇರಿತರಾಗಿ ವಿದ್ಯಾರ್ಥಿನಿಯರು ಮನಸ್ಸಿನ ಮೇಲೆ ನಿಯಂತ್ರಣ ಹೊಂದಬೇಕು. ಸಾಧನೆಗೆ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಎಸ್. ಜೆ. ಒಡೆಯರ ಮಾತನಾಡಿ, ವಚನ ಸಾಹಿತ್ಯ ಮನಸ್ಸನ್ನು ಸಶಕ್ತಗೊಳಿಸುವ ಸಾಹಿತ್ಯವಾಗಿದೆ. ವಚನ ಸಾಹಿತ್ಯವನ್ನು ಅಭ್ಯಸಿಸುವುದರಿಂದ ಜ್ಞಾನವೃದ್ಧಿಯಾಗಿ, ಜೀವನ ಪರಿವರ್ತನೆಯಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಎ.ಎಸ್. ಪಾವಟೆ ಮಾತನಾಡಿದರು. ದತ್ತಿದಾನಿಗಳಾದ ಅನ್ನಪೂರ್ಣಮ್ಮ ವಂಕಲಕುಂಟಿ, ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ಎಸ್.ಎಚ್, ಶೆಟ್ಟರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>